![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 16, 2020, 10:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸತತ ಎರಡನೇ ದಿನವೂ ಕೋವಿಡ್ 19 ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
ರವಿವಾರದಂದು ಜಿಲ್ಲೆಯಲ್ಲಿ 119 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದೂ ಸಹ ಜಿಲ್ಲೆಯಲ್ಲಿ ಓರ್ವ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 3577 ಮತ್ತು ಮೃತರ ಸಂಖ್ಯೆ 108ಕ್ಕೆ ಏರಿಕೆ ಆಗಿದೆ.
ಹುಮನಾಬಾದ ಪಟ್ಟಣದ 50 ವರ್ಷದ ನಿವಾಸಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ತೊಂದರೆ ಲಕ್ಷಣ ಹೊಂದಿದ್ದ ವ್ಯಕ್ತಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇಂದಿನ ಹೊಸ ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈಗ ಪಾಸಿಟಿವ್ ಕೇಸ್ಗಳ ಸಂಖ್ಯೆ 3577ಕ್ಕೇರಿದೆ. ರವಿವಾರ 71 ಜನ ಸೇರಿ ಈವರೆಗೆ 2505 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 960 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಈವರೆಗೆ ಜಿಲ್ಲೆಯ 57,069 ಜನವರ ಗಂಟಲ ಮಾದರಿ ತಪಾಸಣೆ ಮಾಡಲಾಗಿದ್ದು, ಈ ಪೈಕಿ 53,001 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 491 ಜನರ ವರದಿ ಬರುವುದು ಬಾಕಿ ಇದೆ.
ತಾಲೂಕುವಾರು ಪಾಸಿಟಿವ್: ಬೀದರ್ ನಗರ- ತಾಲೂಕಿನಲ್ಲಿ 42 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸಂಖ್ಯೆ 1267ಕ್ಕೆ ತಲುಪಿದೆ. ಭಾಲ್ಕಿ ತಾಲೂಕಿನಲ್ಲಿ 34 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 516ಕ್ಕೆ ಏರಿಕೆಯಾಗಿದೆ.
ಔರಾದ- ಕಮಲನಗರ ತಾಲೂಕಿನಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 531ಕ್ಕೆ ಏರಿದೆ. ಹುಮನಾಬಾದ್- ಚಿಟಗುಪ್ಪ ತಾಲೂಕಿನಲ್ಲಿ 14 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 680ಕ್ಕೆ ಏರಿಕೆ ಆಗಿದೆ.
ಬಸವಕಲ್ಯಾಣ- ಹುಲಸೂರು ತಾಲೂಕಿನ 561 ಜನರಿಗೆ ಸೋಂಕು ತಗುಲಿದೆ. ಅನ್ಯ ಜಿಲ್ಲೆ ಮತ್ತು ರಾಜ್ಯಗಳ ಮೂವರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 22ಕ್ಕೆ ಹೆಚ್ಚಳವಾಗಿದೆ
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.