ಸಾವಯವ ಕೃಷಿಕನಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ


Team Udayavani, Oct 29, 2019, 3:03 PM IST

ballary–tdy-2

ಬಳ್ಳಾರಿ: ಬರದನಾಡಲ್ಲೂ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿರುವ ಜಿಲ್ಲೆಯ ಕೂಡ್ಲಿಗಿ ತಾಲೂಕು ಖಾನಹೊಸಳ್ಳಿ ರೈತ ಎಚ್‌. ವಿಶ್ವೇಶ್ವರ ಸಜ್ಜನ್‌ ಅವರಿಗೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್ಯದಲ್ಲೇ ಅತ್ಯಂತ ಹಿಂದುಳಿದಿರುವ ಜಿಲ್ಲೆಯ ಕೂಡ್ಲಿಗಿ ತಾಲೂಕು ಜಿಲ್ಲೆಯಲ್ಲೇ ಅತಿಹೆಚ್ಚು ಮಳೆಯಾಶ್ರಿತ ಪ್ರದೇಶ ಹೊಂದಿದೆ. ಸಮರ್ಪಕ ಮಳೆಯಾಗದೆ ಪ್ರತಿವರ್ಷವೂ ಬರ ಪರಿಸ್ಥಿತಿ ಆವರಿಸುವ ಕೂಡ್ಲಿಗಿ ತಾಲೂಕು ಹುಲಿಕೆರೆ ಗ್ರಾಮದಲ್ಲಿ ಸಾವಯವ ಕೃಷಿಯನ್ನು ಆರಂಭಿಸಿರುವ ವಿಶ್ವೇಶ್ವರ ಸಜ್ಜನ್‌ ಅವರು, ಐದು ಎಕರೆ ಪ್ರದೇಶದಲ್ಲಿ ಮಳೆಯಾಧಾರಿತ ಬೆಳೆಗಳನ್ನು ಯಶಸ್ವಿಯಾಗಿ ಬೆಳೆದು ಅದರ ಉತ್ಪನ್ನಗಳಿಗೆ ತನ್ನದೇ ಆದ ಪ್ರತ್ಯೇಕ ಮಾರುಕಟ್ಟೆ ಮಾಡಿಕೊಳ್ಳುವ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ಐದು ಎಕರೆ ಜಮೀನಿನಲ್ಲಿ ಒಂದೂವರೆ ಎಕರೆಯಲ್ಲಿ ಬೇಲದ ಹಣ್ಣಿನ (ಬೆಳವಲ) ಮರಗಳನ್ನು ಬೆಳೆದಿರುವ ವಿಶ್ವೇಶ್ವರ ಸಜ್ಜನ್‌, ಎರಡು ಎಕರೆಯಲ್ಲಿ ಬೆಟ್ಟದ ನೆಲ್ಲಿ (ಕಾಡುನೆಲ್ಲಿ) ಮರಗಳು, ಒಂದು ಎಕರೆಯಲ್ಲಿ ಜಂಬೂ ನೇರಳೆ ಹಣ್ಣಿನ ಮರಗಳನ್ನು ನಾಟಿ ಮಾಡಿದ್ದಾರೆ. ಈ ಸಾವಯವ ಕೃಷಿಯಿಂದ ಬೆಳೆಯುವ ಕೇವಲ ಹಣ್ಣುಗಳನ್ನಷ್ಟೇ ಮಾರಾಟ ಮಾಡದೆ, ಆ ಹಣ್ಣುಗಳಿಂದ ಕೆಲ ಉತ್ಪನ್ನಗಳನ್ನು ಸಿದ್ಧಪಡಿಸಿ ಮಾರಾಟ ಮಾಡುವ ಮೂಲಕ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಬೇಲದ ಹಣ್ಣಿನಿಂದ ಬೇಲ್‌ ಜ್ಯೂಸ್‌, ಬೇಲ್‌ಪೇಡ, ಬೇಲ್‌ ರಸಂ ಮತ್ತು ಬೇಲ್‌ ಟೀ ಪೌಡರ್‌ ನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವ ಮೂಲಕ ಬರದ ನಾಡಿನಲ್ಲೂ ಕೃಷಿಯಿಂದ ಉತ್ತಮ ಆದಾಯ ಗಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಗೋ ಉತ್ಪನ್ನ: ಸಾವಯವ ಕೃಷಿಯಲ್ಲಿ ಯಶಸ್ವಿಯಾಗಿರುವ ವಿಶ್ವೇಶ್ವರ ಸಜ್ಜನ್‌, ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡಿದ್ದಾರೆ. ದೇಶೀಯ ಮತ್ತು ಗಿರ್‌ ತಳಿಯ ಗೋವುಗಳನ್ನು ಸಾಕಿರುವ ಸಜ್ಜನ್‌ ಅವರು, ಗೋವುಗಳು ಕೊಡುವ ಹಾಲಿನಿಂದ ವಿವಿಧ ರೀತಿಯ ಉತ್ಪನ್ನವನ್ನು ಸಿದ್ಧಪಡಿಸುತ್ತಿದ್ದಾರೆ. ಗೋವುಗಳ ಹಾಲಿನಿಂದ ಪೇಡ, ಗೋಮೂತ್ರದಿಂದ ಅರ್ಕ ಮತ್ತು ತುಪ್ಪ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಇವರು ವರ್ಷಕ್ಕೆ ಸುಮಾರು 2 ಲಕ್ಷಕ್ಕೂ ಹೆಚ್ಚು ಆದಾಯ ಗಳಿಸುತ್ತಿರುವ ಸಜ್ಜನ್‌, ಜತೆಗೆ ನಾಲ್ಕೈದು ಜನರಿಗೆ ಉದ್ಯೋಗವನ್ನು ನೀಡಿದ್ದೇನೆ.  ವಿಷಮುಕ್ತ ಆಹಾರ ಉತ್ಪನ್ನಗಳಿಗೆ ಬೇಡಿಕೆಯಿದೆ. ರೈತರು ತಾವು ಬೆಳೆದ ಪ್ರತಿಯೊಂದು ಬೆಳೆಗಳನ್ನು ಸಂಸ್ಕರಿಸಿ ಮಾರಾಟ ಮಾಡಿದರೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭವೂ ಗಳಿಸಬಹುದು ಎನ್ನುತ್ತಾರೆ ಸಾವಯವ ಕೃಷಿಕ, ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿರುವ ವಿಶ್ವೇಶ್ವರ ಸಜ್ಜನ್‌.

