ಬಸವಕಲ್ಯಾಣಕಣದ ಚಿತ್ರ ಬದಲಿಸಿದ ನಿಗಮಾಸ್ತ್ರ

ಮರಾಠ, ವೀರಶೈವ-ಲಿಂಗಾಯತ ಮತಗಳ ಮೇಲೆ ಕಣ್ಣು ,ಕಮಲ ತಂತ್ರಕ್ಕೆ ಕಂಗಾಲಾದ ಕಾಂಗ್ರೆಸ್‌, ಜೆಡಿಎಸ್‌

Team Udayavani, Nov 18, 2020, 5:19 PM IST

ಬಸವಕಲ್ಯಾಣಕಣದ ಚಿತ್ರ ಬದಲಿಸಿದ ನಿಗಮಾಸ್ತ್ರ

ಬೀದರ: ಬಸವಣ್ಣನ ಕಾರ್ಯಕ್ಷೇತ್ರ ಬಸವಕಲ್ಯಾಣ ಕ್ಷೇತ್ರವನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಬಿಜೆಪಿ ಪ್ರಯೋಗಿಸಿರುವ ಪ್ರಬಲ ಜಾತಿಗಳ ಓಲೈಕೆ “ಅಸ್ತ್ರ’ಮೊದಲ ಹಂತದಲ್ಲೇ ಯಶಸ್ಸು ಕಂಡಂತಾಗಿದೆ.  ಮರಾಠಾ ಅಭಿವೃದ್ಧಿ ಪ್ರಾಧಿ ಕಾರ ರಚನೆ ಬೆನ್ನಲ್ಲೇ ಈಗ ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿ ಕಾರ ರಚನೆಗೆ ಬಿಜೆಪಿ ಸರ್ಕಾರ “ಅಸ್ತು’ ಎಂದಿದ್ದು, ಕಲ್ಯಾಣದ ಉಪ ಚುನಾವಣೆ ದಶಕಗಳ ಬೇಡಿಕೆ ಈಡೇರಿಕೆಗೆ ವೇದಿಕೆ ಒದಗಿಸಿಕೊಟ್ಟಂತಾಗಿದೆ.

ಜನತಾ ಪರಿವಾರ ಮತ್ತು ಕಾಂಗ್ರೆಸ್‌ನಭದ್ರಕೋಟೆಯಾಗಿರುವ ಬಸವಕಲ್ಯಾಣ  ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ಪಡೆ

ಚುನಾವಣೆ ಘೋಷಣೆ ಮುನ್ನವೇ ಕಸರತ್ತುನಡೆಸುತ್ತಿದೆ. ಚುನಾವಣಾ ಅಖಾಡಕ್ಕಿಳಿದಿರುವ ಸಿಎಂ ಪುತ್ರ, ಬಿಜೆಪಿಯ ಟ್ರಬಲ್‌ ಶೂಟರ್‌ ಬಿ.ವೈ ವಿಜಯೇಂದ್ರ ಶಿರಾ ಉಪ ಚುನಾವಣೆ ವೇಳೆ ಕಾಡು ಗೊಲ್ಲರಿಗೆ ಪ್ರತ್ಯೇಕ ನಿಗಮಸ್ಥಾಪನೆ ತಂತ್ರವನ್ನೇ ಕಲ್ಯಾಣ ಕ್ಷೇತ್ರದಲ್ಲೂ ಪ್ರಯೋಗಿಸಿದ್ದಾರೆ. ಮತಗಳ ಕ್ರೋಡೀಕರಣಕ್ಕೆ ಕ್ಷೇತ್ರದ ಪ್ರಮುಖ ಜಾತಿಯ ಮತಗಳ ಸೆಳೆಯಲು ತಂತ್ರ ಹೆಣೆಯುತ್ತಿದ್ದಾರೆ.

