ಕೊರೊನಾ ಕರ್ಫ್ಯೂಗೆ ಬೀದರ ಜಿಲ್ಲೆ ಸ್ತಬ್ದ


Team Udayavani, Apr 29, 2021, 10:28 PM IST

29-12

ಬೀದರ: ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಹೆಮ್ಮಾರಿ ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಘೋಷಿಸಿರುವ “ಕೊರೊನಾ ಕರ್ಫ್ಯೂ’ ಜಾರಿಯಾದ ಮೊದಲ ದಿನವೇ ಗಡಿ ನಾಡು ಬೀದರ ಸಂಪೂರ್ಣ ಸ್ತಬ್ಧಗೊಂಡಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಕಠಿಣ ನಿಯಮ ಪಾಲನೆಯಿಂದಾಗಿ ಜನ-ವಾಹನ ಸಂಚಾರ ತೀವ್ರ ಕಡಿಮೆಯಾಗಿದ್ದು, ಕರ್ಫ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಕೋವಿಡ್‌ ಸಾವಿನ ರಣಕೇಕೆ ಜತೆಗೆ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಬೀದರನಲ್ಲಿ ಈ ಮೊದಲೇ ನೈಟ್‌ ಕರ್ಫ್ಯೂ ಜಾರಿಯಲ್ಲಿತ್ತು. ನಂತರ ಸೋಂಕಿನ ಆರ್ಭಟ ಅಧಿಕವಾಗುತ್ತಿದ್ದಂತೆ ರಾಜ್ಯಾದ್ಯಂತ ಏ.21ರಿಂದ ನೈಟ್‌ ಕಫೂ ಮತ್ತು ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಈಗ ಬುಧವಾರದಿಂದ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಬೀದರ ನಗರ ಸೇರಿ ಇಡೀ ಜಿಲ್ಲೆ ನಿಶಬ್ಧವಾಗಿದೆ. ಬುಧವಾರ ಬೆಳಗ್ಗೆ 6ರಿಂದ 10ರ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಬೆಳಗ್ಗೆಯೇ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿನ ದಿನಸಿ, ತರಕಾರಿ, ಮಾಂಸ ