ಕುಡಿಯುವ ನೀರು ಪೂರೈಕೆಗೆ ಆಗ್ರಹ
Team Udayavani, Jun 25, 2020, 3:49 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮರಿಯಮ್ಮನಹಳ್ಳಿ: ಪಟ್ಟಣದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಸಿಗದೇ ಜನ ಪರಿತಪಿಸುತ್ತಿದ್ದಾರೆ. ತುಂಗಭದ್ರಾ ನದಿ ಅಣೆಕಟ್ಟಿಗಾಗಿ ಊರುಗಳನ್ನೇ ತೊರೆದು ಬಂದ ನಮ್ಮ ಜನ ನದಿ ನೀರಿನಿಂದ ವಂಚಿತರಾಗಿದ್ದಾರೆ. ಆದರೆ ಪಾವಗಢ ತಾಲೂಕಿನ ಬಹುಗ್ರಾಮಗಳಿಗೆ ನದಿ ನೀರನ್ನು ಪೂರೈಸುವ ಯೋಜನೆ ಆರಂಭವಾಗುತ್ತಿದೆ. ಮರಿಯಮ್ಮನಹಳ್ಳಿ ಪಟ್ಟಣದ ಜನತೆಗೂ ಕುಡಿಯುವ ನೀರು ಒದಗಿಸಬೇಕು ಎಂದು 114 ಡಣಾಪುರ ಕ್ಷೇತ್ರದ ಜಿಪಂ ಸದಸ್ಯೆ ರೇಖಾ ಪೂಜಾರ್ ಆಗ್ರಹಿಸಿದ್ದಾರೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ಸಿಂಗ್ಗೆ ಮನವಿ ಸಲ್ಲಿಸಿದ್ದಾರೆ. ಮರಿಯಮ್ಮನಹಳ್ಳಿ ಪಟ್ಟಣದಲ್ಲಿ 18 ವಾರ್ಡ್ಗಳಿದ್ದು ಸುಮಾರು 25 ಸಾವಿರ ಜನಸಂಖ್ಯೆ ಇದೆ. ಈಗಿರುವ ಹನುಮನಹಳ್ಳಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಸಮರ್ಪಕ ಕುಡಿಯುವ ನೀರನ್ನು ಒದಗಿಸಲಾಗುತ್ತಿಲ್ಲ. ಹೆಚ್ಚಾದ ಜನಸಂಖ್ಯೆಗನುಗುಣವಾಗಿ ಮರಿಯಮ್ಮನಹಳ್ಳಿ ಪಟ್ಟಣಕ್ಕೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಾಂಕೇತಿಕ ಪ್ರತಿಭಟನೆ: ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜೊತೆಗೇ ಮರಿಯಮ್ಮನಹಳ್ಳಿ ಪಟ್ಟಣಕ್ಕೂ ಕುಡಿಯುವ ನೀರಿನ ಯೋಜನೆ ಒದಗಿಸಿಕೊಡಲು ಒತ್ತಾಯಿಸಿ ಜೂ.25 ರಂದು ಪಟ್ಟಣದ ನಾಣಿಕೆರೆ ವೃತ್ತದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಪೂಜಾರ್ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ ಗೆ ಹಾಜರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.