![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 7, 2020, 1:23 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ಮಾರಕ ಕೋವಿಡ್ ವೈರಸ್ ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.
ತಾಲೂಕಿನ ಲಖಣಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗೆ ಸಾನಿಟೈಸರ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಯಾರೂ ಅನಗತ್ಯವಾಗಿ ಓಡಾಡಬಾರದು. ಕೈಗಳನ್ನು ಸಾನಿಟೈಸರ್ನಿಂದ ತೊಳೆದುಕೊಳ್ಳಬೇಕು. ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಬೇಕು. ಕೋವಿಡ್ ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಬಡವರು, ಕಾರ್ಮಿಕರು ಕಷ್ಟಕ್ಕೀಡಾಗಿದ್ದಾರೆ. ಪ್ರತಿಯೊಬ್ಬರು ತಾಳ್ಮೆಯಿಂದಿರಬೇಕು. ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಪಂ ಮಾಜಿ ಸದಸ್ಯ ಯಾದವರಾವ ಕನಸೆ, ಪುರಸಭೆ ಮಾಜಿ ಅಧ್ಯಕ್ಷ ಕೈಲಾಸನಾಥ ಮೀನಕೆರೆ, ಗೋವಿಂದರಾವ ಬಿರಾದಾರ, ಗ್ರಾಪಂ ಅಧ್ಯಕ್ಷ ರಾಜಕುಮಾರ ಸೂರ್ಯವಂಶಿ, ಮುಖಂಡರಾದ ಗೋವಿಂದರಾವ ಚಾಂದಿವಾಲೇ, ಗೋವಿಂದರಾವ ಬಿರಾದಾರ ಮಾವಿನಹಳ್ಳಿ, ಜನಾರ್ಧನ ಸೂರ್ಯವಂಶಿ, ಶಿವಾ ಸೋಂಪುರ, ಪಾಂಡುರಂಗ ಸಲಾಬಾ ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.