Leopard: ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಚಿರತೆ… ಪ್ರವಾಸಿಗರಲ್ಲಿ ಆತಂಕ


Team Udayavani, Jul 9, 2024, 1:16 PM IST

Leopard: ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಚಿರತೆ… ಪ್ರವಾಸಿಗರಲ್ಲಿ ಆತಂಕ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಪದೇ, ಪದೇ ಕಾಣಿಸಿಕೊಳ್ಳುವ ಚಿರತೆ, ಕರಡಿಗಳಿಂದ ದೇಶ-ವಿದೇಶಿ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದ್ದು, ಪ್ರಾಣಿಗಳು ದಾಳಿ ನಡೆಸುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹೌದು! ಇತ್ತೀಚಿಗೆ ಉಗ್ರನರಸಿಂಹ ಸ್ಮಾರಕದ ಬಳಿ ಕರಡಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಹೇಮಕೂಟದ ಬಳಿ ಇರುವ ಬೆಟ್ಟದ ತುದಿಯಲ್ಲಿ ಸೋಮವಾರ ಸಂಜೆ ಚಿರತೆ ಪ್ರತ್ಯಕ್ಷವಾಗಿದ್ದು, ಹಂಪಿಯಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ.

ಕರಿಗಾಹಿ ಮೇಲೆ ದಾಳಿ:
ಆಗಾಗ ಹಂಪಿಯ ಕೋರಿಗುಡ್ಡ, ರತ್ನಕೂಟದ ಬಳಿ ಕಾಣಿಸಿಕೊಳ್ಳುವ ಚಿರತೆ, ಕೋವಿಡ್ ಸಮಯದಲ್ಲಿ ಋಷಿಮುಖ ಪರ್ವತದಲ್ಲಿ ಓರ್ವ ಕುರಿಗಾಹಿ ಯುವಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಪ್ರವಾಸಿಗರನ್ನು ಬೆಚ್ಚಿಬೇಳಿಸಿತ್ತು. ಈಗ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಪ್ರವಾಸಿಗರು ಭಯದ ನೆರಳಿನಲ್ಲಿ ತಿರುಗಾಡುವಂತಾಗಿದೆ.

ಎಚ್‌ಪಿಸಿಯಲ್ಲಿ ಮತ್ತೆ ಚಿರತೆ:
ಕಳೆದ ೪೫ ತಿಂಗಳ ಹಿಂದೆಷ್ಟೆ ಕಮಲಾಪುರ ಎಚ್‌ಪಿಸಿ ಕ್ಯಾಂಪ್‌ನಲ್ಲಿ ಕಾಣಿಸಿಕೊಂಡ ಚಿರತೆಯನ್ನು ಅರಣ್ಯ ಇಲಾಖೆ ಬೋನಿನಲ್ಲಿ ಸೆರೆ ಹಿಡಿದಿತ್ತು. ಪುನಃ ಇದೀಗ ಕ್ಯಾಂಪ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಭಯದ ವಾತವರಣ ನಿರ್ಮಾಣವಾಗಿದೆ. ಶತಶತಮಾನಗಳಿಂದ ಹಂಪಿ ಪರಿಸರದಲ್ಲಿ ಚಿರತೆ, ಕರಡಿ ಸೇರಿದಂತೆ ಇತರೆ ಪ್ರಾಣಿಗಳು ವಾಸ ಮಾಡುತ್ತಿವೆ. ಮಳೆಗಾಲವಾದ್ದರಿಂದ ಗುಹೆಯಿಂದ ಚಿರತೆಗಳು ಹೊರ ಬರುತ್ತಿವೆ. ನಸುಕಿನಲ್ಲಿ ಮತ್ತು ಸಂಜೆ ಹೊತ್ತಿನಲ್ಲಿ ಹೆಚ್ಚಾಗಿ ಹೊರ ಬಂದು ಜನರ ಕಣ್ಣಿಗೆ ಬೀಳುತ್ತಿವೆ.

