ಜಯಂತಿಗಳ ಆಚರಣೆ ಸ್ವರೂಪ ಬದಲಾಗಲಿ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಹಿತಿ-ಚಿಂತಕರ ಸಲಹೆ ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಕೆ

Team Udayavani, Feb 19, 2020, 11:45 AM IST

19-February-05

ಬೀದರ: ಸರ್ಕಾರದಿಂದ ಆಚರಿಸಲಾಗುತ್ತಿರುವ ಜಯಂತಿಗಳ ಆಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಚಿಂತಕರು, ಸಾಹಿತಿಗಳು, ಸಂಘಟಿಕರು, ಶಿಕ್ಷಕರಿಂದ ಅಭಿಪ್ರಾಯ ಪಡೆಯುವ ಸಂಬಂಧ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸರ್ಕಾರದಿಂದ ಆಚರಿಸುವ ಮಹನೀಯರ ಜಯಂತಿಗಳ ಅವಶ್ಯಕತೆ ಇದೆಯೇ?, ಸರ್ಕಾರದಿಂದ ಆಚರಿಸಬೇಕಾದ ಆಚರಣೆ ಸ್ವರೂಪ ಹೇಗಿರಬೇಕು?, ಮಹನೀಯರ ಜಯಂತಿಗಳನ್ನು ಆಚರಿಸುವಲ್ಲಿ ಅನುಸರಿಸಬೇಕಾದ ರಚನಾತ್ಮಕ ಅಂಶಗಳೇನು? ಎನ್ನುವ ಮುಖ್ಯ ಅಂಶಗಳ ಮೇಲೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಬಹುತೇಕರಿಂದ ಜಯಂತಿಗಳನ್ನು ರದ್ದುಗೊಳಿಸಬೇಕು. ಜಯಂತಿ ಹೆಸರಲ್ಲಿ ರಜೆ ನೀಡುವುದು ಬೇಡ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.

ಜಯಂತಿಗಳು ಬಾಲದಂತೆ ಬೆಳೆದಿದ್ದು, ಆಚರಣೆಯಿಂದ ಸಮಯ ವ್ಯರ್ಥವಾಗುತ್ತಿದೆ. ಜನರ ಹಣ ಪೋಲಾಗುತ್ತಿದೆ. ಕೆಲವೇ ಜಯಂತಿಗಳಿಗೆ ರಜೆ ನೀಡಿ ಬೇರೆ ಬೇರೆ ಧರ್ಮೀಯರಲ್ಲಿ ತಾರತಮ್ಯ ಮಾಡಿದಂತಾಗುತ್ತಿದೆ. ಆಮಂತ್ರಣ ಪತ್ರಿಕೆಯಲ್ಲಿ ಇರುವ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇದ್ದಲ್ಲಿ ಆ ಸಮುದಾಯದ ಜನರು ಘೋಷಣೆ ಕೂಗಿ ಜಯಂತಿಗೆ ಅವಮರ್ಯಾದೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದು ಸಭೆಯಲ್ಲಿದ್ದ ಬಹುತೇಕರು ಜಯಂತಿ ಆಚರಣೆಯ ಈಗಿನ ಸ್ವರೂಪದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಯಂತಿಗಳನ್ನು ಆಚರಣೆ ಮಾಡೋಣ. ಆದರೆ, ಆ ಜಯಂತಿಗಳನ್ನು ಸರ್ಕಾರದಿಂದ ಆಚರಿಸುವುದನ್ನು ಕೈಬಿಡಬೇಕು. ಆಡಂಬರದ ಆಚರಣೆ ನಿಲ್ಲಬೇಕು. ಒಂದು ಜಾತಿಗೆ ಸೀಮಿತ ಎನ್ನುವಂತೆ ನಡೆಯುತ್ತಿರುವ ಈಗಿನ ಆಚರಣೆ ಸ್ವರೂಪ ಸಂಪೂರ್ಣ ಬದಲಾಗಬೇಕು. ಕಾರ್ಯಕ್ರಮ ಸರಳವಾಗಿ ಆಯೋಜಿಸಿ, ಚಿಂನತೆಗಳು, ವಿಚಾರಗೋಷ್ಠಿಗೆ ಹೆಚ್ಚಿನ ಮಹತ್ವ ಕೊಡಬೇಕು. ಶೈಕ್ಷಣಿಕ ಹಾಗೂ ಆರ್ಥಿಕ ಹೊರೆಯಾಗದಂತೆ ಆಚರಣೆ ನಡೆಯಬೇಕು. ಮಹಾತ್ಮರ ವಿಚಾರಧಾರೆ ಶಾಲಾ-ಕಾಲೇಜು ಮಕ್ಕಳಿಗೆ ತಿಳಿಸುವ ಕೆಲಸವಾಗಬೇಕೆನ್ನುವ ಸಲಹೆಗೂ ಕೆಲವರು ಸಹಮತ ಸೂಚಿಸಿದರು.

