ಬಹುಮತವಿದ್ದರೂ ‘ ಕೈಯಲ್ಲಿ ಮೂಡದ ಒಮ್ಮತ ‘

ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆ ಇಂದು

Team Udayavani, Mar 19, 2022, 12:33 PM IST

mayer

 ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ 10 ತಿಂಗಳ ಬಳಿಕ ನಿಗದಿಯಾಗಿರುವ ಮೇಯರ್‌, ಉಪಮೇಯರ, ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ಮಾ.19 ರಂದು ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. ಆದರೆ, ಬಹುಮತವುಳ್ಳ ಕಾಂಗ್ರೆಸ್‌ ಪಕ್ಷದಲ್ಲಿ ಮೇಯರ್‌ ಆಯ್ಕೆಗೆ ಆಕಾಂಕ್ಷಿಗಳಲ್ಲಿ ಪೈಪೋಟಿ ಏರ್ಪಟ್ಟಿದ್ದು, ಒಮ್ಮತ ಮೂಡದಿರುವುದು ಕುತೂಹಲ ಮೂಡಿಸಿದೆ.

ಆಪರೇಷನ್‌ ಕಮಲ ಭೀತಿಯಿಂದಾಗಿ ಕಾಂಗ್ರೆಸ್‌ನ 21, ಕಾಂಗ್ರೆಸ್‌ ಬಂಡಾಯ ಪಕ್ಷೇತರ 4 ಸೇರಿ 25 ಸದಸ್ಯರು ಮಾ.16 ರಂದು ಬೆಂಗಳೂರಿನ ರೆಸಾರ್ಟ್‌ಗೆ ತೆರಳಿದ್ದಾರೆ. ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ, ಕಾರ್ಯದರ್ಶಿ ಮಂಜುನಾಥ್‌, ವೀಕ್ಷಕ ಯು.ಟಿ. ಖಾದರ್‌ ಅವರು ಗುರುವಾರ, ಶುಕ್ರವಾರ ಎರಡು ದಿನಗಳ ಕಾಲ ಪಾಲಿಕೆ ಸದಸ್ಯರು, ಶಾಸಕರು, ಜಿಲ್ಲೆಯ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಈ ವೇಳೆ 3ನೇ ವಾರ್ಡ್‌ನ ಕಾಂಗ್ರೆಸ್‌ ಬಂಡಾಯ, ಪಕ್ಷೇತರ ಸದಸ್ಯ ಮುಂಡೂರು ಪ್ರಭಂಜನ್‌ ಕುಮಾರ್‌ ಸೇರಿ ಹಲವರು ಕೆಲ ಹೆಸರುಗಳನ್ನು ಸೂಚಿಸಿದ್ದಾರೆ. ಆದರೆ, ಅಂತಿಮವಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರು ವರ್ಸಸ್‌ ಸದಸ್ಯರು

