ಗಾಳಿ-ಮಳೆ; 551.36 ಹೆಕ್ಟರ್‌ ಬೆಳೆ ಹಾನಿ


Team Udayavani, May 20, 2022, 2:24 PM IST

papaya

ಬಳ್ಳಾರಿ: ಗಣಿನಾಡು ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಗಾಳಿಮಳೆಗೆ 551.36 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, 337 ಮನೆಗಳು ಶಿಥಿಲಗೊಂಡಿವೆ. ವಿಜಯನಗರ ಜಿಲ್ಲೆಯಲ್ಲಿ ಕೃಷಿ ಬೆಳೆ ಹೆಚ್ಚು ಹಾನಿಯಾಗಿದ್ದು, ಜಾನುವಾರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿವೆ.

ಬಳ್ಳಾರಿ ಜಿಲ್ಲೆ 7.92 ಲಕ್ಷ ರೂ. ನಷ್ಟ

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಒಂದೆರಡು ಬಾರಿ ರಭಸವಾಗಿ ಸುರಿದರೆ, ಉಳಿದಂತೆ ಸಾಧಾರಣವಾಗಿ ಜಿಟಿಜಿಟಿಯಾಗಿ ಸುರಿದಿದೆ. ಹೀಗೆ ಸುರಿದ ಮಳೆಗೆ ಬಳ್ಳಾರಿ ಜಿಲ್ಲೆಯ ಬಳ್ಳಾರಿ 14, ಕುರುಗೋಡು 9, ಸಿರುಗುಪ್ಪ 11, ಸಂಡೂರು 4, ಕಂಪ್ಲಿ 4 ಸೇರಿ ಒಟ್ಟು 42 ಮನೆಗಳು ಕುಸಿದಿವೆ. ಈ ಪೈಕಿ 39 ಭಾಗಶಃ ಕುಸಿದಿದ್ದು, ಮೂರು ಮನೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳ್ಳಾರಿ ತಾಲೂಕು ಬಿ.ಡಿ. ಹಳ್ಳಿ ಗ್ರಾಮದಲ್ಲಿ 8.9 ಹೆಕ್ಟೇರ್‌ ಭತ್ತ, ಕಪ್ಪಗಲ್ಲು ಗ್ರಾಮದಲ್ಲಿ 9 ಹೆಕ್ಟೇರ್‌ ಪಪ್ಪಾಯಿ ಬೆಳೆಗಳು ಬಿರುಗಾಳಿ ಸಹಿತ ಮಳೆಗೆ ಹಾನಿಯಾಗಿದ್ದು, ಅಂದಾಜು 7.91 ಲಕ್ಷ ರೂ. ನಷ್ಟವಾಗಿದೆ ಎಂದು ಜಿಲ್ಲಾಡಳಿತದ ಅಂಕಿ ಅಂಶಗಳು ತಿಳಿಸಿವೆ.

ಬಳ್ಳಾರಿ ತಾಲೂಕು ಡಿ.ಕಗ್ಗಲ್ಲು ಗ್ರಾಮದಲ್ಲಿ ಬುಧವಾರ ರಾತ್ರಿ ಸಿಡಿಲು ಬಡಿದು 4 ದೊಡ್ಡ, 2 ಚಿಕ್ಕವು ಸೇರಿ 6 ಕುರಿಗಳು ಸಾವಿಗೀಡಾಗಿವೆ. ಇನ್ನು ಬಳ್ಳಾರಿ ನಗರ ಹೊರವಲಯದಲ್ಲಿ ಗಾಳಿ ಮಳೆಗೆ 38 ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 48 ಗಂಟೆಯಲ್ಲಿ 43.2 ಮಿಲಿಮೀಟರ್‌ ಮಳೆಯಾಗಿದೆ. ಈ ಪೈಕಿ ಕುರುಗೋಡು ತಾಲೂಕಲ್ಲಿ ಅತಿಹೆಚ್ಚು 66.7 ಮಿಮಿ ಮಳೆಯಾಗಿದ್ದು, ಸಿರುಗುಪ್ಪ 61.1, ಸಂಡೂರು 39.6, ಬಳ್ಳಾರಿ 31.4, ಕಂಪ್ಲಿ 3.3 ಮಿಮಿ ಮಳೆಯಾಗಿದೆ.

ವಿಜಯನಗರ; 542.46 ಹೆಕ್ಟೇರ್‌ ಬೆಳೆ ಹಾನಿ

ವಿಜಯನಗರ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ 542.46 ಹೆಕ್ಟೇರ್‌ ಬೆಳೆ, 118.84 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದೆ. 295 ಮನೆಗಳು ಭಾಗಶಃ ಕುಸಿದಿದ್ದು, 8 ಮನೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಆದರೆ, ಯಾವುದೇ ಪ್ರಾಣ ಹಾನಿಸಂಭವಿಸಿಲ್ಲ. ಇನ್ನು ಈವರೆಗೆ 4 ಜಾನುವಾರು, 34 ಕುರಿಗಳು ಸಿಡಿಲಿಗೆ ಮೃತಪಟ್ಟಿವೆ ಎಂದು ವಿಜಯನಗರ ಜಿಲ್ಲಾಡಳಿತದ ಅಂಕಿ ಅಂಶಗಳು ಸ್ಪಷ್ಟಪಡಿಸಿವೆ.

ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಇಡೀ ದಿನ ಸುರಿದ ಮಳೆಗೆ ಹತ್ತು ಮನೆಗಳು ಭಾಗಶಃ ಬಿದ್ದಿದ್ದು, 250.50 ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಹೊಸಪೇಟೆ ತಾಲೂಕಿನಲ್ಲಿ ಎರಡು ಮನೆ, ಮರಿಯಮ್ಮನಹಳ್ಳಿ ಹೋಬಳಿಯಲ್ಲಿ ಒಂದು, ಹೊಸಪೇಟೆ ಕಸಬಾಹೋಬಳಿಯ ಬಸವನದುರ್ಗ ಗ್ರಾಮದಲ್ಲಿ ಒಂದು ಮನೆ ಭಾಗಶಃ ಬಿದ್ದಿದೆ. ಕೊಟ್ಟೂರು ತಾಲೂಕಿನಲ್ಲಿ ನಾಲ್ಕು ಮನೆ, ಕೂಡ್ಲಿಗಿ ತಾಲೂಕಿನಲ್ಲಿ ಮೂರು ಮನೆಗಳು ಭಾಗಶಃ ಕುಸಿದಿವೆ.

ಹರಪನಹಳ್ಳಿ ತಾಲೂಕಿನ ಅರಸಿಕೆರೆ ಹೋಬಳಿಯ ಲಕ್ಷ್ಮೀಪುರ, ಸಿಂಗ್ರಹಳ್ಳಿ ಭಾಗದಲ್ಲಿ 230.50 ಎಕರೆ ಭತ್ತ, ಹೂವಿನಹಡಗಲಿ ತಾಲೂಕಿನಲ್ಲಿ 20 ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮರಗಿಡಗಳು ಹಾಗೂ ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲೂ ವಿದ್ಯುತ್‌ ವ್ಯತ್ಯಯದಿಂದ ಎಂ.ಪಿ. ಪ್ರಕಾಶನಗರ, ಸಂಕ್ಲಾಪುರ ಸೇರಿದಂತೆ ವಿವಿಧ ಬಡಾವಣೆಗಳ ಜನರು ವಿದ್ಯುತ್‌ ಕಡಿತದಿಂದ ಸಮಸ್ಯೆ ಎದುರಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.