ಸರ್ಕಾರಕ್ಕೆ ವರದಿ ಸಲ್ಲಿಕೆ: ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಸಭೆಯಲ್ಲಿ ತಿಳಿಸಿದ ಎಲ್ಲರ ಅಭಿಪ್ರಾಯ, ಸಲಹೆ ಕ್ರೋಢೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ತಾಲೂಕು ಮಟ್ಟದಲ್ಲಿಯೂ ಸಭೆ ನಡೆಸಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. ಇನ್ನಷ್ಟು ಅಭಿಪ್ರಾಯ ಕ್ರೋಢೀಕರಣಕ್ಕೆ ಜಿಲ್ಲಾ ಕೇಂದ್ರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಶಾಲಾ-ಕಾಲೇಜುಗಳಲ್ಲಿ ಆಚರಣೆಯಾಗಲಿ: ಜಯಂತಿ ಆಚರಣೆ ಸಾರ್ವಜನಿಕವಾಗಿ ನಡೆಯುವುದು ನಿಲ್ಲಿಸಬೇಕು. ಜಯಂತಿ ಆಚರಣೆಯನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಿ ಶಾಲಾ-ಕಾಲೇಜುಗಳಲ್ಲಿ ಮಾತ್ರ ಆಚರಣೆ ನಡೆಯುವಂತಾಗಬೇಕು. ಆಯಾ ಜಯಂತಿಯಂದು ಪ್ರಾರ್ಥನೆ ವೇಳೆ ಮಹಾತ್ಮರ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ಶಾಲಾ ಬೋರ್ಡ್‌ನಲ್ಲಿ ಮಹಾತ್ಮರ ತತ್ವ-ಸಿದ್ಧಾಂತ ಬರೆದು ತಿಳಿವಳಿಕೆ ಮೂಡಿಸಬೇಕೆನ್ನುವ ಅಭಿಪ್ರಾಯಕ್ಕೆ ಸಹಮತ ವ್ಯಕ್ತವಾಯಿತು.

ಪಠ್ಯದಲ್ಲಿ ಸೇರಿಸಿ: ಜಯಂತಿ ಆಚರಣೆ ಸ್ವರೂಪ ಬದಲಾಗಬೇಕು. ಮಹನೀಯರ ಜೀವನ ಚರಿತ್ರೆ ಪಠ್ಯದಲ್ಲಿ ಸೇರಿಸಿದರೆ ಶಾಲಾ ಹಂತದಿಂದಲೇ ಮಕ್ಕಳಿಗೆ ಮಹಾತ್ಮರ ವಿಚಾರಧಾರೆ ತಿಳಿಯಲು ಸಾಧ್ಯವಾಗುತ್ತದೆ. 6 ರಿಂದ 12ನೇ ತರಗತಿ ಮತ್ತು ಪದವಿ ಪಠ್ಯದಲ್ಲಿ ಮಹನೀಯರ ಜೀವನ ಮತ್ತು ಸಿದ್ಧಾಂತ ಸೇರಿಸಬೇಕು ಎಂದು ಉಪನ್ಯಾಸಕರು, ಶಿಕ್ಷಕರು, ಸಂಘಟಿಕರು ಸಲಹೆ ಮಾಡಿದರು. ಜಯಂತಿ ಆಚರಣೆ ವೇಳೆ ಮೆರವಣಿಗೆ ಬೇಡವೇ ಬೇಡ. ಆರೋಗ್ಯ ಕೆಡಿಸುವ ಧ್ವನಿವರ್ಧಕ ನಿಷೇಧಿಸಬೇಕು. ಜಯಂತಿಯಂದು ಕೇವಲ ವೇದಿಕೆ ಕಾರ್ಯಕ್ರಮ ನಡೆಸಿ ಮಹಾತ್ಮರ ಜೀವನ ಮತ್ತು ಸಾಧನೆ ಜನತೆಗೆ ತಿಳಿಸುವಂತಾಗಬೇಕು. ಜಯಂತಿ ದಿನದಂದು ಸರ್ಕಾರಿ ನೌಕರರಿಗೆ ರಜೆ ನೀಡದೇ ಎರಡು ಗಂಟೆ ಅಧಿಕ ಕೆಲಸ ಮಾಡುವಂತಾಗಬೇಕು ಎನ್ನುವ ಸಲಹೆ ಸಭೆಯಲ್ಲಿ ಕೇಳಿ ಬಂದಿತು.

ಸಭೆಯಲ್ಲಿ ಸಹಾಯಕ ಆಯುಕ್ತರಾದ ಅಕ್ಷಯ್‌ ಶ್ರೀಧರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ್‌ ಸಿಂಧೆ, ಪ್ರಮುಖರಾದ ಶಿವಶರಣಪ್ಪ ವಾಲಿ, ದೇಶಾಂಶ ಹುಡಗಿ, ಚಂದ್ರಪ್ಪ ಹೆಬ್ಟಾಳಕರ, ಎಂ.ಜಿ. ದೇಶಪಾಂಡೆ, ಎಂ.ಜಿ. ಗಂಗನಪಳ್ಳಿ, ಪಂಡಿತ ಬಸವರಾಜ, ಅಶೋಕಕುಮಾರ ಕರಂಜಿ, ರಾಮಚಂದ್ರ ಗಣಾಪುರ, ಡಾ| ಜಯಶ್ರೀ ಪ್ರಭಾ, ಓಂಕಾರ ಸೂರ್ಯವಂಶಿ, ಡಾ| ಶ್ರೀಮಂತ ಪಾಟೀಲ, ಶಂಭುಲಿಂಗ ವಾಲದೊಡ್ಡಿ, ವಿಜಯಕುಮಾರ ಸೋನಾರೆ, ಜಗನ್ನಾಥ ಜಮಾದಾರ್‌, ಶ್ಯಾಮಣ್ಣ ಬಾವಗೆ, ಮಾರುತಿ ಮಾಸ್ಟರ್‌, ಪ್ರಭುಲಿಂಗ ಸ್ವಾಮಿ, ಸುನೀಲ ಭಾವಿಕಟ್ಟಿ, ಶ್ರೀಮಂತ ಸಪಾಟೆ, ಸಂಜೀವಕುಮಾರ
ಅತಿವಾಳೆ ಇದ್ದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.