ಪಾಲಿಕೆ ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಹಿಂದಿನ ಮೀಸಲಾತಿಯಂತೆ ಮೇಯರ್‌ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ 18ನೇ ವಾರ್ಡ್‌ನ ಮುಲ್ಲಂಗಿ ನಂದೀಶ್‌ ಕುಮಾರ್‌ ಬೆಂಬಲಿತ 13ಕ್ಕೂ ಹೆಚ್ಚು ಸದಸ್ಯರನ್ನು ಹಿಡಿದಿಟ್ಟುಕೊಂಡಿದ್ದರು. ಆದರೆ, ಬದಲಾದ ಮೀಸಲಾತಿಯಿಂದ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರಿಂದ ನಂದೀಶ್‌ ಮೇಯರ್‌ ಸ್ಥಾನವನ್ನು ಕೈಬಿಟ್ಟರಾದರೂ, ಬೆಂಬಲಿತ 13 ಸದಸ್ಯರನ್ನು ಮಾತ್ರ ಬಿಡದೆ ಹಿಡಿದಿಟ್ಟುಕೊಂಡಿದ್ದಾರೆ. ನಂದೀಶ್‌ ಗುಂಪು ಸೂಚಿತ ಅಭ್ಯರ್ಥಿಗಳನ್ನು ಮೇಯರ್‌ ನ್ನಾಗಿ ಆಯ್ಕೆ ಮಾಡುವಂತೆ ಪಟ್ಟುಹಿಡಿದಿರುವ ಅವರು, 6ನೇ ವಾರ್ಡ್‌ನ ಪದ್ಮರೋಜಾ ವಿವೇಕಾನಂದ, 26ನೇ ವಾರ್ಡ್‌ನ ಸುಕುಂ (ಅಯಾಜ್‌) ಮತ್ತು 37ನೇ ವಾರ್ಡ್‌ನ ಮಾಲನ್‌ ಬೀ ಅವರನ್ನು ಮತ್ತು ಉಪಮೇಯರ್‌ ಸ್ಥಾನಕ್ಕೆ 18ನೇ ವಾರ್ಡ್‌ನ ಮುಲ್ಲಂಗಿ ನಂದೀಶ್‌ ಕುಮಾರ್‌, 23ನೇ ವಾರ್ಡ್‌ನ ಪಿ.ಗಾದೆಪ್ಪ, 20ನೇ ವಾರ್ಡ್‌ನ ಪೇರಂ ವಿವೇಕ್‌, 27ನೇ ವಾರ್ಡ್ ನಿಯಾಜ್‌ ಅಹ್ಮದ್‌ ಹೆಸರುಗಳನ್ನು ವೀಕ್ಷಕರ ಬಳಿ ಶಿಫಾರಸ್ಸು ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಮುಂದಿನ 2023ರ ರಾಜ್ಯ ವಿಧಾನಸಭೆ ಚುನಾವಣೆ ಗುರಿಯಾಗಿಸಿಕೊಂಡಿರುವ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು, ಸಹ 34ನೇ ವಾರ್ಡ್‌ನ ರಾಜೇಶ್ವರಿ ಸುಬ್ಬರಾಯುಡು, 28ನೇ ವಾರ್ಡ್‌ನ ಮುಬೀನಾ ಬೀ ಅವರ ಹೆಸರುಗಳನ್ನು ಮೇಯರ್‌ ಸ್ಥಾನಕ್ಕೆ ಶಿಫಾರಸ್ಸು ಮಾಡಿದ್ದಾರೆ. ಮೇಯರ್‌ ಆಯ್ಕೆ ವಿಷಯದಲ್ಲಿ ಅತ್ಯಂತ ಸೂಕ್ಷ್ಮವಾಗಿ ಹೆಜ್ಜೆ ಇಡುತ್ತಿರುವ ಶಾಸಕ ನಾಗೇಂದ್ರ, ಮುಸ್ಲಿಂ ಸಮುದಾಯಕ್ಕೆ ಮೇಯರ ಇಲ್ಲವೇ ಉಪಮೇಯರ್‌ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಮೇಯರ್‌ ಮಾಡಿದರೆ ಉತ್ತಮ ಎಂದು ವೀಕ್ಷಕರಲ್ಲಿ ಕೋರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಎರಡೂ ಗುಂಪುಗಳ ಅಭಿಪ್ರಾಯ ಸಂಗ್ರಹಿಸಿರುವ ಪಕ್ಷದ ವರಿಷ್ಠರು ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡದೆ ಗೌಪ್ಯವಾಗಿಟ್ಟಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಅಥವಾ ಶನಿವಾರ ಬೆಳಗ್ಗೆ 8 ಗಂಟೆಗೆ ಅಧಿಕೃತ ಅಭ್ಯರ್ಥಿಗಳ ಹೆಸರುಗನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕಂಟಕವಾದ ಹಿಜಾಬ್‌

