ವಿಶ್ವ ಪಾರಂಪರಿಕ ತಾಣ ಹಂಪಿಗೆ ಡಿಜಿಟಲ್‌ ಟಚ್‌!


Team Udayavani, Dec 15, 2017, 6:30 AM IST

Hampi.jpg

ಬಳ್ಳಾರಿ: ವಿಶ್ವ ಪಾರಂಪರಿಕ ತಾಣ ಐತಿಹಾಸಿಕ ಹಂಪಿಗೆ ಡಿಜಿಟಲ್‌ ಟಚ್‌ ನೀಡಲು ಯೋಜನೆಯೊಂದು ಸಿದ್ಧವಾಗುತ್ತಿದೆ.

ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ, ಕೇಂದ್ರ ಪುರಾತತ್ವ ಇಲಾಖೆ, ಸಾರ್ವಜನಿಕ ಉದ್ಯಮಗಳ ಪ್ರಮುಖ ಸಂಸ್ಥೆ ಬಿಇಎಲ್‌ ಹಾಗೂ ದೇಶದ ಪ್ರಮುಖ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆ ಐಐಟಿ ಸೇರಿ 27 ಸಂಸ್ಥೆಗಳು ಕೈ ಜೋಡಿಸಿ ಈ ಮಹತ್ವದ ಯೋಜನೆ ರೂಪಿಸಿವೆ.

ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯ ರಾಷ್ಟ್ರೀಯ ಸಂಸ್ಕೃತಿ ನಿಧಿ ಅಡಿಯಲ್ಲಿ ಹಂಪಿಯ ಸ್ಮಾರಕ ಹಾಗೂ ಇದರ ಇತಿಹಾಸಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ನೀಡಲು ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಜಂಟಿ ನಿರ್ದೇಶಕ ಪಿ.ಎಲ್‌. ಸಾಹು ನೇತೃತ್ವದ ತಜ್ಞರ ತಂಡ ಹಂಪಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಹಂಪಿಯ ಸ್ಮಾರಕಗಳ ಹಿಂದಿರುವ ಇತಿಹಾಸ ಅರಿಯಲು, ಸ್ಮಾರಕಗಳನ್ನು ವೀಕ್ಷಿಸಲು ಪ್ರತಿವರ್ಷ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ, ಸಮಯದ ಅಭಾವ, ಆಕರಗಳ ಕೊರತೆ, ಸೂಕ್ತ ಮಾಹಿತಿ ಸಿಗದೆ ಪ್ರವಾಸಿಗರು ವಾಪಸ್‌ ಆಗುತ್ತಾರೆ. ಹೀಗಾಗಿ ಹಂಪಿಗೆ ಬರುವ ಪ್ರತಿ ಪ್ರವಾಸಿಗೂ ಇಲ್ಲಿನ ಪೂರ್ಣ ಮಾಹಿತಿ ನೀಡಲು ಯೋಜನೆ ರೂಪಿಸಲಾಗುತ್ತಿದೆ.

