ಕೆಆರ್‌ಡಿಐಎಲ್‌ ಕಾಮಗಾರಿ ಅಪೂರ್ಣಕ್ಕೆ ಆಕ್ಷೇಪ

ತಾಪಂ ಸಾಮಾನ್ಯ ಸಭೆ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆಗೆ ತಾಪಂ ಸದಸ್ಯರ ಅಸಮಾಧಾನ

Team Udayavani, Dec 6, 2019, 3:27 PM IST

6-December-17

ಭಾಲ್ಕಿ: ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನ ಕಣಜೆ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು.

ಸಭೆ ಆರಂಭವಾಗುತ್ತಲೇ ಸದಸ್ಯರು ಕೆಆರ್‌ಡಿಐಎಲ್‌ ಇಲಾಖೆಯ ಕಾರ್ಯವೈಖರಿ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದರು. ಕೆಆರ್‌ಡಿಐಎಲ್‌ನಿಂದ ಮೇಹಕರ್‌, ಖಟಕ್‌ ಚಿಂಚೋಳಿಯಲ್ಲಿ ನಿರ್ಮಾಣಗೊಂಡ ವಸತಿ ನಿಲಯದ ಕಟ್ಟಡಗಳನ್ನು ಹಸ್ತಾಂತರ ಮಾಡದಿರುವುದು, ತಾಲೂಕಿನ ನಾನಾ ಕಡೆಗಳಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿರುವುದು, ಇನ್ನೂ ಕೆಲವು ಕಡೆಗಳಲ್ಲಿ ಕಟ್ಟಡ ಕಳಪೆಯಾಗಿ ನಿರ್ಮಾಣವಾಗುತ್ತಿರುವ ಬಗ್ಗೆ ಸದಸ್ಯರು ಪ್ರಶ್ನಿಸಿದರು.

ಈ ವೇಳೆ ಕೆಆರ್‌ಡಿಐಎಲ್‌ನ ಅಧಿಕಾರಿ ಸಮಜಾಯಿಸಿ, ಉತ್ತರ ನೀಡುವ ಪ್ರಯತ್ನ ಮಾಡಿದರು. ಇದರಿಂದ ಗರಂ ಆದ ಹಲಬರ್ಗಾ,
ಜ್ಯಾಂತಿ, ಖಟಕ್‌ ಚಿಂಚೋಳಿ, ಮದಕಟ್ಟಿ ಕ್ಷೇತ್ರ ಸೇರಿದಂತೆ ಮುಂತಾದ ಸದಸ್ಯರು ಧ್ವನಿಗೂಡಿಸಿ, ಕೆಆರ್‌ಡಿಐಎಲ್‌ನ ಅಧಿಕಾರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಪ್ರತಿಸಲ ನಡೆಯುವ ಸಭೆಗೆ ಸರಿಯಾದ ಮಾಹಿತಿ ನೀಡುವುದಿಲ್ಲ.

ಸಭೆಯಲ್ಲಿ ಹೆಚ್ಚಾಗಿ ಗೈರಾಗಿರುವುದು ಕಂಡು ಬರುತ್ತಿದೆ. ತಾಲೂಕಿನ ನಾನಾ ಕಡೆಗಳಲ್ಲಿ ಕೆಆರ್‌ ಡಿಐಎಲ್‌ನಿಂದ ನಡೆಯುತ್ತಿರುವ ಕಾಮಗಾರಿ ತೃಪ್ತಿ ತಂದಿಲ್ಲ. ಕೆಆರ್‌ಡಿಐಎಲ್‌ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಖಟಕ್‌ ಚಿಂಚೋಳಿ ಕ್ಷೇತ್ರದ ಸದಸ್ಯ ವಿಜಯಕುಮಾರ ಗಡಗಂಚಿ ಮಾತನಾಡಿ, ಖಟಕ್‌ ಚಿಂಚೋಳಿ ಗ್ರಾಮದಲ್ಲಿ ವಸತಿ ನಿಲಯದ ಹೆಚ್ಚುವರಿ ಕೋಣೆಯನ್ನು ಕೆಆರ್‌ಡಿಐಎಲ್‌ನಿಂದ ನಿರ್ಮಿಸಿ ಮೂರು ವರ್ಷ ಕಳೆಯುತ್ತ ಬಂದರೂ ಇದುವರೆಗೂ ಹಸ್ತಾಂತರವಾಗದಿರುವ ಬಗ್ಗೆ ಪ್ರಶ್ನಿಸಿದರು. ಹಲಬರ್ಗಾ ಕ್ಷೇತ್ರದ ಸದಸ್ಯ ಸುಧಾಕರ ಮಾತನಾಡಿ, ಕೋಸಂ ಗ್ರಾಮದಲ್ಲಿ ಕೆಆರ್‌ ಡಿಐಎಲ್‌ನಿಂದ ನಿರ್ಮಿಸಿರುವ ಸಮುದಾಯ ಭವನ ಅರ್ಧಕ್ಕೆ ನಿಂತಿದೆ. ಹಾಲಹಿಪ್ಪರ್ಗಾದಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿವೆ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷ ಮಾರುತಿರಾವ್‌ ಮಗರ್‌, ಕಾರ್ಯನಿರ್ವಾಹಕ ಅಧಿಕಾರ ಬಸವರಾಜ ನಾಯ್ಕರ್‌ ಸೇರಿದಂತೆ ತಾಲೂಕು ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.