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಮೇಯರ್‌ ಸ್ಥಾನಕ್ಕಾಗಿ ಮೊದಲ ಬಾರಿಗೆ ತೀವ್ರ ಪೈಪೋಟಿ ನೀಡುತ್ತಿರುವ ಮುಸ್ಲಿಂ ಸಮುದಾಯಕ್ಕೆ ಹಿಜಾಬ್‌ ವಿವಾದ ಕಂಟಕವಾಗಿ ಪರಿಣಮಿಸುವ ಸಾಧ್ಯತೆಯಿದೆ. ಕಾಂಗ್ರೆಸ್‌ ಮುಸಲ್ಮಾನರನ್ನು ಓಲೈಸುತ್ತದೆ. ಅವರನ್ನು ಮತಬ್ಯಾಂಕಾಗಿ ಮಾಡಿಕೊಂಡಿದೆ ಎಂಬ ಆರೋಪಗಳಿವೆ. ರಾಜ್ಯದೆಲ್ಲೆಡೆ ಹಿಜಾಬ್‌ ವಿವಾದ ಬೇರೆಯಿದೆ. ಕಾಶ್ಮೀರಿ ಫೈಲ್ಸ್‌ ಚಿತ್ರದಲ್ಲೂ ಕಾಂಗ್ರೆಸ್‌ ಪಕ್ಷದ ಮೇಲೆ ಹಲವು ಟೀಕೆಗಳಿದ್ದು, ಯುವ ಸಮೂಹ ಕಾಂಗ್ರೆಸ್‌ ಮೇಲೆ ಅಸಮಾಧಾನ ಹೊರ ಹಾಕುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬರುತ್ತಿದೆ. ಇಂತಹ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೇಯರ್‌ ಸ್ಥಾನ ನೀಡಿದಲ್ಲಿ ಕಾಂಗ್ರೆಸ್‌ ಬೆಂಬಲಿತ ಹಿಂದು ಮತಗಳು ಇನ್ನಷ್ಟು ವಿಮುಖವಾಗುವ ಸಾಧ್ಯತೆಯಿದೆ ಎಂದು ಹಲವು ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರಂತೆ. ಆದರೆ, ಅಂತಿಮವಾಗಿ ಪಕ್ಷದ ವರಿಷ್ಠರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ವಿಪ್‌ ಜಾರಿ

ಆಪರೇಷನ್‌ ಕಮಲ ಭೀತಿಯಿಂದ ಬೆಂಗಳೂರಿನ ರೆಸಾರ್ಟ್‌ ಸೇರಿರುವ ಕಾಂಗ್ರೆಸ್‌ನ ಪಾಲಿಕೆ ಸದಸ್ಯರೆಲ್ಲರೂ, ಮೇಯರ್‌ ಚುನಾವಣೆ ಹಿನ್ನೆಲೆ ಶುಕ್ರವಾರ ರಾತ್ರಿ ವಾಪಸ್‌ ಬಳ್ಳಾರಿಗೆ ಬರಲಿದ್ದಾರೆ. ನಗರ ಹೊರವಲಯದ ಅಲ್ಲಂ ಭವನದಲ್ಲಿ ಕೆಲಹೊತ್ತು ತಂಗಲಿದ್ದಾರೆ. ಬೆಳಗ್ಗೆ ಎಲ್ಲರಿಗೂ ಪಕ್ಷ ಸೂಚಿಸುವ ಮೇಯರ್‌-ಉಪಮೇಯರ್‌ ಅಭ್ಯರ್ಥಿಗಳಿಗೆ ಮತ ನೀಡುವಂತೆ ವಿಪ್‌ ಜಾರಿಗೊಳಿಸಿ ನೇರವಾಗಿ ಪಾಲಿಕೆ ಕಚೇರಿಗೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಚುನಾವಣೆ

ಇಲ್ಲಿನ ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಸ್ಥಾನಕ್ಕೆ ಮಾ.19 ರಂದು ಚುನಾವಣೆ ನಡೆಯಲಿದೆ. 39 ಸದಸ್ಯ ಸ್ಥಾನಗಳಲ್ಲಿ ಕಾಂಗ್ರೆಸ್‌ 21, ಕಾಂಗ್ರೆಸ್‌ ಬಂಡಾಯ ಪಕ್ಷೇತರ 5, ಬಿಜೆಪಿ 13 ಸದಸ್ಯರಿದ್ದು, ಕಾಂಗ್ರೆಸ್‌ ಬಹುಮತ ಸಾಧಿಸಿದೆ. ಬೆಳಗ್ಗೆ 10 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಿದೆ. ಆನಂತರ ಅವುಗಳ ಪರಿಶೀಲನೆ, ಹಿಂದಕ್ಕೆ ಪಡೆಯಲು ಕಾಲಾವಕಾಶ ನೀಡಿ. ಅಗತ್ಯ ಬಿದ್ದರೆ ಮಧ್ಯಾಹ್ನ 12:30 ರಿಂದ ಸಭೆ ನಡೆಸಿ ಮೇಯರ್‌-ಉಪಮೇಯರ್‌ ಆಯ್ಕೆಗೆ ಮತದಾನದ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತಮುತ್ತ 500 ಮೀಟರ್‌ ನಿಷೇದಾಜ್ಞೆ ಜಾರಿಗೊಳಿಸಿದೆ.

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.