ಡಿಜಿಟಲೀಕರಣ:
ಹಂಪಿಯ ಇತಿಹಾಸವನ್ನು ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಉಣ ಬಡಿಸಲು ಮೂರು ಹಂತಗಳ ಮಹತ್ವದ ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಹಂಪಿಯಲ್ಲಿ ಉತVನನ ನಡೆಸಿದ ನಂತರ ದೊರೆತಿರುವ ಶಿಲ್ಪಕಲಾ ಸ್ಮಾರಕಗಳು, ಶಾಸನಗಳು, ಅನೇಕ ಐತಿಹಾಸಿಕ ಮಹತ್ವ ಇರುವ ವಸ್ತುಗಳನ್ನು ಸಂಗ್ರಹಿಸಿಡಲಾದ ವಸ್ತು ಸಂಗ್ರಹಾಲಯದ ಉನ್ನತೀಕರಣ ಈ ಯೋಜನೆಯ ಮೊದಲ ಹೆಜ್ಜೆಯಾಗಿದೆ. ಇಲ್ಲಿ ಪ್ರಸ್ತುತವಿರುವ ಸ್ಮಾರಕಗಳ ಕುರಿತು ವಿವರಣಾತ್ಮಕ ಮಾಹಿತಿ, ತ್ರೀ-ಡಿ ಛಾಯಾಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಬಳಿಕ ಸ್ಮಾರಕಗಳ ಅದರ ಹಿಂದಿರುವ ಇತಿಹಾಸ, ಗತ ವೈಭವವನ್ನು ಪ್ರವಾಸಿಗರು ಆ ಕಾಲದಲ್ಲೇ ತಾವು ಇದ್ದಂತೆ ಭಾಸವಾಗಿಸಲು ಇಮ್ಮೆರ್ಸಿವ್‌ ಎಕ್ಸ್‌ಪೀರಿಯೆನ್ಸ್‌ ಕಾರ್ಯಕ್ರಮ ರೂಪಿಸಲಾಗಿದ್ದು, ಇದು ಯೋಜನೆಯ ಎರಡನೇ ಹಂತವಾಗಿದೆ. ವಿಜಯನಗರ ಸಾಮ್ರಾಜ್ಯದ ಆರಂಭ, ಪತನಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ 1;15 ನಿಮಿಷದಲ್ಲಿ ಪ್ರವಾಸಿಗರಿಗೆ ವಿವಿಧ ಭಾಷೆಗಳಲ್ಲಿ ಹೇಳುವ ಕಾರ್ಯ ಇಮ್ಮೆರ್ಸಿವ್‌ ಎಕ್ಸ್‌ಪೀರಿಯೆನ್ಸ್‌ ಕಾರ್ಯಕ್ರಮದ ಮೂಲಕ ಸಾಕಾರವಾಗಲಿದೆ.ಬಳಿಕ ವರ್ಚುಚಲ್‌ ರಿಯಾಲಿಟಿ ತಂತ್ರಜ್ಞಾನದ ಮೂಲಕ ಹಂಪಿಯ ಸ್ಮಾರಕಗಳು, ಶಿಲ್ಪ, ವಾಸ್ತುಶಾಸ್ತ್ರ, ಭಗ್ನಗೊಂಡ ಸ್ಮಾರಕಗಳ ಪರಿಚಯ ಮಾಡಿಸುವುದು ಯೋಜನೆಯ ಅಂತಿಮ ಭಾಗವಾಗಿದೆ.

ಇದರ ಜತೆಗೆ, ಸ್ಪರ್ಶ ಸಂವೇದಿ ಪರದೆಗಳ ಮೇಲೆ ಹಂಪಿಯ ವಿಸ್ತಾರವಾದ ಸ್ಮಾರಕಗಳ ಚಿತ್ರಗಳನ್ನು ಮೂಡಿಸಿ, ನಿರ್ದಿಷ್ಟ ಸ್ಮಾರಕವನ್ನು ಸ್ಪರ್ಶಿಸಿದಾಗ ಆ ಸ್ಮಾರಕದ ಪೂರ್ವ ಪರ ಮಾಹಿತಿ, ಭಗ್ನಗೊಂಡ ವಿಗ್ರಹಗಳ ಪೂರ್ಣ ರೂಪದ ವಿವರಣೆಗಳನ್ನು ಈ ತಂತ್ರಜ್ಞಾನದಿಂದ ದೊರಕಿಸಿಕೊಡಲು ಚಿಂತಿಸಲಾಗಿದೆ.ಇದಲ್ಲದೆ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ಬಳಸುವ ಓಂಟೋಲಜಿ ತಂತ್ರಜ್ಞಾನವನ್ನೂ ಈ ಯೋಜನೆಯಲ್ಲಿ ಬಳಸಿಕೊಳ್ಳುವ ಉದ್ದೇಶವಿದೆ.

