ಉಕ್ರೇನ್ ನಿಂದ ವಿದ್ಯಾರ್ಥಿಗಳನ್ನು ಕರೆತರುವ ವ್ಯವಸ್ಥೆಯಲ್ಲಿ  ಸರ್ಕಾರ ಎಡವಿದೆ: ಶಾಸಕ ಗಣೇಶ್


Team Udayavani, Mar 5, 2022, 5:18 PM IST

Untitled-1

ಕುರುಗೋಡು: ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿವೆ ಎಂದು ಶಾಸಕ ಜೆ. ಎನ್. ಗಣೇಶ್ ಸರಕಾರದ ವಿರುದ್ಧ ಗುಡುಗಿದರು.

ಸಮೀಪದ ದಮ್ಮೂರು ಗ್ರಾಮದ ಕಾರ್ಯಕರ್ತರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಊಟದ ವ್ಯವಸ್ಥೆ ಇಲ್ಲದೆ ಕೇವಲ ಚಿಪ್ಸ್, ಮಂಡಕ್ಕಿ ಇತರೆ ಆಹಾರಕ್ಕೂ ಪರದಾಡಬೇಕಾಗಿದೆ. ಈಗಾಗಲೇ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಆದರೂ ಸರಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲದಾಗಿದೆ.

ಒಂದು ಕಡೆ ನೋಡಿದರೆ ವಿದ್ಯಾರ್ಥಿಗಳನ್ನು ಕರೆತರುವ ವ್ಯವಸ್ಥೆ ಸರಕಾರ ಸಂಪೂರ್ಣ ಜವಾಬ್ದಾರಿ ವಹಿಸುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣದ ಖರ್ಚು ವೆಚ್ಚ ಕೂಡ ಬರಿಸಲಿದೆ ಎಂದು ಕೇವಲ ಪ್ರಚಾರಕ್ಕೆ, ಶೋಕಿಗೆ ಸೀಮಿತವಾಗಿದ್ದರೆ ಹೊರೆತು ಯಾವುದೇ ಇನ್ನೂ ಕಾರ್ಯ ರೂಪಕ್ಕೆ ತರುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚೋಚ್ಚಲ ಬಜೆಟ್ ಮಂಡಿಸಿದ್ದು, ರೈತರಿಗೆ ಖುಷಿ ಇಲ್ಲದಂತಾಗಿದೆ.

ಬಜೆಟ್ ನಲ್ಲಿ ರೈತರಿಗೆ ಯಾವುದೇ ಆದ್ಯತೆ ನೀಡಿಲ್ಲ, ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು ರೈತ ವಿರೋದಿಯಾಗಿ ಮಾರ್ಪಟ್ಟಿವೆ ಎಂದು ಬೇಸಾರ ವ್ಯಕ್ತಪಡಿಸಿದರು.

ಇನ್ನೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಶ್ರೀರಾಮುಲು ಅವರ ಮೇಲೆ ನಮಗೆ ಅಪಾರ ಗೌರವ ಇದೆ ಕ್ಷೇತ್ರದ ಬಹುದೊಡ್ಡ ಅಭಿವೃದ್ಧಿ ಕಾರ್ಯಗಳ ಭೂಮಿ ಪೂಜೆಗೆ ಆಗಮಿಸುತ್ತಾರೆ, ಆದರೂ ಕ್ಷೇತ್ರದ ಶಾಸಕರು ಸಮಯ ನಿಗದಿ ಮಾಡಿ ತಿಳಿಸಿದಾಗ ಬರಬೇಕು ಹೊರೆತು ಇನ್ಯಾರೋ ಮಾತು ಕೇಳಿ ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವುದು ಶೋಭೆಯಲ್ಲ ಎಂದು ತಿಳಿಸಿದರು.

ಇದಲ್ಲದೆ ಕ್ಷೇತ್ರಕ್ಕೆ ಬರುತ್ತಿರುವ ಅನುದಾನವನ್ನು ನನ್ನ ಅವಧಿಯಲ್ಲಿ ಮಂಜೂರು ಮಾಡಿಸಿದ ಅನುದಾನ ದ ಮೇಲೆ ಶಾಸಕರು ಭೂಮಿ ಪೂಜೆ ಮಾಡಿಸುತ್ತಿದ್ದಾರೆ. ಆದ್ದರಿಂದ ನನ್ನ ಅವಧಿಯಲ್ಲಿ ತಂದ ಅನುದಾನಕ್ಕೆ ನನ್ನ ಮಾವ ಶ್ರೀರಾಮುಲು ಅವರಿಂದ ಭೂಮಿ ಪೂಜೆ ಮಾಡಿಸುತ್ತೇನೆ ಎಂದು ಹೇಳುತ್ತಿದ್ದಾರೆ ಮಾಜಿ ಶಾಸಕ ಸುರೇಶ್ ಬಾಬು ಅವರು ಉಸ್ತುವಾರಿ ಮಂತ್ರಿಗಳನ್ನು ಮುಂದಿಟ್ಟು ಕೊಂಡು ರಾಜಕಾರಣ ಮಾಡುತ್ತಿದ್ದಾರೆ ಮಾಡಲಿ ಅವರು ದೊಡ್ಡವರು ಅವರ ಬಗ್ಗೆ ಮಾತನಾಡುವುದೇ ಬೇಡಾ ಎಂದು ಪತ್ರಕರ್ತರು ಕೇಳಿದ ಪ್ರೆಶ್ನೆಯಿಂದ ಸಲೀಸಾಗಿ ಜಾರಿಕೊಂಡರು.

ಇನ್ನೂ ಈಗಾಗಲೇ ಚಾನಾಳು ಗ್ರಾಮದಲ್ಲಿ 10 ವರ್ಷಗಳ ಬೇಡಿಕೆಯಾಗಿದ್ದ ಶಾಲೆ ಕೊಠಡಿಗೆ ಭೂಮಿ ಪೂಜೆ ನೆರೆವೇರಿಸಲಾಗಿದೆ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದರು.

ಬೇಸಿಗೆ ಸಮೀಪಸುತ್ತಿರುವ ಹಿನ್ನಲೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಒತ್ತು ನೀಡಿ ಬಗೆಹರಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.