![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 14, 2020, 5:54 AM IST
ಬಳ್ಳಾರಿ: ವಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರನ್ನು ಕ್ವಾರಂಟೈನ್ ಮಾಡಿದಂತೆ, ಸ್ಟಾಫ್ ನರ್ಸ್, ಶುಶ್ರೂಷಕರನ್ನೂ ಕ್ವಾರಂಟೈನ್ ಮಾಡಬೇಕು ಎಂದು ಒತ್ತಾಯಿಸಿ ವೈದ್ಯರು, ಸ್ಟಾಫ್ ನರ್ಸ್ಗಳು, ಡಿ ಗ್ರೂಪ್ ನೌಕರರು, ಪಿಜಿ ವಿದ್ಯಾರ್ಥಿಗಳು ಕೆಲಸ ಸ್ಥಗಿತಗೊಳಿಸಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ದಾಖಲಾಗಿದ್ದ ಸಿರುಗುಪ್ಪ ತಾಲೂಕು ಗೋಸಬಾಳೂ ಗ್ರಾಮದ 18 ವರ್ಷದ ಯುವತಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸೋಂಕಿತ ಯುವತಿಗೆ ಚಿಕಿತ್ಸೆ ನೀಡಿದ್ದ ವೈದ್ಯರನ್ನು ಕ್ವಾರಂಟೈನ್ ಮಾಡಲಾಗಿದೆ. ಅದರಂತೆ ಸೋಂಕಿತೆಗೆ ಚಿಕಿತ್ಸೆ ನೀಡಲು ಸಹಕರಿಸಿದ ಸ್ಟಾಫ್ ನರ್ಸ್, ಶುಶ್ರೂಷಕಿಯರನ್ನು ಸಹ ಕ್ವಾರಂಟೈನ್ ಮಾಡಬೇಕು ಎಂದು ಪ್ರತಿಭಟನಾನಿರತ ವೈದ್ಯರು, ಸ್ಟಾಫ್ ನರ್ಸ್ಗಳು ಆಗ್ರಹಿಸಿದ್ದಾರೆ. ವೈದ್ಯರು, ಸ್ಟಾಫ್ ನರ್ಸ್ಗಳು ಕೆಲಸ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಸ್ಥಳಕ್ಕಾಗಮಿಸಿದ ವಿಮ್ಸ್ ನಿರ್ದೇಶಕ ಡಾ| ಬಿ.ದೇವಾನಂದ್, ವಿಮ್ಸ್ ಅಧೀಕ್ಷಕ ಡಾ| ಮರಿರಾಜ್ ಅವರು, ಕೆಲಸ ಸ್ಥಗಿತಗೊಳಿಸಿದ್ದ ವೈದ್ಯರು, ಸ್ಟಾಫ್ ನರ್ಸ್, ಡಿ.ಗ್ರೂಪ್ ನೌಕರರೊಂದಿಗೆ ಚರ್ಚಿಸಿದರು. ವಿಮ್ಸ್ನಲ್ಲಿ ಕೆಲಸ ಮಾಡುತ್ತಿರುವ ಎಲ್ಲರಿಗು ಪಿಪಿಇ ಕಿಟ್ಗಳನ್ನು ವಿತರಿಸುವುದಾಗಿ ಭರವಸೆ ನೀಡುವ ಮೂಲಕ ಮನವೊಲಿಸಿದರು. ಬಳಿಕ ಎಲ್ಲರೂ ಪ್ರತಿಭಟನೆ ಸ್ಥಗಿತಗೊಳಿಸಿದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.