ಬಿಇಎಲ್‌ ಸಿಎಸ್‌ಆರ್‌ ನಿಧಿ ಬಳಕೆ:
ಈ ಮಹತ್ವದ ಯೋಜನೆಗೆ ಸಾರ್ವಜನಿಕ ಉದ್ಯಮವಾದ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿ., ತನ್ನ ಕಾರ್ಪೋರೇಟ್‌ ಸಾಮಾಜಿಕ ಜವಾಬ್ದಾರಿ ನಿಧಿಯನ್ನು (ಕಾರ್ಪೋರೇಟ್‌ ಸೋಶಿಯಲ್‌ ರೆಸ್ಪಾನ್ಸಿಬಿಲಿಟಿ-ಸಿಎಸ್‌ಆರ್‌) ನೀಡಲು ಮುಂದೆ ಬಂದಿದೆ.
ದೇಶದ ವಿವಿಧ ಐಐಟಿಗಳು ಸೇರಿ ಪರಂಪರೆಯನ್ನು ಡಿಜಿಟಲ್‌ ತಂತ್ರಜ್ಞಾನದ ಮೂಲಕ ಹೊಸ ಪೀಳಿಗೆಗೆ ಪರಿಚಯಿಸಲು ಆರಂಭವಾಗಿರುವ 27 ಸಂಸ್ಥೆಗಳು, ಕೇಂದ್ರ ಪುರಾತತ್ವ ಸಂಶೋಧನಾ ಇಲಾಖೆಯ ಪಾಲುದಾರ ಸಂಸ್ಥೆಗಳಾಗಿವೆ. ಇವೆಲ್ಲವೂ ಸೇರಿ ಒಟ್ಟು 17 ತಂತ್ರಜ್ಞಾನ ಆಧಾರಿತ ಕಾರ್ಯಕ್ರಮಗಳನ್ನು ರೂಪಿಸಿದ್ದು ಇವುಗಳ ಅಧ್ಯಯನ ನಡೆದಿದೆ. ಈ ಯೋಜನೆಯನ್ನು ಸ್ಟಾರ್ಟ್‌ ಅಪ್‌ ಸಂಸ್ಥೆಗಳು ಜಾರಿಗೊಳಿಸಲಿದ್ದು, ಈಚೆಗೆ ವಿವಿಧ ಪಾಲುದಾರ ಸಂಸ್ಥೆಗಳು ಹಂಪಿಯ ವಿವಿಧ ಸ್ಮಾರಕಗಳಿಗೆ ಭೇಟಿ ನೀಡಿ ಕ್ಷೇತ್ರ ಕಾರ್ಯ ಕೈಗೊಂಡವು.

ಇಂಡಿಯನ್‌ ಹೆರಿಟೇಜ್‌ ಇನ್‌ ಡಿಜಿಟಲ್‌ ಸ್ಪೇಸ್‌ ಹೆಸರಿನ ಯೋಜನೆ ಅಡಿ ಡಿಜಿಟಲೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಈ ತಂಡ ಅಧ್ಯಯನ ನಡೆಸಿ ಕಂಡುಕೊಂಡ ಅಂಶಗಳನ್ನು ಒಳಗೊಂಡ ಯೋಜನಾ ವರದಿಯನ್ನು ಸಂಸ್ಕೃತಿ ಇಲಾಖೆಗೆ ಸಲ್ಲಿಸಲಿದೆ. ನಂತರ ಸೂಕ್ತ ಯೋಜನೆ ರೂಪಿಸಿ ಅಗತ್ಯವಿರುವ ಹಣಕಾಸು ನೆರವಿಗೆ ಬಿಇಎಲ್‌ ಸಂಸ್ಥೆ ಸಂಪರ್ಕಿಸಲಾಗುವುದು.
-ಪಿ.ಎಲ್‌.ಸಾಹು, ಜೆಡಿ, ಸಂಸ್ಕೃತಿ ಇಲಾಖೆ.

ಹಂಪಿಯ ಸ್ಮಾರಕಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯಕ್ರಮ ಶೀಘ್ರವೇ ಆರಂಭವಾಗಲಿದೆ. ಒಂದು ವರ್ಷದ ಅವಧಿಯಲ್ಲಿ ಗುರಿ ಸಾಧಿಸುವ ಕುರಿತು ಪಾಲುದಾರ ಸಂಸ್ಥೆಗಳು ಯೋಜನೆ ರೂಪಿಸಿವೆ.
– ಕೆ.ಮೂರ್ತೀಶ್ವರಿ. ಎಸ್‌.ಎ., ಬೆಂಗಳೂರು ಹಾಗೂ ಹಂಪಿ ಕಿರು ವೃತ್ತ

– ಎಂ.ಮುರಳಿಕೃಷ್ಣ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.