Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ


Team Udayavani, Oct 19, 2024, 8:13 AM IST

3-siruguppa

ಸಿರುಗುಪ್ಪ: ಆಸ್ತಿಗಾಗಿ ತಂದೆಯೇ ಮಗಳನ್ನು ಕೊಲೆ ಮಾಡಲು ಮುಂದಾದ ಘಟನೆ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ, ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.18ರ ಶುಕ್ರವಾರ ನಡೆದಿದೆ.

ಅರಳಿಗನೂರು ಗ್ರಾಮದ ದೊಡ್ಡರಂಗಪ್ಪನಿಗೆ ಶಿವಲಿಂಗಮ್ಮ ಅವರು ಮೊದಲನೇ ಪತ್ನಿ ಹಾಗೂ ಜಯಮ್ಮ ಅರು ಎರಡನೇ ಪತ್ನಿಯಾಗಿದ್ದು, ಮೊದಲನೇ ಪತ್ನಿ ಶಿವಲಿಂಗಮ್ಮನಿಗೆ ಗೊತ್ತಿಲ್ಲದಂತೆ ದೊಡ್ಡ ರಂಗಪ್ಪ ತನ್ನ ಎರಡನೇ ಪತ್ನಿ ಜಯಮ್ಮಳ ಹೆಸರಿಗೆ ಆಸ್ತಿಯನ್ನು ಮಾಡಿಸಿದ್ದರಿಂದ ಶಿವಲಿಂಗಮ್ಮನ ಮಗಳು ಸೋಮಲಿಂಗಮ್ಮ ತನಗೆ ಅಸ್ತಿಯಲ್ಲಿ ಪಾಲು ಬರಬೇಕೆಂದು ಸಿರುಗುಪ್ಪದ ಸಿವಿಲ್ ನ್ಯಾಯಾಲಯದಲ್ಲಿ ಅಕ್ಟೋಬರ್ 1 ರಂದು ದಾವೆ ಹೂಡಿದ್ದಳು.

ಇದರಿಂದಾಗಿ ಸಿಟ್ಟಿಗೆದ್ದ ದೊಡ್ಡರಂಗಪ್ಪ, ಅ.16 ರಂದು ಸಿರುಗುಪ್ಪದಿಂದ ಅರಳಿಗನೂರಿಗೆ ಬಸ್ಸಿನಲ್ಲಿ ಬಂದ ಮಗಳು ಸೋಮಲಿಂಗಮ್ಮಳನ್ನು ಪಂಪನಗೌಡ ಮನೆ ಬಳಿಯ ಓಣಿಯಲ್ಲಿ ನಿಲ್ಲಿಸಿ ನಿನಗೆ ಆಸ್ತಿಯಲ್ಲಿ ಪಾಲು ಕೊಡಬೇಕಾ ಎಂದು ಕುತ್ತಿಗೆಗೆ ಕೈ ಹಾಕಿ ನಿನ್ನನ್ನು ಕೊಂದು ಬಿಡುತ್ತೇನೆಂದು ಚಾಕುವಿನಿಂದ ಏಕಾಏಕಿ ಹಲ್ಲೆ ಮಾಡಿ, ಕುತ್ತಿಗೆಗೆ 2-3 ಬಾರಿ ಚಾಕುವಿನಿಂದ ಚುಚ್ಚಿದ್ದಾನೆ.

ಮಗಳು ಸೋಮಲಿಂಗಮ್ಮ ಚಾಕುವನ್ನು ಗಟ್ಟಿಯಾಗಿ ಹಿಡಿದುಕೊಂಡು ಜೋರಾಗಿ ಕೂಗಿಕೊಂಡಿದ್ದರಿಂದ ಅಕ್ಕಪಕ್ಕದ ಮನೆಯವರು ಸೇರಿ ಸೋಮಲಿಂಗಮ್ಮನನ್ನು ಬಿಡಿಸಿಕೊಂಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ದೊಡ್ಡರಂಗಪ್ಪ, ಮಗಳ ಹೊಟ್ಟೆಗೆ ಚಾಕುವಿನಿಂದ ತಿವಿದು ಅಲ್ಲಿಂದ ಓಡಿ ಹೋಗಿದ್ದಾನೆ.

ಘಟನೆಯ ಪರಿಣಾಮ ಹಲ್ಲೆಗೊಳಗಾದ ಮಗಳನ್ನು ಚಿಕಿತ್ಸೆಗಾಗಿ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಹಲ್ಲೆಗೊಳಗಾದ ಸೋಮಲಿಂಗಮ್ಮನ ತಾಯಿ ಶಿವಲಿಂಗಮ್ಮ ಅವರು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಅ.17 ರಂದು ದೂರು ದಾಖಲಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಟಾಪ್ ನ್ಯೂಸ್

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

6-anasthesia

Anesthesia: ರೋಗಿ ಸುರಕ್ಷೆಗೆ ಒಂದು ನಮನ – ವಿಶ್ವ ಅರಿವಳಿಕೆ ದಿನ ಅಕ್ಟೋಬರ್‌ 16

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

5-health

Global Infection Control: ಜಾಗತಿಕ ಸೋಂಕು ನಿಯಂತ್ರಣ ಸಪ್ತಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.