ಸಾಹಿತ್ಯದಲ್ಲಿ ಪದವಿ: ಹುಲಿಕೆರೆ ಗ್ರಾಮದ ಬಯುಲುಸೀಮೆಯ ಸಾವಯವ ಕೃಷಿಕ ಎಚ್‌.ವಿ.ಸಜ್ಜನ್‌ ಷಡಕ್ಷರಯ್ಯ ಎಂಬ ಶಿಕ್ಷಕ ಮಗನಾಗಿದ್ದು, ಕನ್ನಡದಲ್ಲಿ ಸ್ನಾತಕೋತ್ತರ (ಎಂಎ) ಪದವಿಯನ್ನೂ ಪಡೆದಿದ್ದಾರೆ. ತಾನು ಕಲಿತ ಕನ್ನಡ ಸಾಹಿತ್ಯವನ್ನು ಬಿಟ್ಟು ಸಾವಯವಕೃಷಿಕರಾಗಿ ಸ್ವಾವಲಂಬಿ ಕೃಷಿಯಲ್ಲಿ ಜೀವನ ಮಾಡುತ್ತಿದ್ದಾರೆ. ಸಾವಯವ ಕೃಷಿಕ ಸಜ್ಜನ್‌ ಅವರಿಗೆ ಪತ್ನಿ ಮತ್ತು ಮೂವರು ಪುತ್ರರು ಸಹ ಕೃಷಿಯಲ್ಲಿ ಉತ್ತಮ ಸಾಥ್‌ ನೀಡುತ್ತಿದ್ದು, ಅವರ ಯಶಸ್ವಿಗೆ ಕಾರಣರಾಗಿದ್ದಾರೆ.

ಕಾಡಿನಲ್ಲಿ ಬೆಳೆಯುವ ಬೇಲಾ ಹಾಗೂ ನೇರಳೆ ಹಣ್ಣಿನ ಮರಗಳನ್ನು ಅವುಗಳ ಮಹತ್ವ ಮತ್ತು ಅವಶ್ಯಕತೆಯನ್ನು ಅರಿತ ಎಚ್‌.ವಿಶ್ವೇಶ್ವರ ಸಜ್ಜನ್‌ ಅವರು, ಬೇಲಾ ಮತ್ತು ನೇರಳೆ ಮರಗಳನ್ನು ತೋಟಗಾರಿಕೆ ಬೆಳೆಯನ್ನಾಗಿಸಿ ಸಾವಯವ ಮತ್ತು ಸಹಜ ಕೃಷಿಯಲ್ಲಿ ಬೆಳೆದಿದ್ದಲ್ಲದೇ, ಬೆಳೆದ ಹಣ್ಣುಗಳು ಮತ್ತದರ ಉತ್ಪನ್ನಗಳಿಗೆ ತನ್ನದೇ ಆದ ಪ್ರತ್ಯೇಕ ಮಾರುಕಟ್ಟೆ ಸೃಷ್ಟಿಸಿಕೊಂಡು ಯಶಸ್ವಿಯಾಗಿದ್ದು, ಇದೀಗ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಿಗೆ ಲಭಿಸಿರುವ ರಾಜ್ಯೋತ್ಸವ ಪ್ರಶಸ್ತಿ ಬಯಲುಸೀಮೆಯ ಕೃಷಿಕನಿಗೆ ಲಭಿಸಿದಂತಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.