ಎಸ್ಸಿ, ಎಸ್ಟಿ, ಮೀಸಲಾತಿ ಹೆಚ್ಚಳ; ಮೊದಲು ಧ್ವನಿ ಎತ್ತಿದ್ದೆ ನಾವು : ಶ್ರೀರಾಮುಲು

ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನಾ ಸಮಾರಂಭ

Team Udayavani, Oct 26, 2022, 3:51 PM IST

1-asdasdad

ಕುರುಗೋಡು : ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪೂರ್ತಿ ಪ್ರತಿಷ್ಠಾಪನೆ ಯನ್ನು ಸಚಿವ ಬಿ. ಶ್ರೀರಾಮುಲು ಹಾಗೂ ಶಾಸಕ ಜೆ. ಎನ್. ಗಣೇಶ್ ನೆರೆವೇರಿಸಿದರು.

ನಂತರ ಸಚಿವ ಶ್ರೀರಾಮುಲು ಮಾತನಾಡಿ, ಮಹರ್ಷಿ ವಾಲ್ಮೀಕಿ ಜ್ಞಾನದ ಆಗರವಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ತಮ್ಮಲ್ಲಿನ ಜ್ಞಾನ ಭಂಡಾರವನ್ನು ಜಗತ್ತಿಗೆ ಪರಿಚಯಿಸಿದ್ದಾರೆ’ ಎಂದು ಹೇಳಿದರು.

ಜನಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳು ಹಾಗೂ ಸವಾಲುಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಮತ್ತು ಪರಿಹಾರವಿದೆ. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ’ ಎಂದರು.

ಸಮಾಜದವರು ಮಕ್ಕಳಿಗೆ ವಾಲ್ಮೀಕಿ ಜೀವನದ ಕುರಿತು ತಿಳಿಸಬೇಕು. ಉತ್ತಮ ಶಿಕ್ಷಣ ಕೊಡಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ತಳ ಸಮುದಾಯವಾದ ಈ ಸಮಾಜಕ್ಕೆ ರಾಜಕೀಯವಾಗಿ ಸಿಕ್ಕಿರುವ ಮೀಸಲಾತಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸಿಗಬೇಕಾಗಿದೆ ಎಂದು ಹೇಳಿದರು.

ವಾಲ್ಮೀಕಿ ಮಹಾನ್ ವ್ಯಕ್ತಿಯಾಗಿದ್ದು, ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೀಸಲಾತಿ ಹೆಚ್ಚಳ ಕುರಿತು ಈಗಾಗಲೇ ಸರಕಾರದಿಂದ ಕೊಡಿಸಲಾಗಿದ್ದು, ಸಮುದಾಯದ ಜನರಿಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ ಎಂದರು.

ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಮೊದಲು ದ್ವನಿ ಎತ್ತಿದ್ದೆ ನಾವು ಇಂದು ಅದಕ್ಕೆ ಪ್ರತಿ ಫಲ ಸಿಕ್ಕಿದೆ ಸಮುದಾಯದ ಜನರಿಗೆ ರಾಮುಲು ಏನು ಅಂತ ಗೊತ್ತಿದೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ 2023 ರ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಗಳಾದ ಬಿ. ನಾರಾಯಪ್ಪ, ರಾಜು ನಾಯಕ, ಅವರು ತಮ್ಮ ತಮ್ಮ ಸಂಗಡಿಗರ ಹಾಗೂ ಅಭಿಮಾನಿಗಳ ಮುಖಂತರ ತಮಟೆ ಬಾರಿಸುತ್ತ ಕೇಕೆ ಹಾಕುತ್ತ ವೇದಿಕೆ ಕಡೆ ಆಗಮಿಸಿದರೆ ಇತ್ತ ಹಾಲಿ ಶಾಸಕ ಗಣೇಶ್ ಕೂಡ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜೊತೆಗೆ ಅದ್ದೂರಿಯಾಗಿ ಕಂಡರೂ ಇನ್ನೂ ಮಾಜಿ ಶಾಸಕ ಸುರೇಶ್ ಬಾಬು ಮತ್ತು ಸಚಿವ ಶ್ರೀರಾಮುಲು ಅದ್ದೂರಿಯಾಗಿ ಅಭಿಮಾನಿಗಳ ಮತ್ತು ಕಾರ್ಯಕರ್ತರ ಜೊತೆಗೆ ತೆರಳಿ ಪುತ್ಥಳಿ ಅನಾವರಣ ಗೊಳಿಸಿದ ಸಂದರ್ಭ ಕಂಡು ಬಂದಿತು.

ದೇವಸ್ಥಾನ ದಲ್ಲಿ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಷಡಕ್ಷರಿ ಅವದೂತ ಸ್ವಾಮಿಗಳು, ಶಾಸಕ ಗಣೇಶ್, ಮಾಜಿ ಶಾಸಕ ಸುರೇಶ್ ಬಾಬು, ರಾಮಸಾಗರ ನಾರಾಯಣಪ್ಪ, ರಾಜು ನಾಯಕ, ನಿವೃತ್ತ ಪಿಎಸ್ ಐ ಕೃಷ್ಣಮೂರ್ತಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಂಘ ಸಂಸ್ಥೆಯ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.