ಸೌಕರ್ಯ ವಂಚಿತ ಸರ್ಕಾರಿ ಆಸ್ಪತ್ರೆ

ಕುಡಿವ ನೀರು ಸಿಗುವುದಿಲ್ಲ, ಮಲಗಲು ಹಾಸಿಗೆ ಇಲ್ಲ-ರೋಗಿಗಳ ಪರದಾಟ

Team Udayavani, Mar 14, 2020, 11:53 AM IST

14-March-5

ಬಸವಕಲ್ಯಾಣ: ಕೊರೊನಾ ವೈರಸ್‌ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಸರ್ಕಾರ ಆದೇಶ ನೀಡಿದೆ. ಆದರೆ ಮುಡಬಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಇಲ್ಲಿಗೆ ಬರುವ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ.

ಮುಡಬಿ ಹೋಬಳಿ ಹಾಗೂ ಜಿಪಂ ಕ್ಷೇತ್ರವಾಗಿದ್ದು, ಇದರ ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರವೇ ಚಿಕಿತ್ಸೆಗೆ ಆಸರೆಯಾಗಿದೆ. ಆದ್ದರಿಂದ ನಿತ್ಯ ನೂರಾರು ರೋಗಿಗಳು ಇಲ್ಲಿಗೆ ಚಿಕಿತ್ಸೆಗಾಗಿ ಬಂದು ಹೋಗುವುದು ಸಾಮಾನ್ಯವಾಗಿದೆ. ಆದರೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಇಲ್ಲಿ ರೋಗಿಗಳಿಗೆ ಬೇಕಾದ ಕನಿಷ್ಟ ಸೌಲಭ್ಯಗಳನ್ನೂ ಒದಗಿಸದೇ ಇರುವುದರಿಂದ ಸಾರ್ವಜನಿಕರು ಮತ್ತು ರೋಗಿಗಳು ಹಿಡಿಶಾಪ ಹಾಕುತ್ತಿದ್ದಾರೆ. ಆರೋಗ್ಯ ಕೇಂದ್ರದ ಹೊರಗೆ ಗಿಡ-ಮರಗಳನ್ನು ನೆಟ್ಟಿರುವುದನ್ನು ಗಮಿಸಿದರೆ ಒಳಗೆ ಇನ್ನೂ ಎಷ್ಟು ಚನ್ನಾಗಿರಬಹುದು ಎಂದು ಅನಿಸುತ್ತದೆ. ಆದರೆ ಒಳಗೆ ರೋಗಿಗಳಿಗೆ ಬೇಕಾದ ಅಗತ್ಯ ಸಾಮಗ್ರಿಗಳು ಸಂಪೂರ್ಣ ಹಾಳಾಗಿದ್ದು ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ.

ಬಡ ಜನರು ಹಾಗೂ ಮಕ್ಕಳ ಚಿಕಿತ್ಸೆಗೆ ಅನುಕೂಲವಾಗಬೇಕಾದ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಲ ಸೌಕರ್ಯಗಳಿಂದ ವಂಚಿತವಾಗಿ ನರಳುವಂತಾಗಿದೆ.

ನಿರುಪಯುಕ್ತ ಹಾಸಿಗೆಗಳು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳು ಮಲಗುವ ಹಾಸಿಗೆಗಳು ಉಪಯೋಗಕ್ಕೆ ಬಾರದಂತಾಗಿವೆ. ಕೆಲವು ಮಂಚಗಳು ಮುರಿದು ಹೋಗಿದ್ದು, ಮತ್ತೆ ಕೆಲವು ಹಾಸಿಗೆಗಳು ಹರಿದು ಹೋಗಿವೆ. ಹೀಗಾಗಿ ರೋಗಿಗಳನ್ನು ಕೆಳಗೆ ಮಲಗಿಸಲಾಗುತ್ತಿದೆ ಅಥವಾ ಚಿಕಿತ್ಸೆಗಾಗಿ ಬಂದವರು ಕುಳಿತುಕೊಳ್ಳುವ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಗಿತಗೊಂಡ ನೀರಿನ ಘಟಕ: ಆಸ್ಪತ್ರೆಯಲ್ಲಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿ ಹೋಗಿದೆ. ನೀರಿನ ಘಟಕ ಸಂಪೂರ್ಣ ತುಕ್ಕು ಹಿಡಿದು ಅದರ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ. ಅನ್ನು ನೋಡಿದರೆ ಹಾಳಾಗಿ ಎಷ್ಟು ವರ್ಷ ಆಗಿರಬಹುದು ಎಂದು ಯೋಚಿಸುವಂತಿದೆ. ಆದರೂ ಅದನ್ನು ದುರಸ್ಥಿ ಮಾಡುವುದಾಗಲಿ ಅಥವಾ ಹೊಸದು ಅಳವಡಿಸಲು ಸಂಬಂಧ ಪಟ್ಟವರು ಮುಂದಾಗಿಲ್ಲ. ಇದರಿಂದ ರೋಗಿಗಳು ಕುಡಿಯುವ ನೀರನ್ನು ಹೊರಗಿನಿಂದ ತರಬೇಕಾದ ಅನಿವಾರ್ಯತೆ ಇದೆ.

ಶೌಚಾಲಯಕ್ಕೆ ಬೀಗ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವ ಕೋಣೆ ಒಳಗಿನ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ರೋಗಿಗಳು ಶೌಚಾಲಯಕ್ಕೂ ಹೊರಗೆ ಹೋಗಬೇಕಾದ ಅನಿವಾರ್ಯದ ಪರಿಸ್ಥಿತಿ ಇದೆ ಎಂದು ರೋಗಿಗಳು ಹಾಗೂ ಗ್ರಾಮಸ್ಥರು ಹೇಳುತ್ತಾರೆ.

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.