ಇತಿಹಾಸದ ಕುರುಹು ಉಳಿಸಿ-ಬೆಳೆಸುವುದು ಕರ್ತವ್ಯ

ಕೋಟೆಯ ಗೋಡೆ ಮತ್ತು ಮಂಟಪಗಳನ್ನು ದುರಸ್ತಿಗೊಳಿಸಿ ಸಂರಕ್ಷಿಸಲಾಗುವುದು ಎಂದರು.

Team Udayavani, Jun 7, 2022, 5:47 PM IST

ಇತಿಹಾಸದ ಕುರುಹು ಉಳಿಸಿ-ಬೆಳೆಸುವುದು ಕರ್ತವ್ಯ

ಕಂಪ್ಲಿ: ನಮ್ಮ ನಾಡಿನ ಭವ್ಯತೆಯನ್ನು ಸಾರುವ ಇತಿಹಾಸದ ಕುರುಹುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಜೆ.ಎನ್‌.ಗಣೇಶ್‌ ತಿಳಿಸಿದರು.

ಅವರು 2021-22ನೇ ಸಾಲಿ ರಾಜ್ಯ ಪುರಾತತ್ವ ಸಂಗ್ರಾಲಯ ಮತ್ತು ಪರಂಪರೆ ಇಲಾಖೆ ಅನುದಾನದ ಯೋಜನೆಯಡಿಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ನಾಂದಿ ಹಾಡಿದ ಕಂಪ್ಲಿಯ ಐತಿಹಾಸಿಕ ಗಂಡುಗಲಿ ಕುಮಾರ ರಾಮನ ಕೋಟೆಯ ಕೋಟೆ ದ್ವಾರ ಬಾಗಿಲು ಮತ್ತು ಮಂಟಪಗಳ ಸಂರಕ್ಷಣಾ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಂಪ್ಲಿ ಜನತೆಯ ಬಹುದಿನಗಳ ಕನಸಾಗಿದ್ದ ಶಿಥಿಲಗೊಂಡ ಗಂಡುಗಲಿ ಕುಮಾರರಾಮನ ಕೋಟೆ ದ್ವಾರದ ಜೀರ್ಣೋದ್ಧಾರದ ಕನಸು ಇಂದು ನನಸಾಗುತ್ತಿದೆ. ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡುವುದಕ್ಕೆ ಇಲಾಖೆಯಲ್ಲಿ ಅವಕಾಶವಿಲ್ಲದಿದ್ದರೂ ಸಹಿತ ಕೋಟೆ ಈಗ ಹೇಗಿದೆಯೋ ಹಾಗೆಯೇ ಕೋಟೆಯ ಗೋಡೆ ಮತ್ತು ಮಂಟಪಗಳನ್ನು ದುರಸ್ತಿಗೊಳಿಸಿ ಸಂರಕ್ಷಿಸಲಾಗುವುದು ಎಂದರು.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಪುರಾತತ್ವ ಸಂರಕ್ಷಣಾ ಸಹಾಯಕರಾದ ಚಂದ್ರಶೇಖರ ವಿ. ಮಸಳಿ ಮಾತನಾಡಿ, ಕೋಟೆ ಸಂರಕ್ಷಣೆಗೆ ಇಲಾಖೆಯಿಂದ 1 ಕೋಟಿ ರೂ. ಮಂಜೂರಾಗಿದ್ದು, ಕೋಟೆಯ ಮೂಲಕ್ಕೆ ಧಕ್ಕೆ ಬಾರದಂತೆ ಶಿಥಿಲಗೊಂಡಿರುವ ಭಾಗಗಳನ್ನು ದುರಸ್ತಿಗೊಳಿಸಲಾಗುವುದು. ಅತಿಕ್ರಮಗೊಂಡ ಸ್ಥಳವನ್ನು ಬಿಡಿಸಿಕೊಂಡು ಮಂಟಪಗಳನ್ನು ದುರಸ್ತಿಗೊಳಿಸಿ ಕೋಟೆಯನ್ನು ಆಕರ್ಷಿಸುವಂತೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಲಡ್ಡು ಹೊನ್ನೂರವಲಿ, ಭಟ್ಟ ಪ್ರಸಾದ್‌, ವೀರಾಂಜಿನೇಯಲು, ವೀರಾಂಜಿನೇಯಲು, ಮುಖಂಡರಾದ ಕೆ.ಚಂದ್ರಶೇಖರ್‌,
ನಾಗಲಾರೆಪ್ಪ, ಕಂಬತ್‌ ಕೃಷ್ಣ, ಕಂಬತ್‌ ರಮೇಶ್‌, ಬಾಗಲಿ ಮಂಜುನಾಥ್‌, ಮಣ್ಣೂರು ನವೀನ್‌, ಕಟ್ಟೆ ಮಾರೆಪ್ಪ, ಕಾರಕಲ್‌ ಮನೋಹರ್‌, ಯಾಳಿ³ ಅಬ್ದುಲ್‌ ಮುನಾಫ್‌, ಹುಸೇನ್‌ಸಾಬ್‌, ಜಾಫರ್‌, ಜಿ. ಪ್ರಕಾಶ್‌, ಮಹಿಳಾ ಮುಖಂಡರಾದ ಹೊನ್ನಳ್ಳಿ ಶ್ರೀದೇವಿ, ರತ್ನಮ್ಮ, ಲಬೇದ್‌ ಲಕ್ಷ್ಮೀ, ಷಣ್ಮುಖಪ್ಪ, ಹಬೀಬ್‌ ರೆಹಮಾನ್‌ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರBY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.