ಎಚ್ಚರ:
ಅದರಲ್ಲಿಯೂ ಮಾತಂಗ ಪರ್ವತ, ಚಿರತೆ, ಕರಡಿಗಳ ಅವಾಸ ಸ್ಥಾನವಾಗಿದೆ. ಸೂರ್ಯೋದಯ, ಸೂರ್ಯಸ್ತ ವೀಕ್ಷಣೆಗೆ ಪ್ರವಾಸಿಗರು, ಪರ್ವತ ಶ್ರೇಣಿಯಲ್ಲಿ ಫೋಟೋ ತೆಗೆಯಲು, ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ನಿತ್ಯ ತೆರವುದು ವಾಡಿಕೆ. ಈ ಜಾಗಕ್ಕೆ ತೆರಳುವ ಮುನ್ನ ಪ್ರವಾಸಿಗರು ಎಚ್ಚರ ವಹಿಸುವುದು ಸೂಕ್ತ. ಮಾತಂಗ ಪರ್ವತ ಹಿಂಬದಿಯಲ್ಲಿ ಮೆಟ್ಟಿಲು(ತುರ್ತು ಕಾಲುವೆ) ಮೂಲಕ ತೆರಳುವ ಪ್ರವಾಸಿಗರು ತುಂಬಾ ಎಚ್ಚರದಿಂದ ಇರಬೇಕಿದೆ. ಈ ಜಾಗದಲ್ಲಿ ಕರಡಿ-ಚಿರತೆಗಳು ತಿರುಗಾಡುತ್ತಿವೆ. ಅನೇಕ ಬಾರಿ ಚಿರತೆ, ಕರಡಿಗಳ ಸೆಗಣಿ ದಾರಿಯಲ್ಲಿ ಬಿದ್ದಿರುವುದನ್ನು ಸ್ಥಳೀಯರು ಕಂಡಿದ್ದಾರೆ.

ಗುಂಪಾಗಿ ಇರಿ:
ಹಂಪಿ ಸಮೀಪವೇ ಕರಡಿಧಾಮ ಇರುವುದರಿಂದ ಕರಡಿ, ಚಿರತೆ ಸೇರಿದಂತೆ ಆಹಾರ ಹುಡುಕಿಕೊಂಡು ಜನವಸತಿ ಪ್ರದೇಶಕ್ಕೆ ಬರುವುದು ವಾಡಿಕೆಯಾಗಿದೆ.ಪ್ರವಾಸಿಗರು, ಗುಂಪು, ಗುಂಪಾಗಿ ತೆರಳವುದು ಸೂಕ್ತ. ಅದರಲ್ಲಿ ಮಕ್ಕಳನ್ನು ಒಬ್ಬಂಟಿಯಾಗಿ ಬಿಡುವುದು ಸರಿಯಲ್ಲ. ಸಣ್ಣ ಮಕ್ಕಳನ್ನು ಚಿರತೆಗಳು ಹೆಚ್ಚಾಗಿ ದಾಳಿ ಮಾಡುತ್ತವೆ. ಆಹಾರ ಪದಾರ್ಥಗಳನ್ನು ತಿನ್ನಲು ಸಹ ಕರಡಿಗಳು ಬರುತ್ತಿವೆ.

ಬೀಳಲಿ ಕಡಿವಾಣ:
ಮಾತಂಗ ಪರ್ವತ ಪ್ರದೇಶಕ್ಕೆ ತೆರಳುವ ಪ್ರವಾಸಿಗರಿಗಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮಯದ ನಿಗದಿ ಮಾಡಬೇಕು. ಪರ್ವತ ಪ್ರದೇಶಲ್ಲಿ ಸುರಕ್ಷತೆ ಕ್ರಮಗಳನ್ನು ಕೈಗೊಂಡು, ಭದ್ರತೆ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂಬುದು ವನ್ಯ ಜೀವಿ ಪ್ರೇಮಿಗಳ ಅಭಿಪ್ರಾಯ.

ಅರಣ್ಯ ಇಲಾಖೆ ನಿಗಾ:
ಅರಣ್ಯ ಇಲಾಖೆ ಸಹ ಜನವಸತಿ ಪ್ರದೇಶಕ್ಕೆ ಬರುತ್ತಿರುವ ಕಾಡು ಪ್ರಾಣಿಗಳ ಬಗ್ಗೆ ನಿಗಾವಹಿಸಿದೆ. ಕೆಲವಡೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಪ್ರಾಣಿಗಳ ಜಾಡು ಪರಿಶೀಲಿಸಿ, ಮಾನವ-ಪ್ರಾಣಿ ಸಂಘರ್ಷವಾಗದಂತೆ ಕ್ರಮ ವಹಿಸಿದೆ. ಸದ್ಯ ಹಂಪಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಚಿರತೆ, ಕರಡಿಗಳ ಜಾಡು ತಿಳಿಯಲು ಪೆಟ್ರೋಲಿಂಗ್ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆಗೆ 60 ಎಕರೆ ಜಮೀನು ಹಂಚಿಕೆ: ಜಿಗಜಿಣಗಿ ಆರೋಪ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.