ಅರಸೀಕೆರೆ-ಕಂಚಿಕೆರೆ ರಸ್ತೆ ಕಾಮಗಾರಿಗೆ ಚಾಲನೆ


Team Udayavani, Nov 23, 2020, 8:52 PM IST

ಅರಸೀಕೆರೆ-ಕಂಚಿಕೆರೆ ರಸ್ತೆ  ಕಾಮಗಾರಿಗೆ ಚಾಲನೆ

ಹರಪನಹಳ್ಳಿ: ಅರಸೀಕೆರೆ ಹೋಬಳಿಯನ್ನು ದಾವಣಗೆರೆ ಜಿಲ್ಲೆಗೆ ಸೇರಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಜನಾಭಿಪ್ರಾಯ ಸಂಗ್ರಹಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

ತಾಲೂಕಿನ ತವಡೂರು ಗ್ರಾಮದಲ್ಲಿ ಅರಸೀಕೆರೆ-ಕಂಚಿಕೆರೆ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಕೋವಿಡ್ ಹಾವಳಿ ಇದ್ದರೂ ಬಿಜೆಪಿ ಸರ್ಕಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದರು.

ಕಳೆದ ಕೆಲ ವರ್ಷಗಳಿಂದ ರಸ್ತೆ ನಿರ್ಮಾಣ ಮಾಡುವಂತೆ ವಿವಿಧ ಸಂಘ, ಸಂಸ್ಥೆ,ಹೋರಾಟದ ಫಲವಾಗಿ ಅರಸೀಕೆರೆ ಕಂಚಿಕೇರಿರಸ್ತೆ ಶಂಕುಸ್ಥಾಪನೆ ಕಾಲ ಕೂಡಿ ಬಂದಿದೆ.ಇನ್ನೇನು ಕೆಲವೇ ದಿನಗಳಲ್ಲಿ ಅರಸೀಕೆರೆಕಂಚಿಕೇರಿ ರಸ್ತೆ ಸಂಚಾರಕ್ಕೆ ಯೋಗ್ಯವಾಗಲಿದೆ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ವಿ. ರಾಮಚಂದ್ರಪ್ಪ ಮಾತನಾಡಿ, ಜಗಳೂರು ವಿಧಾನಸಭಾ ಕ್ಷೇತ್ರದ ಕಟ್ಟಕಡೆ ಗ್ರಾಮದ ಗಡಿಭಾಗವನ್ನೂ ಸಂಪೂರ್ಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ. ಅರಸೀಕೆರೆ 7 ಪಂಚಾಯಿತಿ ವ್ಯಾಪ್ತಿಯ ಉಚ್ಚಂಗಿದುರ್ಗಕ್ಕೆ 1 ಕೋಟಿ, ಅರಸೀಕೆರೆಗೆ 1.4 ಕೋಟಿ, ಹೋಬಳಿ ವ್ಯಾಪ್ತಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ 90 ಲಕ್ಷ, ಅಂಗನವಾಡಿ ಕೇಂದ್ರಗಳಿಗೆ 70 ಲಕ್ಷ, ಬ್ಲಾಕ್‌ ಹಳ್ಳದ ರಸ್ತೆಗಳಿಗೆ 2 ಕೋಟಿ, ಬೇವಿನಹಳ್ಳಿ, ಉಚ್ಚಂಗಿದುರ್ಗ, ಬಿಕ್ಕಿಮಟ್ಟಿ, ಅರಸೀಕೆರೆ, ತವಡೂರಿನ ಎಸ್‌.ಸಿ, ಎಸ್‌.ಟಿ ಕಾಲೊನಿಗಳಿಗೆ 2.50 ಕೋಟಿ ವೆಚ್ಚದಲ್ಲಿ ಕೋವಿಡ್‌ ಸಂಕಷ್ಟದ ನಡುವೆಯೂ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಅರಸೀಕೆರೆ, ಯು.ಕಲ್ಲಹಳ್ಳಿ, ನರೇಬೋಮ್ಮನಹಳ್ಳಿ, ದಿದ್ದಿಗಿ ತಾಂಡಾ, ಹೋಸಕೋಟೆ ಗ್ರಾಮಗಳ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಜಿ.ಪಂ ಸದಸ್ಯ ಡಿ.ಸಿದ್ದಪ್ಪ, ಬಿಜೆಪಿ ಮಂಡಲ ಅಧ್ಯಕ್ಷಮಹೇಶ್‌, ತಾ.ಪಂ ಸದಸ್ಯ ಪಾಟೀಲ್‌ ಕೆಂಚನಗೌಡ, ರಹಮತ್‌ವುಲ್ಲಾ, ಎಇಇ ಲಿಂಗಪ್ಪ, ಎಂಜಿನಿಯರ್‌ ಮಹೇಶ ನಾಯ್ಕ,ಮುಖಂಡರಾದ ಚಟ್ನಿಹಳ್ಳಿ ರಾಜಪ್ಪ, ವೈ.ಡಿ.ಅಣ್ಣಪ್ಪ, ನಂದಿಕಂಬ ಚಂದ್ರ ನಾಯ್ಕ, ಬಾಲೆನಹಳ್ಳಿ ಕೆಂಚನಗೌಡ, ಗೋಪಿನಾಯ್ಕ, ಫಣಿಯಾಪುರ ಲಿಂಗರಾಜ,ಮಂಜುನಾಥಯ್ಯ, ಶಿವಯೋಗಿ,ರಾಜನಾಯ್ಕ, ವಿಶ್ವನಾಥಯ್ಯ, ಅನಂದಪ್ಪ, ಸಿದ್ದಪ್ಪ, ಕೊಟ್ರಯ್ಯಸ್ವಾಮಿ, ಬಾಲಚಂದ್ರಯ್ಯ, ರಾಜಶೇಖರ್‌ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.