
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Team Udayavani, May 21, 2024, 5:13 PM IST

ಬಳ್ಳಾರಿ: ಮಧು ಬಂಗಾರಪ್ಪ ಅವರನ್ನು ಶಿಕ್ಷಣ ಸಚಿವರನ್ನಾಗಿ ಪಡೆಯುವುದಕ್ಕೆ ನಮ್ಮ ಮಕ್ಕಳು, ನಮ್ಮ ರಾಜ್ಯ ಏನು ಕರ್ಮ ಮಾಡಿತ್ತೋ ಎಂದು ಬಳ್ಳಾರಿಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದ ಮೇಲೆ ಶಿಕ್ಚಣದ ಸ್ಥಿತಿ ಅಧೋಗತಿಗೆ ತಲುಪಿದೆ. ಕಳೆದ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ. 83 ಫಲಿತಾಂಶ ಬಂದಿತ್ತು. ಆದರೆ ಈ ಬಾರಿ ಕೇವಲ ಶೇ. 53 ಫಲಿತಾಂಶ ಬಂದಿದೆ, 33% ಕಡಿಮೆಯಾಗಿದೆ. ಇಷ್ಟೊಂದು ಫಲಿತಾಂಶ ಕುಸಿಯಲು ಕಾರಣ ಶಿಕ್ಷಣದ ಬಗ್ಗೆ ಕಾಳಜಿ ಇಲ್ಲದ ಸರ್ಕಾರ. ಇದಕ್ಕೆ ಯಾರು ಹೊಣೆ? ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದರು.
ಶಿಕ್ಷಣದ ಗುಣಮಟ್ಟ ಅತ್ಯಂತ ಕಳೆಪೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರ ಹಾಗು ಮಂತ್ರಿಗಳು ಹೊಣೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಯಾವ ಮೆರಿಟ್ ನೋಡಿ ಶಿಕ್ಷಣ ಖಾತೆ ಕೊಟ್ಟಿದ್ದಾರೆ, ದೇವರೆ ಕಾಪಾಡಬೇಕು. ಕಲ್ಯಾಣ ಕರ್ನಾಟಕದಲ್ಲಿ 17,796 ಶಿಕ್ಷಕರ ಕೊರತೆಯಿದೆ. ಆದರೆ ಕಾಂಗ್ರೆಸ್ ನವರು ಕಲ್ಯಾಣ ಕರ್ನಾಟಕ್ಕೆ ನ್ಯಾಯ ಒದಗಿಸುತ್ತೇವೆ ಎಂದಿದ್ದಾರೆ. ಶಿಕ್ಷಕರ ವರ್ಗಾವಣೆ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಈ ಸರ್ಕಾರಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದು ರವಿಕುಮಾರ್ ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.