‘ಕೈ’ ಕೋಟೆಯಲ್ಲಿ ಕಮಲ ಕಮಾಲ್‌

ಎರಡನೇ ಬಾರಿಗೆ ಕೇಸರಿ ಪಡೆ ಸಂಭ್ರಮಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲಿ ಐತಿಹಾಸಿಕ ಫ‌ಲಿತಾಂಶ

Team Udayavani, May 24, 2019, 10:59 AM IST

Udayavani Kannada Newspaper

ಕಲಬುರಗಿ: ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಕಲಬುರಗಿ ಕ್ಷೇತ್ರದ ಜನತೆ ಐತಿಹಾಸಿಕ ತೀರ್ಪು ಕೊಟ್ಟಿದ್ದಾರೆ. ಸೋಲಿಲ್ಲದ ಸರದಾರ ಖ್ಯಾತಿಯ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ| ಉಮೇಶ ಜಾಧವ್‌ ಸೋಲಿನ ರುಚಿ ತೋರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನ ಭದ್ರಕೋಟೆಯಲ್ಲಿ ಎರಡನೇ ಬಾರಿಗೆ ಕಮಲದ ಬಾವುಟ ಹಾರಿದೆ.

ಕ್ಷೇತ್ರದ ಸಂಕ್ಷಿಪ್ತ ಇತಿಹಾಸ: 1957ರಿಂದ ಇದುವರೆಗೆ ಒಟ್ಟು 18 ಸಾರ್ವತ್ರಿಕ
ಚುನಾವಣೆಗಳನ್ನು ಕಲಬುರಗಿ ಕಂಡಿದೆ. 1957ರಿಂದ 1991ರ ವರೆಗೂ ಕಾಂಗ್ರೆಸ್‌
ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. 1957, 1962 ಮತ್ತು 1967ರಲ್ಲಿ
ಸತತ ಮೂರು ಬಾರಿ ಗೆಲುವು ಕಂಡಿದ್ದ ಮಹದೇವಪ್ಪ ಯಶವಂತರಾಯ ಅವರು ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ಇವರ ದಾಖಲೆಯನ್ನು ಇದುವರೆಗೂ
ಯಾರೂ ಸರಿಗಟ್ಟಲು ಅಥವಾ ಮೀರಿಸಲು ಆಗಿಲ್ಲ.

ಕಾಂಗ್ರೆಸ್‌ ಪಾರುಪತ್ಯಕ್ಕೆ ಮೊದಲ ಬಾರಿಗೆ ಜನತಾ ದಳ ತಡೆಯೊಡ್ಡಿತ್ತು. 1996ರ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಖಮರುಲ್‌ ಇಸ್ಲಾಂ
ಜಯಭೇರಿ ಬಾರಿಸಿದ್ದರು. ನಂತರದ 1998ರ ಚುನಾವಣೆಯಲ್ಲಿ ಬಿಜೆಪಿಯ
ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ
ಕೇಸರಿ ಬಾವುಟವನ್ನು ಹಾರಿಸಿದ್ದರು. ಅಂದು ಜೆಡಿಎಸ್‌ನಿಂದ ಖಮರುಲ್‌
ಇಸ್ಲಾಂ ಮತ್ತು ಕಾಂಗ್ರೆಸ್‌ನಿಂದ ಡಾ| ಬಿ.ಜಿ. ಜವಳಿ ಸ್ಪರ್ಧಿಸಿದ್ದರು. ಖಮರುಲ್‌ ಇಸ್ಲಾಂ 1.97 ಲಕ್ಷ ಮತ ಪಡೆದರೆ, ಡಾ| ಜವಳಿ 1.40 ಲಕ್ಷ ಮತಗಳನ್ನು ಪಡೆದಿದ್ದರು. ಬಸವರಾಜ ಪಾಟೀಲ ಸೇಡಂ 3.28 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತ್ಯಧಿಕ 1.31 ಲಕ್ಷ ಮತಗಳ ಅಂತರದಿಂದ ಗೆಲುವು
ಸಾಧಿಸಿದ್ದರು. ಬಸವರಾಜ ಪಾಟೀಲ ಸೇಡಂ ಅವರ ಜಯ ಕ್ಷೇತ್ರದ ಇತಿಹಾಸದಲ್ಲಿ ದಾಖಲಾಗಿದೆ.

1998ರಲ್ಲಿ ಚುನಾವಣೆಯ ಮರು ವರ್ಷವೇ ನಡೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಕಾಂಗ್ರೆಸ್‌ ಕಲಬುರಗಿಯನ್ನು ಮತ್ತೆ ತಕ್ಕೆಗೆ ತೆಗೆದುಕೊಳ್ಳುವಲ್ಲಿ ಸಫಲವಾಗಿತ್ತು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್‌
ಅಹ್ಮದ್‌ ಸರಡಗಿ ಗೆಲುವು ಸಾಧಿಸಿದ್ದರು. ಅಂದಿನಿಂದ 2019ರವರೆಗೂ ಕಾಂಗ್ರೆಸ್‌ ತನ್ನ ಗೆಲುವಿನ ಓಟವನ್ನು ಮುಂದುವರಿಸಿತ್ತು. ಈ ಗೆಲುವಿನ ಓಟಕ್ಕೆ ಬಿಜೆಪಿ ಬ್ರೇಕ್‌ ಹಾಕಿದೆ. ಅದರಲ್ಲೂ 9 ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಂಸದರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಮಕಾಡೆ ಮಲಗಿಸಿದೆ.

ಮಹದೇವಪ್ಪನವರು ಹ್ಯಾಟ್ರಿಕ್‌ ಗೆಲುವಿನ ನಂತರ ಸಿದ್ದರಾಮರೆಡ್ಡಿ, ಡಾ| ಬಿ.ಜಿ.ಜವಳಿ ಮತ್ತು ಇಕ್ಬಾಲ್‌ ಅಹ್ಮದ್‌ ಸರಡಗಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸತತ ಎರಡು ಗೆಲುವು ಸಾಧಿಸಿದ್ದರು. 1974 ಮತ್ತು 1977ರಲ್ಲಿ ಸಿದ್ದರಾಮರೆಡ್ಡಿ, 1989 ಮತ್ತು 1991ರಲ್ಲಿ ಡಾ| ಜವಳಿ ಹಾಗೂ 1999 ಮತ್ತು 2011ರಲ್ಲಿ ಇಕ್ಬಾಲ್‌ ಅಹ್ಮದ್‌ ಸರಡಗಿ ಜಯ ದಾಖಲಿಸಿದ್ದರು. 2009 ಮತ್ತು 2014ರಲ್ಲಿ
ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದರು.

ಸೋತ ಪ್ರಮುಖರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಸೋಲನ್ನು ಕಂಡಿದ್ದಾರೆ. 1971ರ ಸಾರ್ವತ್ರಿಕ
ಚುನಾವಣೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರು ಸ್ಪರ್ಧಿಸಿ ಸೋಲು ಕಂಡಿದ್ದರು. ವೈಜನಾಥ ಪಾಟೀಲರು 1980,
1991ರಲ್ಲಿ ಸೋಲು ಅನುಭವಿಸಿದ್ದರು. 1998ರಲ್ಲಿ ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮುನ್ನ 1991ರಲ್ಲಿ ಸೋತಿದ್ದರು. ಅಲ್ಲದೇ, 1999
ಹಾಗೂ 2004ರ ಚುನಾವಣೆಯಲ್ಲೂ ಬಸವರಾಜ ಪಾಟೀಲ ಸೇಡಂ ಪರಾಭವಗೊಂಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಕೂಡ ಸೋತ ಗಣ್ಯರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.