ಹೊಟ್ಟೆ ತುಂಬಾ ಹೋಳಿಗೆ-ತುಪ್ಪ ತಿಂದ ಭಕ್ತರು

ನಾವದಗಿಯಲ್ಲಿ ರೇವಪ್ಪಯ್ನಾ ಶರಣರ ಭಿನ್ನಹ ಜಾತ್ರೆ •ಊಟ ಮಾಡಿದವರಿಗೆ ಬಾರದು ಯಾವುದೇ ರೋಗ

Team Udayavani, Jun 24, 2019, 2:46 PM IST

24-June-25

ಭಾಲ್ಕಿ: ನಾವದಗಿ ಗ್ರಾಮದ ಶ್ರೀ ರೇವಪ್ಪಯ್ನಾ ಸ್ವಾಮಿಗಳ ಮಂದಿರದಲ್ಲಿ ಬಿನ್ನಹ ಜಾತ್ರೆಯ ನಿಮಿತ್ತ ಹೂರಣಗಡುಬು ತಯಾರಿಸುತ್ತಿರುವ ಭಕ್ತರು.

ಭಾಲ್ಕಿ: ನಾವದಗಿ ಗ್ರಾಮದಲ್ಲಿ ರವಿವಾರ ಸದ್ಗುರು ಶ್ರೀ ರೇವಪ್ಪಯ್ಯ ಶರಣರ ಹೋಳಿಗೆ ತುಪ್ಪದ ಬಿನ್ನಹ ಜಾತ್ರೆ ಸಂಭ್ರಮದಿಂದ ಜರುಗಿತು. ಜಾತ್ರೆಗೆ ಆಗಮಿಸಿದ ಸಾವಿರಾರು ಭಕ್ತರು ಹೋಳಿಗೆ ಮತ್ತು ಹೂರಣಗಡುಬುಗಳ ಜತೆಗೆ ಬಟ್ಟಲುಗಟ್ಟಲೇ ತುಪ್ಪ ಸವಿದರು.

ಪವಾಡ ಪುರಷ ಸದ್ಗುರು ಶ್ರೀ ರೇವಪ್ಪಯ್ಯ ಸ್ವಾಮಿಗಳ ಜೀವಿತ ಕಾಲಾವಧಿಯಿಂದಲೂ ಈ ಜಾತ್ರೆ ನಡೆದುಕೊಂಡು ಬಂದಿದೆ. ನಂತರದ ದಿನಗಳಲ್ಲೂ ಶ್ರೀಗಳ ಆಜ್ಞಾನುಸಾರ ಅವರ ಅನುಯಾಯಿಗಳು, ಹೋಳಿಗೆ ತುಪ್ಪ ಬಿನ್ನಹ ಜಾತ್ರೆಯನ್ನು ಮುಂದು ವರಿಸಿಕೊಂಡು ಬಂದಿದ್ದಾರೆ.

ಸದ್ಗುರುಗಳ ಜೀವಿತಾವಧಿ ಸಮಯದಲ್ಲಿ ಶ್ರೀಗಳ ಸಮ್ಮುಖದಲ್ಲಿ ಈ ಬಿನ್ನಹ ಜಾತ್ರೆಗೆ ತುಪ್ಪ ಕಡಿಮೆ ಬಿದ್ದರೆ ಶ್ರೀಗಳು, ಅಲ್ಲಿಯೇ ಇದ್ದ ತೆರೆದ ಬಾವಿಯ ನೀರನ್ನು ತುಪ್ಪವಾಗಿ ಪರಿವರ್ತಿಸಿ, ಭಕ್ತರಿಗೆ ಉಣ ಬಡಿಸಿದ್ದರು ಎನ್ನುವ ಪ್ರತೀತಿ ಇದೆ. ಹೀಗಾಗಿ ಶ್ರೀಗಳ ಈ ಪವಾಡದಿಂದ ಜಾತ್ರೆಯಲ್ಲಿ ಹೋಳಿಗೆ ತುಪ್ಪದ ಊಟದ ಪರಂಪರೆ ಮುಂದುವರಿದು ಬಂದಿದೆ. ಅಲ್ಲದೆ ಈ ಜಾತ್ರೆಯಲ್ಲಿ ಊಟ ಮಾಡಿದವರಿಗೆ ಯಾವುದೇ ರೋಗ ಬರುವುದಿಲ್ಲ ಎನ್ನುವ ವಿಶೇಷತೆ ಇದೆ. ಆದ್ದರಿಂದ ಸಾವಿರಾರು ಭಕ್ತರು ಈ ಜಾತ್ರೆಗೆ ಆಗಮಿಸಿ ತುಪ್ಪ ಹೋಳಿಗೆ ಪ್ರಸಾದ ಸ್ವೀಕರಿಸುತ್ತಾರೆ.

ಪ್ರಸ್ತುತ ವರ್ಷದ ಷಣ್ಮುಖಸ್ವಾಮಿ ಬಿನ್ನಹ ಜಾತ್ರೆ ನಿಮಿತ್ತ ರವಿವಾರ ಸದ್ಗುರು ರೇವಪ್ಪಯ್ನಾ ಸ್ವಾಮಿಗಳ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು. ನಸುಕಿನಿಂದಲೇ ದೇಗುಲಕ್ಕೆ ತೆರಳಿದ ಭಕ್ತರು ದಿನವೀಡಿ ಕಾಯಿ ಕರ್ಪೂರ, ಅರ್ಪಿಸಿ ದರ್ಶನ ಮಾಡಿದರು. ದರ್ಶನ ಪಡೆಯಲು ರಾಜ್ಯ, ನೆರೆಯ ರಾಜ್ಯದ ಭಕ್ತರು ಆಗಮಿಸಿ ದೇಗುಲದ ಮುಂದೆ ಸರತಿಯಲ್ಲಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೇಗುಲದ ಪ್ರವೇಶದ್ವಾರ ವಿವಿಧ ಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಭಜನೆ, ಪ್ರಾರ್ಥನೆ ವಿವಿಧ ಕೈಂಕರ್ಯಗಳು ನೆರವೇರಿದವು.

ದೇವಸ್ಥಾನದ ಪ್ರಮುಖರಾದ ಶಾಂತವೀರ ಸ್ವಾಮಿ, ರೇವಣಯ್ನಾ ಸ್ವಾಮಿ, ವೈಜಿನಾಥಪ್ಪ ಕನಕಟ್ಟೆ, ವೀರಪ್ಪಾ ಬೇಲೂರೆ, ಪ್ರದೀಪ ಪಾಟೀಲ, ಮಲ್ಲಿಕಾರ್ಜುನ ಶೇರಿಕಾರ, ಮಲ್ಲಿಕಾರ್ಜುನ ಕನಕಟ್ಟೆ, ವೈಜಿನಾಥಪ್ಪ ದಾಬಶೆಟ್ಟೆ, ಪ್ರಭು ಪಾಟೀಲ ಬ್ಯಾಲಹಳ್ಳಿ, ಶಿವರಾಜ ಪಾಟೀಲ ಮಾವಿನಹಳ್ಳಿ, ಡಾ| ಸಿ.ಎಸ್‌.ಮಾಲಿಪಾಟೀಲ, ಗ್ರಾಪಂ ಸದಸ್ಯ ರಾಜಶೇಖರ ಬಿರಾದಾರ, ರೇವಣಪ್ಪಾ ಪೋಲಿಸ್‌ ಪಾಟೀಲ, ಕಿಶನರಾವ್‌ ಲಮಾಣಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.