Siruguppa ಭಾರೀ ಗಾಳಿ-ಮಳೆಗೆ ನೆಲಕ್ಕುರುಳಿದ ಮೊಬೈಲ್ ಟವರ್
Team Udayavani, Jul 18, 2024, 9:13 PM IST
ಸಿರುಗುಪ್ಪ: ತಾಲೂಕಿನ ದರೂರು ಗ್ರಾಮದ ಕ್ರಾಸ್ ನಲ್ಲಿ ಗುರುವಾರ ಸಂಜೆ 3 ಗಂಟೆಗೆ ಬೀಸಿದ ಭಾರಿ ಗಾಳಿ, ಎರಡು ಗಂಟೆ ಸುರಿದ ಮಳೆಯ ಆರ್ಭಟಕ್ಕೆ ಬೃಹತ್ ಗಾತ್ರದ ಮೊಬೈಲ್ ಟವರ್ ಉರುಳಿದ ಘಟನೆ ಗುರುವಾರ ನಡೆದಿದೆ.
ಗುರುವಾರ ಸಂಜೆ ಬೀಸಿದ ಗಾಳಿ ಸಹಿತ ಮಳೆಗೆ ಮೊಬೈಲ್ ಟವರ್ ಕಾಂಕ್ರಿಟ್ ಸಹಿತ ಕಿತ್ತು, ಹೊಸಳ್ಳಿ ಮತ್ತು ಹಾಗಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಹಾಗೂ ರಸ್ತೆ ಪಕ್ಕದಲ್ಲಿದ್ದ ವೀರನಗೌಡ ಎನ್ನುವವರ ಮನೆ ಮುಂದಿನ ಶೆಡ್ ಮೇಲೆ ಬಿದ್ದಿದ್ದು,ಶೆಡ್ ಬಹುತೇಕ ಹಾನಿಗೊಳಗಾಗಿದೆ.
ಮೊಬೈಲ್ ಟವರ್ ಬಿದ್ದ ರಭಸಕ್ಕೆ ಐದು ವಿದ್ಯುತ್ ಸಂಪರ್ಕದ ಕಂಬಗಳು ಬಿದ್ದು ಮುರಿದಿವೆ.
ಘಟನೆಯಲ್ಲಿ ಅಂಗಡಿ ನಾಗರಾಜ್ ಎನ್ನುವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಸ್ಥಳಕ್ಕೆ ಸಿರಿಗೇರಿ ಪೊಲೀಸ್ ಠಾಣೆಯ ಪಿಎಸ್ಐ.ಸದ್ದಾಂ ಹುಸೇನ್, ಸಿರಿಗೇರಿ ಕ್ರಾಸ್ ಜೆಸ್ಕಾಂ ಇಲಾಖೆಯ ಎಂಜಿನಿಯರ್ ಕೇಶವ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಹಾಯಕ ಕಾರ್ಯಪಾಲಕ ಅಭಿಯಂತರ ನವೀನ್ ಕುಮಾರ್ ಸ್ಥಳ ಪರಿಶೀಲನೆ ನಡೆಸಲಿದ್ದಾರೆಂದು ಎಂಜಿನಿಯರ್ ಕೇಶವ ಮಾಹಿತಿ ನೀಡಿದರು.ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಸದ್ದಾಂ ಹುಸೇನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.