ಮಿಷನ್ 150 ಸಂಕಲ್ಪ
2023ರ ಚುನಾವಣೆಗೆ ರಣಕಹಳೆ
Team Udayavani, Apr 18, 2022, 1:02 PM IST
ಬಳ್ಳಾರಿ: 2023ರ ವಿಧಾನಸಭೆ ಚುನಾವಣೆಗೆ ವಿಜಯನಗರ ನೆಲದಲ್ಲಿ “ಮಿಷನ್ 150′ ಕಹಳೆ ಮೊಳಗಿಸಿರುವ ಬಿಜೆಪಿ, ಇದಕ್ಕೆ ಬೇಕಾದ ಸಕಲ ತಯಾರಿಗೂ ಸಲಹೆ- ಸೂಚನೆ ನೀಡಿದೆ. ಮತದಾರರನ್ನು ಹೇಗೆ ತಲುಪಬೇಕೆಂಬ ದಾರಿಯನ್ನೂ ಕಂಡುಕೊಂಡಿದೆ!
ಹೊಸಪೇಟೆ ನಗರದ ಭಟ್ರಳ್ಳಿ ಆಂಜನೇಯ ದೇವಸ್ಥಾನ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ, ಅಭಿವೃದ್ಧಿ ಪರವಾದ ಚಿಂತನೆ ನಡೆಸುವುದರ ಜತೆಗೆ ವಿಪಕ್ಷದ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲವಾದ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಖಂಡಿಸಲಾಯಿತು.
ಮುಂದಿನ 2023ರ ಚುನಾ ವಣೆಗೆ ರೂಪಿಸಬೇಕಾದ ಸಿದ್ಧತಾ ಕಾರ್ಯತಂತ್ರಗಳು, ಇನ್ನಿತರೆ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಪ್ರಧಾನಿ ನರೇಂದ್ರ ಮೋದಿ ಈಚೆಗೆ ನಡೆದ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅಲ್ಲಿ ಚುನಾವಣೆ ಎದುರಿ ಸಲು ಮಾಡಿಕೊಂಡಿದ್ದ ತಂತ್ರಗಾರಿಕೆ ಮತ್ತು ಅಭಿವೃದ್ಧಿ ಕಾರ್ಯಗಳಿಂದಲೇ ಗೆಲುವು ಸಾಧ್ಯ ಎಂಬ ಸಂದೇಶ ರವಾನಿಸಲಾಯಿತು.
ವಿಪಕ್ಷಗಳ ವಿರೋಧವಿ ದ್ದರೂ ಅದನ್ನು ಸಕಾರಾತ್ಮಕವಾಗಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಗಿದ್ದು, ಉಕ್ರೇನ್ ಯುದ್ಧ ಭೂಮಿಯಿಂದ 22 ಸಾವಿರ ಜನರನ್ನು ಭಾರತಕ್ಕೆ ಕರೆತರುವುದರ ಜತೆಗೆ ಮೃತಪಟ್ಟ ಏಕೈಕ ವಿದ್ಯಾರ್ಥಿಯ ಮೃತದೇಹವನ್ನು ಸಹ ಭಾರತಕ್ಕೆ ತಂದು ಕುಟುಂಬಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾದ ಮೋದಿ ಕಾರ್ಯ ಅಭಿನಂದಿಸಲಾಯಿತು.
ದೇಶ ಸೇರಿ ರಾಜ್ಯದಲ್ಲಿ ಕಾಂಗ್ರೆಸ್ ಸೃಷ್ಟಿಸುತ್ತಿರುವ ಗೊಂದಲದ ವಾತಾವರಣ, ಓಲೈಕೆ ರಾಜಕಾರಣ, ಅಲ್ಪಸಂಖ್ಯಾತರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸುತ್ತಿರುವುದಕ್ಕೆ ಖಂಡನೆ ವ್ಯಕ್ತವಾಯಿತು. ಮುಂದಿನ ಚುನಾವಣೆಗೆ ನಮ್ಮ ಸಿದ್ಧತೆ, ಕಾರ್ಯತಂತ್ರ ಗಳು ಹೇಗಿರಬೇಕು. ಯಾವ ರೀತಿ ಚುನಾವಣೆಗಳನ್ನು ಗೆಲ್ಲಬೇಕು. ಬೂತ್ ಮಟ್ಟದ ಕಾರ್ಯಕರ್ತರನ್ನು ಗುರುತಿಸಬೇಕು. ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಿ, ಅವರೆಲ್ಲರನ್ನೂ ತೃಪ್ತಿ ಪಡಿಸುವ ಕೆಲಸ ಮಾಡಿದರೆ ಮಾತ್ರ ನಮಗೆ ಗೆಲುವು.
ಇಲ್ಲದಿದ್ದಲ್ಲಿ ನಮ್ಮನ್ನು ತಿರಸ್ಕರಿಸಬಹುದು. ಆ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜನರ ಪ್ರೀತಿ-ವಿಶ್ವಾಸ ಗಳಿಸುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂಬ ಸಂದೇಶ ರವಾನಿಸಿ ಸಂಕಲ್ಪ ತೊಡುವ ಮೂಲಕ ಕಾರ್ಯಕಾರಿಣಿ ಸಭೆಯನ್ನು ಕೊನೆಗೊಳಿಸಲಾಯಿತು.
ಎರಡು ದಿನಗಳ ಕಾಲ ನಡೆದ ಕಾರ್ಯಕಾರಣಿ ಸಭೆಗೆ ಕಾರ್ಯಕರ್ತರು ಅತ್ಯಂತ ಹುಮ್ಮಸ್ಸಿನಿಂದ ಕೈಜೋಡಿಸಿದರು. ಪಕ್ಷದ ಹಿರಿಯ ಮುಖಂಡರ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದ ಕಾರ್ಯಕರ್ತರು, ಗುರುತಿನ ಚೀಟಿಯಿಲ್ಲದೆ ಯಾರೇ ಕಂಡರೂ, ತಾವ್ಯಾರು? ಐಡಿ ಕಾರ್ಡ್ ಇಲ್ಲ ಎಂದು ಪ್ರಶ್ನಿಸುತ್ತಿದ್ದರು. ಕಾರ್ಯಕಾರಣಿ ಸಭೆಯೊಳಗೆ ಅಪೇಕ್ಷಿತ ವ್ಯಕ್ತಿಗಳನ್ನು ಹೊರತುಪಡಿಸಿ, ಪಕ್ಷದ ಕಾರ್ಯಕರ್ತರು ಸೇರಿ ಯಾರೊಬ್ಬರನ್ನು ಸಹ ಒಳಗೆ ಬಿಡದೆ ತಡೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.