ಹತ್ರಾಸ್‌ ಘಟನೆ ಖಂಡಿಸಿ ವಿವಿದ ಸಂಘಟನೆ ಪ್ರತಿಭಟನೆ


Team Udayavani, Oct 19, 2020, 6:22 PM IST

ballary-tdy-1

ಬಳ್ಳಾರಿ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌, ಜನವಾದಿ ಮಹಿಳಾ ಸಂಘಟನೆಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಸಮಾಜದ ತಳವರ್ಗಗಳ ಸಮೂಹಗಳಮೇಲಿನ ದೌರ್ಜನ್ಯಗಳು, ಸಾಮೂಹಿಕ ಅತ್ಯಾಚಾರಗಳು, ಮತ್ತು ಬರ್ಬರ ಹತ್ಯೆಗಳು ಆಘಾತಕಾರಿಯಾಗಿ ಹೆಚ್ಚುತ್ತಿದ್ದು ಈ ಬೆಳವಣಿಗೆಸಮಾಜದ ದಲಿತ ದಮನಿತರನ್ನು ಆತಂಕಕ್ಕೆದೂಡಿದೆ. ಉತ್ತರಪ್ರದೇಶದ ಹತ್ರಾಸ್‌ ಎಂಬಲ್ಲಿಅಲ್ಲಿನ ಮೇಲ್ಜಾತಿ ಭೂಮಾಲಿಕರು 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕಅತ್ಯಾಚಾರವೆಸಗಿ ಅವಳನ್ನು ಬರ್ಬರವಾಗಿ ಕೊಲೆ ಮಾಡಿರುವುದು ಅತ್ಯಂತ ಅಮಾನುಷ ಕೃತ್ಯವಾಗಿದೆ. ಇಡೀ ದೇಶವನ್ನೇ ಅದು ಬೆಚ್ಚಿ ಬೀಳುವಂತೆ ಮಾಡಿದೆ. ಈ ಕ್ರೂರ ಕೃತ್ಯದ ವಿರುದ್ಧ ಇಡೀ ದೇಶದಲ್ಲಿ ಜನ ಬೀದಿಗಿಳಿದಿದ್ದಾರೆ.

ಆದರೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಾತ್ರ ಕನಿಷ್ಟ ಮಾನ ಮರ್ಯಾದೆ ಇಲ್ಲದೆ ಅಪರಾಧಿಗಳಿಗೆ ರಕ್ಷಣೆ ನೀಡುವುದರಲ್ಲಿ ಸಾಕ್ಷಿ ಪುರಾವೆಗಳನ್ನು ನಾಶ ಮಾಡುವುದರಲ್ಲಿ ಮತ್ತು ನೊಂದ ಕುಟುಂಬವನ್ನು ಬೆದರಿಸುವ ಮೇಲ್ಜಾತಿ ಭೂಮಾಲಿಕ ಶಕ್ತಿಗಳಿಗೆ ಬಹಿರಂಗ ಬೆಂಬಲ ನೀಡುವುದರಲ್ಲಿ ಮಗ್ನವಾಗಿದೆ. ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟ ಯುವತಿಬಡ ಕೃಷಿ ಕೂಲಿಕಾರ ದಲಿತ ಕುಟುಂಬಕ್ಕೆ ಸೇರಿದವಳಾಗಿದ್ದಾಳೆ ಎಂದರು.

ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ನಿಗದಿ ತ ಅವಧಿಯಲ್ಲಿ ಹತ್ರಾಸ್‌ ಪ್ರಕರಣದ ಪರಿಣಾಮಕಾರಿ ತನಿಖೆ ಮಾಡಬೇಕು. ಕರ್ತವ್ಯ ಉಲ್ಲಂಘಿಸಿರುವ ಪೊಲೀಸ್‌ ಮತ್ತು ಇತರ ಅಧಿಕಾರಿಗಳ ವಿರುದ್ಧ ಕಠಿಣ ಶಿಕ್ಷೆ ವಿ ಧಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ಗರಿಷ್ಠ ರಕ್ಷಣೆ ನೀಡಬೇಕು. ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ದೊರಕಿಸಬೇಕು. ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ದೌರ್ಜನ್ಯಕ್ಕೊಳಗಾದವರಕುಟುಂಬಗಳಿಗೆ ಕೃಷಿ ಭೂಮಿ ಮತ್ತು ವಾಸಕ್ಕೆಮನೆಗಳು ಒದಗಿಸಬೇಕು. ಎಲ್ಲರಿಗೂಉದ್ಯೋಗವನ್ನು ಮತ್ತು ಕನಿಷ್ಟ ವೇತನವನ್ನು ಖಚಿತಪಡಿಸಬೇಕು. ಮೀಸಲಾತಿ, ದಲಿತರದೌರ್ಜನ್ಯ ತಡೆ ಕಾಯ್ದೆ ಮತ್ತು ಮಹಿಳಾದೌರ್ಜನ್ಯ ವಿರೋ  ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದುಪ್ರತಿಭಟನಾಕಾರರು ಒತ್ತಾಯಿಸಿದರು.

ಬಳಿಕ ಜಿಲ್ಲಾಡಳಿದ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸತ್ಯಬಾಬು, ಕೆಪಿಆರ್‌ಎಸ್‌ ಕಾರ್ಯದರ್ಶಿ ಯು.ಬಸವರಾಜ, ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಂದ್ರಕುಮಾರಿ, ಕಿರಣ್‌ಕುಮಾರಿ, ಮಲ್ಲಮ್ಮ, ರಂಗನಾಥ (ಪಾಂಡು), ಅರುಣ, ಪ್ರಭಾವತಿ, ಓಂಕಾರಮ್ಮ, ಪಿ.ಆರ್‌.ವೆಂಕಟೇಶ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.