ಅಧಿಕಾರಿಗಳ ವರ್ಗಾವಣೆಗೆ ಆಗ್ರಹ
Team Udayavani, Apr 10, 2021, 8:28 PM IST
ಸಂಡೂರು: ತಾಲೂಕು ಕೇಂದ್ರದ ಕಂದಾಯ ಇಲಾಖೆ ಒಳಗೊಂಡು ಎಲ್ಲ ಇಲಾಖೆಯಲ್ಲಿ ಕಳೆದ 10-15 ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಧರ್ಮಾನಾಯ್ಕ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು 10ಕ್ಕೂ ಹೆಚ್ಚು ವಿವಿಧ ಸಂಘಟನೆಗಳು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲದಗೊಂಡು ಅವರು ಮಾತನಾಡಿದರು. ಪಟ್ಟಣದ ವಿವಿಧ ಇಲಾಖೆಗಳಲ್ಲಿ ಒಬ್ಬ ಅಧಿಕಾರಿಯೇ 10 ರಿಂದ 15 ವರ್ಷಗಳ ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಅಡಳಿತ ನಿಧಾನಕ್ಕೆ ಮತ್ತು ಇತರ ರೀತಿಯ ಅಡ್ಡಪರಿಣಾಮಗಳಿಗೆ ಕಾರಣವಾಗುತ್ತಿದೆ.
ಆದ್ದರಿಂದ ತಕ್ಷಣ ಅವರನ್ನು ವರ್ಗಾವಣೆ ಮಾಡುವ ಮೂಲಕ ಅಡಳಿತ ಸುಧಾರಣೆ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕರವೇ ಅಧ್ಯಕ್ಷ ಪರಶುರಾಮ ಟಿ. ಮಾತನಾಡಿ, ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ದಶಕಗಳಿಂದ ಒಂದಡೆ ಇರುವುದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂ ತಾಗುತ್ತದೆ. ಮೇಲಾಧಿಕಾರಿಗೆ, ಸಿಬ್ಬಂದಿ ನೌಕರರನ್ನು ಬೇರಡೆ ವರ್ಗಾವಣೆ ಮಾಡದೇ ಇರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಸಾರ್ವಜನಿಕರಿಗೆ ಇದರಿಂದ ವಿಪರೀತ ತೊಂದರೆ, ಕಷ್ಟಗಳು ಉಂಟಾಗಿವೆ ಎಂದರು. ಕರವೇ ಮುಖಂಡ ಕೆ.ಆರ್. ಕುಮಾರಸ್ವಾಮಿ, ರೈತ ಸಂಘದ ಮುಖಂಡ ಶ್ರೀಪಾದಸ್ವಾಮಿ, ಜಿಲ್ಲಾ ರೈತ ಸಂಘದ ಮುಖಂಡ ಎಂ.ಎಲ್.ಕೆ. ನಾಯ್ಡು, ಧರ್ಮನಾಯ್ಕ, ವಿವಿಧ ಸಂಘಟನೆಗಳು ಸೇರಿ ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ್ ಶಿವಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
MUST WATCH
ಹೊಸ ಸೇರ್ಪಡೆ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.