![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 29, 2018, 7:00 AM IST
ಸಿರುಗುಪ್ಪ: ಸರ್ಕಾರಿ ಶಾಲೆಗಳ ದುಃಸ್ಥಿತಿಯಿಂದ ಬೇಸತ್ತ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಆರಂಭಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕಿನಲ್ಲಿರುವ 45 ಪ್ರಾಥಮಿಕ, 89 ಪ್ರೌಢಶಾಲಾ ಕೊಠಡಿಗಳ ದುರಸ್ತಿಗೆ ಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕರೂರಿನ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಸೇರಿದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೋದಿ ಮತ್ತು ಕುಮಾರಸ್ವಾಮಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆಯುವ ಮೂಲಕ ಸರಕಾರಿ ಶಾಲೆಗಳಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಸಿರುಗುಪ್ಪ ತಾಲೂಕಿನ 45 ಪ್ರೌಢಶಾಲೆ,89 ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಗೊಂಡು ಗಂಭೀರ ಸ್ಥಿತಿಗೆ ತಲುಪಿವೆ. ಕೊಠಡಿಗಳಲ್ಲಿ ಕುಳಿತು ಪಾಠ-ಪ್ರವಚನ ಕೇಳಲು ಸಾಧ್ಯವಾಗದ ಸ್ಥಿತಿ ಇದೆ. ಈ ಕಟ್ಟಡಗಳು ಯಾವಾಗ ನಮ್ಮ ಮೇಲೆ ಬೀಳುತ್ತವೆಯೋ ಎಂಬ ಭೀತಿ ಕಾಡುತ್ತಿದೆ. 89 ಶಾಲಾ ಕೊಠಡಿಗಳ ಮೇಲ್ಛಾವಣಿಗಳು ಸಂಪೂರ್ಣ ಬೀಳುವ ಸ್ಥಿತಿಯಲ್ಲಿವೆ. ಮಳೆ ಬಂದಾಗ ಕೊಠಡಿಗಳಲ್ಲಿ ನೀರು ತೊಟ್ಟಿಕ್ಕುತ್ತಿದ್ದು, ಕೊಠಡಿಗಳ ಎಲ್ಲಾ ಗೋಡೆಗಳು ಸಂಪೂರ್ಣ ಶಿಥಿಲಗೊಂಡಿವೆ ಎಂದು
ಸಮಸ್ಯೆ ವಿವರಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.