ಮಾಸಾಶನ ಮಂಜೂರಾತಿಗೆ ಆಗ್ರಹ
Team Udayavani, Feb 6, 2018, 5:30 PM IST
ಹಗರಿಬೊಮ್ಮನಹಳ್ಳಿ: ತಾಲೂಕಿನ ಅಧಿಕಾರಿಗಳ ನಿರ್ಲಕ್ಷತನದಿಂದ ಸತತ ಮೂರು ತಿಂಗಳಿಂದಲೂ ನೂರಾರು ಫಲಾನುಭವಿಗಳ ಮಾಸಾಶನ ಸೌಲಭ್ಯ ರದ್ದಾಗಿರುವುದನ್ನು ಖಂಡಿಸಿ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಸಂಘಟನೆ ತಾಲೂಕು ಅಧ್ಯಕ್ಷೆ ಸರ್ದಾರ್ ಹುಲಿಗೆಮ್ಮ ಮಾತನಾಡಿ, ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ನೀಡುವ ಮಾಸಾಶನ
ಸೌಲಭ್ಯವನ್ನು ಫಲಾನುಭವಿಗಳಿಗೆ ಮರು ಮಂಜೂರು ಮಾಡಬೇಕು. ಅಧಿಕಾರಿಗಳು ಫಲಾನುಭವಿಗಳ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಸೌಲಭ್ಯವನ್ನು ರದ್ದು ಮಾಡಿರುವುದು ಅಧಿಕಾರಿಗಳ ನಿರ್ಲಕ್ಷತನವನ್ನು ಎತ್ತಿ ತೋರಿಸುತ್ತದೆ. ಪುನಃ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು
ಕಚೇರಿಗಳನ್ನು ಅಲೆದಾಡುವಂತಾಗಿದ್ದು, ಮಧ್ಯವರ್ತಿಗಳಿಗೆ ಸಾವಿರಾರು ರೂಗಳನ್ನು ಭರಿಸುವಂತಾಗಿದೆ. ವಿಧವೆಯರು, ವೃದ್ಧರು ಸೇರಿದಂತೆ ವಿವಿಧ ಅಶಕ್ತರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ಕಲ್ಪಿಸುವುದು ಸರ್ಕಾರದ ಹೊಣೆಯಾಗಿದೆ. ನಾಡ ಕಚೇರಿ ಮತ್ತು ತಾಲೂಕು ಕಚೇರಿಗಳಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈಗಾಗಲೇ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ನೀಡಿದ್ದರೂ ಮಾಸಾಶನ
ಒದಗಿಲ್ಲ. ಕೂಡಲೇ ಸೌಲಭ್ಯ ವಂಚಿತರಿಗೆ ಮಾಸಾಶನ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಪ ತಹಶೀಲ್ದಾರ್ ನಾಗರಾಜ ಅವರಿಗೆ ಸಂಘಟನೆ ಕಾರ್ಯದರ್ಶಿ ಜಿ.ಸರೋಜ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ರಾಜೇಶ್ವರಿ, ರಾಮಕ್ಕ ಈರಮ್ಮ, ಬಸಮ್ಮ, ತಿಪ್ಪವ್ವ, ಮಾಸ್ತೆಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.