![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 24, 2018, 3:00 AM IST
ಬಳ್ಳಾರಿ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮೈತ್ರಿ ಸರಕಾರವನ್ನು ಉರುಳಿಸಲು ಯಾವುದೇ ರಾಜಕೀಯ ತಂತ್ರಗಾರಿಕೆ ಮಾಡಿಲ್ಲ. ಆಪರೇಷನ್ ಕಮಲಕ್ಕೆ ನಾವು ಕೈ ಹಾಕಿಲ್ಲ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ತಿಳಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಯಾರೊಂದಿಗೂ ಸಂಪರ್ಕದಲ್ಲಿಲ್ಲ. ನನ್ನ ಸಂಭಾಷಣೆಯುಳ್ಳ ಸುಳ್ಳು ಆಡಿಯೋ ತುಣುಕು ಬಿಡುಗಡೆಗೊಳಿಸಿ, ಅನಗತ್ಯ ಗೊಂದಲ ಸೃಷ್ಟಿಸಲು ಕಾಂಗ್ರೆಸ್-ಜೆಡಿಎಸ್ನವರು ಮುಂದಾಗಿದ್ದಾರೆ’ ಎಂದು ಆರೋಪಿಸಿದರು. ರಮೇಶ್ ಜಾರಕಿಹೊಳಿ ನಮ್ಮ ಸಮುದಾಯದವರು. ಸಮುದಾಯದ ವಿಚಾರ ಬಂದಾಗ ನಾವೆಲ್ಲ ಒಂದಾಗುತ್ತೇವೆ. ಆದರೆ ಪಕ್ಷದ ವಿಚಾರ ಬಂದಾಗ ನಾವೆಲ್ಲ ಹೈಕಮಾಂಡ್ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ ಎಂದರು.
You seem to have an Ad Blocker on.
To continue reading, please turn it off or whitelist Udayavani.