ವಸ್ತುಗಳ ಖರೀದಿ ಮುನ್ನ ಎಚ್ಚರಿಕೆ ವಹಿಸಿ


Team Udayavani, Mar 17, 2022, 4:42 PM IST

18careful

ಬೀದರ: ಗ್ರಾಹಕರು ಪ್ರತಿಯೊಂದು ವಸ್ತುವಿನ ಬಗ್ಗೆ ನಿಖರವಾಗಿ ತಿಳಿದುಕೊಂಡು ವಾರಂಟಿ ಮತ್ತು ಗ್ಯಾರಂಟಿ ಬಗ್ಗೆ ಖಾತರಿಪಡಿಸಿಕೊಂಡು ರಸೀದಿಯೊಂದಿಗೆ ಖರೀದಿ ಮಾಡಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಕರೆ ನೀಡಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಮತ್ತು ಸಿಎಸ್‌ಸಿ (ಕಾಮನ್‌ ಸರ್ವಿಸ್‌ ಸೆಂಟರ್‌) ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಸಕಲ ಸೌಲತ್ತುಗಳ ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಉತ್ತಮ ಜೀವನ ಸಾಗಿಸಬೇಕು ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ನ್ಯಾಯಬೆಲೆ ಅಂಗಡಿಗಳು ಈಗ ಇಂದಿನಿಂದಲೇ ಸಿಎಸ್‌ಸಿ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಈ ಕೇಂದ್ರಗಳಲ್ಲಿ ನ್ಯಾಯೋಚಿತ ಡಿಜಿಟಲ್‌ ಹಣಕಾಸು, ಆಧಾರ ಕಾರ್ಡ್‌, ಡಿಜಿಟಲ್‌ ಪೇಮೆಂಟ್‌, ಪೆನ್ಸನ್‌ ಸೇರಿದಂತೆ ಇತ್ಯಾದಿ ಸರ್ಕಾರಿ ಸೇವೆಗಳು ಲಭ್ಯ. ಖಾಸಗಿ ವಲಯದ ಕೇಂದ್ರಗಳಲ್ಲಿ ಜನರಿಗೆ ಸರಿಯಾಗಿ ದೊರಕದೆ ದುರ್ಬಳಕೆಯಾಗುತ್ತಿರುವುದನ್ನು ಮನಗಂಡು ಸರ್ಕಾರ ನ್ಯಾಯಬೆಲೆ ಅಂಗಡಿಗಳಿಗೆ ಸಿಎಸ್‌ಸಿ ಕೇಂದ್ರಗಳನ್ನಾಗಿ ಪರಿವರ್ತಿಸಿದೆ. ಸರ್ಕಾರದ ಸಕಲ ಸೌಲತ್ತುಗಳ ಲಾಭ ಪಡೆದುಕೊಳ್ಳಬೇಕೆಂದರು.

ಮಾಹಿತಿ ಕೇಂದ್ರದ ಜಿಲ್ಲಾಧ್ಯಕ್ಷ ಬಸವರಾಜ ಪವಾರ್‌ ಮಾತನಾಡಿ, ಜಿಲ್ಲೆಯಲ್ಲಿ 736 ಸಿಎಸ್‌ಸಿ ಕೇಂದ್ರಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಪ್ರತಿ ಸಿಎಸ್‌ಸಿ ರವರು 5 ಕೆ.ಜಿ. ಗಾತ್ರದ ಮಿನಿ ಗ್ಯಾಸ್‌ ಸಿಲೆಂಡರ್‌ಅನ್ನು ತಲಾ 20ರಂತೆ ಪಡೆದು ಪಡಿತರ ಮತ್ತು ಇತರೆ ಗ್ರಾಹಕರಿಗೆ ವಿತರಿಸಲು ಸೌಲಭ್ಯ ಒದಗಿಸಲಾಗಿದೆ. ಇದರಿಂದ ಈ ಹಿಂದೆ ಆಗುತ್ತಿದ್ದ ದುರ್ಬಳಕೆ ಮತ್ತು ಸಮಯ, ಹಣವೂ ಉಳಿತಾಯವಾಗಲಿದೆ. ಉತ್ತಮ ಸೇವೆ ದೊರಕಲಿದೆ ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವೇದಿಕೆಯನ್ನು ಪರಿಹಾರ ಆಯೋಗವನ್ನಾಗಿ ಮಾಡಲಾಗಿದೆ ಎಂದು ಆಯೋಗದ ಜಿಲ್ಲಾಧ್ಯಕ್ಷ ಮಾಬು ಸಾಹೇಬ್‌ ಛಬ್ಬಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಎಸ್‌ಸಿ ಕೇಂದ್ರ, ಪೆಟ್ರೋಲ್‌ ಬಂಕ್‌, ಗ್ಯಾಸ್‌ ಏಜೆನ್ಸಿಗಳ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.