ಮುಖ್ಯವಾಗಿ ಮರಾಠಾ ಪ್ರಾಬಲ್ಯದ ಕಲ್ಯಾಣ ನೆಲದಲ್ಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಕುರಿತು ವಿಜಯೇಂದ್ರ ಭರವಸೆ ನೀಡಿದ್ದರು. ಅದಾದ ಕೆಲ ಗಂಟೆಯೊಳಗೆ ಸರ್ಕಾರದಿಂದ ಮಂಡಳಿ ರಚನೆಗೆ ಆದೇಶ ಹೊರಬಿದ್ದಿದೆ.

ಕ್ಷೇತ್ರದಲ್ಲಿ ಒಂದು ಸಮುದಾಯದ ಓಲೈಕೆಗಾಗಿ “ಪ್ರಾಧಿಕಾರ’ ರಚನೆ ಜೇನು ಗೂಡಿಗೆ ಕೈ ಹಾಕಿರುವ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು. ಕನ್ನಡಪರ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದರೆ, ಮತ್ತೂಂದೆಡೆ ವೀರಶೈವ- ಲಿಂಗಾಯತ ಪ್ರಾಧಿಕಾರ ರಚನೆ ಜತೆಗೆ ಸಮುದಾಯಕ್ಕೆ ಮಹಾರಾಷ್ಟ್ರ ಮಾದರಿ ಮೀಸಲಾತಿ ಬೇಡಿಕೆ ಮುನ್ನಲೆಗೆ ಬಂದಿತ್ತು.

ಬಹು ದಿನಗಳ ಕೂಗು: ಮರಾಠಾ ಪ್ರಾಧಿಕಾರ ರಚನೆಗೆ ವಿರೋಧದಿಂದ ಕಂಗಾಲಾದ ಸರ್ಕಾರ ಎರಡೇ ದಿನದಲ್ಲೇ ವೀರಶೈವ- ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಮೂಲಕ ಸಂಕಷ್ಟದಿಂದ ಹೊರಬರಲು ಯತ್ನ ಮಾಡಿದೆ.ಲಿಂಗಾಯತ ಸಮಾಜದ ಕಡು ಬಡವರು ಮತ್ತು ಯುವಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪ್ರಾಧಿಕಾರ ರಚಿಸಬೇಕೆಂಬ ಬಹು ದಿನಗಳ ಕೂಗಿಗೆ ಮನ್ನಣೆ ನೀಡಬೇಕೆಂಬ ಮಠಾಧಿಧೀಶರು, ವೀರಶೈವ ಮಹಾಸಭಾದ ಒತ್ತಡಕ್ಕೆ ಸರ್ಕಾರಕೊನೆಗೂ ಮಣಿದಿದೆ.

ಸಾಮಾನ್ಯವಾಗಿ ಬಿಜೆಪಿ ಲಿಂಗಾಯತ, ಮರಾಠಾ ಸೇರಿ ಮೇಲ್ವರ್ಗದ ಮತ ನೆಚ್ಚಿಕೊಂಡಿದೆ. ಬಸವಕಲ್ಯಾಣ ಉಪ ಚುನಾವಣೆ ಹೊತ್ತಿನಲ್ಲಿ ಈ ನಿರ್ಣಾಯಕ ಮತದಾರರನ್ನು ಪಕ್ಷದ ಪರ ಮತ್ತಷ್ಟು ಗಟ್ಟಿಯಾಗಿಸುವ ಬಿ.ವೈ. ವಿಜಯೇಂದ್ರ ಲೆಕ್ಕಾಚಾರಗಳು ಈ ಎರಡು ಪ್ರಾಧಿಕಾರಗಳ ರಚನೆಯೊಂದಿಗೆ ಕೈಗೂಡುವಂತಾಗಿದ್ದರೆ ಎರಡುಸಮುದಾಯಗಳಿಗೆ ತನ್ನ ಹಕ್ಕೊತ್ತಾಯ ಈಡೇರಲು ಈ ಚುನಾವಣೆಯೇ ಕಾರಣವಾಯಿತು. ಆದರೆ, ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ ಮಾದರಿಯಲ್ಲಿ ಶೇ.16 ಮೀಸಲಾತಿ ನೀಡಬೇಕು. ಆ ಮೂಲಕ ಸಮುದಾಯದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂಬುದು ಒತ್ತಾಸೆಯಾಗಿದೆ.

 

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.