Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ


Team Udayavani, Sep 18, 2024, 8:28 PM IST

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

ಬಳ್ಳಾರಿ: ನಗರ ಸೇರಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ಆನ್‌ಲೈನ್ ವಂಚನೆ ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿಯೊಂದಿಗೆ ಅವನಿಂದ 1.21 ಕೋಟಿ ರೂ. ನಗದು ವಶ ಪಡಿಸಿಕೊಳ್ಳುವ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಡಾ. ವಿ.ಜೆ.ಶೋಭಾರಾಣಿ ಹೇಳಿದರು.

ನಗರದ ಎಸ್ಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಧ್ಯಪ್ರದೇಶ ಮೂಲದ ಆರೋಪಿ ಅಜಯ್ ಕುಮಾರ್ ಜೈಸ್ವಾಲ್ ಬಂಧಿಸಲಾಗಿದ್ದು, ಆರೋಪಿಯ ಖಾತೆಯಲ್ಲಿದ್ದ 1,21,04,500 ರೂ.ಗಳನ್ನು ವಶಕ್ಕೆ ಪಡೆದಿದ್ದು, ಬೇರೆ ಬೇರೆ ಖಾತೆಗಳಲ್ಲಿದ್ದ 27,97,582 ರೂ.ಗಳನ್ನು ಫ್ರಿಜ್ ಮಾಡಲಾಗಿದೆ. ಒಟ್ಟು 1,49,02,082 ರೂ.ಗಳನ್ನು ಮತ್ತು ಆರೋಪಿಯು ಆನ್‌ಲೈನ್ ವಂಚನೆಗೆ ಬಳಸಿದ್ದ ಒಂದು ವಿವೊ ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಏನಿದು ವಂಚನೆ;
ಬಳ್ಳಾರಿ ನಗರದಲ್ಲಿನ ಹಿಂದೂಸ್ತಾನ್ ಕ್ಯಾಲ್ಸಿನೆಡ್ ಮೆಟಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಅಗರ್‌ವಾಲ್ ಕೋಲ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ ಕಂಪನಿಯಿಂದ ಕೋಲ್ ಖರೀದಿ ಮಾಡುತ್ತಿದ್ದರು. ಕಂಪನಿಯವರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಲಾಗುತ್ತಿತ್ತು. ಈ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಿದ್ದ ಆರೋಪಿ ಅಜಯ್ ಕುಮಾರ್ ಜೈಸ್ವಾಲ್, ಅಗರ್‌ವಾಲ್ ಕೋಲ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಬ್ಯಾಂಕ್ ಖಾತೆ ಸಂಖ್ಯೆ ಬದಲಾವಣೆಯಾಗಿದೆ ಎಂದು ಹೇಳಿ ಫೇಕ್ ಇ-ಮೇಲ್ ಐಡಿ ಸೃಷ್ಟಿಸಿ, ತನ್ನ ಮಧ್ಯಪ್ರದೇಶ ರಾಜ್ಯದ ಖಾಸಗಿ ಇಂಡಸಿಂಡ್ ಬ್ಯಾಂಕ್‌ನ ಖಾತೆಯ ಸಂಖ್ಯೆ ಕಳುಹಿಸಿ, ಆನ್‌ಲೈನ್ ಮೂಲಕ ೨.೧೧ ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡು ಕಂಪನಿಗೆ ಮೋಸ ಮಾಡಿದ್ದನು.

ಈ ಕುರಿತು ಇದೇ ಸೆ.3 ರಂದು ಬಳ್ಳಾರಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಎಸ್‌ಪಿ, ಎಎಸ್‌ಪಿ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಡಾ. ಸಂತೋಷ್ ಚವ್ಹಾಣ್ ನೇತೃತ್ವದಲ್ಲಿ ತನಿಖಾಕಾರಿ ಪೊಲೀಸ್ ಇನ್ಸ್ಪೆಕ್ಟರ್ ವೈ.ಎಚ್.ರಮಾಕಾಂತ್, ಎಎಸ್‌ಐಗಳಾದ ಎಂ.ಜಿ.ತಿಪ್ಪೇರುದ್ರಪ್ಪ, ಹನುಮಂತರೆಡ್ಡಿ, ಯಲ್ಲೇಶಿ, ವೆಂಕಟೇಶ್‌ರೊಂದಿಗೆ ಮಧ್ಯಪ್ರದೇಶಕ್ಕೆ ತೆರಳಿ ತನಿಖೆ ಕೈಗೊಂಡಿದ್ದಾರೆ. ತಾಂತ್ರಿಕ ಸಹಾಯದೊಂದಿಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧಿತ ಆರೋಪಿ ಅಜಯ್ ಕುಮಾರ್ ಜೈಸ್ವಾಲ್‌ನಿಂದ 1.21 ಕೋಟಿ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಬೇರೆ ಬೇರೆ ಖಾತೆಗಳಲ್ಲಿದ್ದ 27,97,582 ಲಕ್ಷ ರೂ.ಗಳನ್ನು ಫ್ರಿಜ್ ಮಾಡಲಾಗಿದೆ. ಒಟ್ಟು 1,49,02,082 ರೂ., ಒಂದು ಮೊಬೈಲ್‌ನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎಎಸ್‌ಪಿ ನವೀನ್ ಕುಮಾರ್, ಡಿಎಸ್‌ಪಿ ಡಾ. ಸಂತೋಷ್ ಚವ್ಹಾಣ್, ತನಿಖಾಧಿಕಾರಿ ಸಿಪಿಐ ಎಚ್.ರಮಾಕಾಂತ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಸೌಲಭ್ಯ ಕಲ್ಪಿಸುವಂತೆ ಮಾಜಿ ನಕ್ಸಲರಿಂದ ಡಿಸಿಗೆ ಮನವಿ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

suicide (2)

Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್‌ ಕುಸಿದು ಬಿದ್ದು ಸಾ*ವು

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Koteshwara: ಎಂಬಿಬಿಎಸ್‌ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

Koteshwara: ಎಂಬಿಬಿಎಸ್‌ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.