ಹಸಿರು ಹೆಚ್ಚಿದರೆ ಬರದಿಂದ ಮುಕ್ತಿ

ಮನೆಗೊಂದು ಸಸಿ ನೆಡುವ ಸಂಕಲ್ಪ ಮಾಡಿದರೆ ಹಸಿರು ನಾಡಾಗಲಿದೆ ಬೀದರ

Team Udayavani, Jul 17, 2019, 3:04 PM IST

17-July-32

ಬೀದರ: ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಸಸಿ ನೆಟ್ಟರು.

ಬೀದರ: ಜಿಲ್ಲೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಗಿಡ-ಮರಗಳನ್ನು ಬೆಳೆಸಿದರೆ ಬರ ಎದುರಾಗುವುದಿಲ್ಲ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಗೀತಾ ಪಂಡಿತರಾವ್‌ ಚಿದ್ರಿ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ಹಮ್ಮಿಕೊಂಡಿದ್ದ ವನ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಿಡ-ಮರಗಳಿದ್ದರೆ ಯಾವುದೇ ಪ್ರದೇಶದಲ್ಲೂ ಬರ ಉಂಟಾಗುವುದಿಲ್ಲ. ಬೀದರ್‌ ಜಿಲ್ಲೆ ಪದೆಪದೆ ಬರಗಾಲಕ್ಕೆ ಒಳಗಾಗುತ್ತಿದ್ದು, ಜಿಲ್ಲೆಯ ಯುವ ಜನರು ಗಿಡ-ಮರಗಳನ್ನು ಹೆಚ್ಚು ಸಂಖ್ಯೆಯಲ್ಲಿ ಬೆಳೆಸಲು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯ ಅಂಗಳದಲ್ಲಿ ಮತ್ತು ಮುಂಭಾಗದಲ್ಲಿ ಗಿಡಗಳನ್ನು ಬೆಳೆಸಬೇಕು. ಮನೆಯಲ್ಲಿ ಪೂಜೆ ಮಾಡಿದಾಗ ಆ ನೀರನ್ನು ರಸ್ತೆ, ಚರಂಡಿಗೆ ಚೆಲ್ಲದೇ ಗಿಡಗಳಿಗೆ ಹಾಕುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಮನೆಗೊಂದು ಸಸಿ ನೆಡುವ ಸಂಕಲ್ಪ ಮಾಡಿದರೆ ಮಾತ್ರ ಜಿಲ್ಲೆ ಹಸಿರು ನಾಡಾಗಿ ಗುರುತಿಸಿಕೊಂಡು ಉತ್ತಮ ಮಳೆ ಸುರಿಯುತ್ತದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ ಗಂದಗೆ ಮಾತನಾಡಿ, ಇಂದು ಸಮಯಕ್ಕೆ ಸರಿಯಾಗಿ ಮಳೆ-ಬೆಳೆ ಆಗದಿರುವುದಕ್ಕೆ ಅರಣ್ಯ ನಾಶವೇ ಮುಖ್ಯ ಕಾರಣವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಗಿಡ ಮರಗಳನ್ನು ಬೆಳೆಸುತ್ತ ಕಾಳಜಿ ವಹಿಸಬೇಕು. ಜನರಲ್ಲಿ ಪರಿಸರ ಕುರಿತು ಜಾಗೃತಿ ಮೂಡಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಇಂದಿನಿಂದಲ್ಲೆ ಸಿದ್ಧತೆ ಮಾಡಬೇಕು ಎಂದರು.

ವಲಯ ಅರಣ್ಯಾಧಿಕಾರಿ ಶಿವರಾಜ ಮೇಟಿ ಮಾತನಾಡಿ, ಅರಣ್ಯ ಇಲಾಖೆಯಿಂದ ಪ್ರತಿವರ್ಷ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರಿ ಪಾಲಿಟೆಕ್ನಿಕ್‌ ಸಂಸ್ಥೆಯ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಈ ವರ್ಷ ಕಾಲೇಜಿನಲ್ಲಿ ನೂರು ಗಿಡ ನೆಡುವ ಗುರಿ ಇದೆ. ವಿದ್ಯಾರ್ಥಿಗಳು ಖಾಲಿ ಜಾಗದಲ್ಲಿ ಗಿಡ ಮರಗಳನ್ನು ಬೆಳೆಸಲು ಮುಂದಾಗಬೇಕು. ಕಾಲೇಜಿನಲ್ಲಿ ನೆಟ್ಟ ಸಸಿಗಳನ್ನು ಮರವಾಗಿ ಬೆಳೆಸಲು ವಿದ್ಯಾರ್ಥಿಗಳು ಕಾಳಜಿ ಬೆಳೆಸಿಕೊಳ್ಳಬೇಕು. ಮನುಷ್ಯನ ಉಳಿವಿಗಾಗಿ ಗಿಡ-ಮರಗಳು ಅನಿವಾವಾರ್ಯ ಎಂಬುದನ್ನು ಪ್ರತಿಯೊಬ್ಬರು ತಿಳಿದುಕೊಂಡರೆ ಮಾತ್ರ ಪರಿಸರ ರಕ್ಷಣೆ ಸಾಧ್ಯ ಎಂದರು.

ಪ್ರಭಾರಿ ಪ್ರಾಚಾರ್ಯ ಮಲ್ಲಿಕಾರ್ಜುನ ಬಿ.ಆರ್‌. ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಅರಿವು ಮೂಡಿಸಲು ಈ ಕಾರ್ಯ ಕ್ರಮ ಸಹಕಾರಿಯಾಗಿದೆ. ಎಲ್ಲ ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ಎನ್‌ಎಸ್‌ಎಸ್‌ ಅಧಿಕಾರಿ ಶಿವಕುಮಾರ ಕಟ್ಟೆ, ಬಕ್ಕಪ್ಪ ನಿರ್ಣಾಕರ, ಶಾಂತಪ್ಪ ಪೂಜಾರಿ, ರವೀಂದ್ರ ಬಡಿಗೇರ, ಮಚ್ಛೇಂದ್ರ ಎಸ್‌., ವಿಜಯಕುಮಾರ ಮಾನಕಾರಿ, ಚನ್ನಬಸಪ್ಪ ಪಾಟೀಲ, ಶೈಲಜಾ ನೀಲಶೆಟ್ಟಿ, ಸುರೇಖಾ, ಭಾರತಿ ಚೌಧರಿ, ಶ್ರೀದೇವಿ ಗಟ್ಟು, ವಕೀಲ ಪಟೇಲ, ನಾಗರಾಜ ಶೆಟಕಾರ, ಅರುಣಕುಮಾರ ಗುಮ್ಮಳ, ವಿಜಯಶೆಟ್ಟಿ, ಎಚ್.ಎಸ್‌. ರವೀಂದ್ರ, ಅಣ್ಣೆಪ್ಪ ಕೊಟ್ರೆ, ರವಿಚಂದ್ರ, ಅಂತೆಪ್ಪ ಇನ್ನಿತರರು ಇದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.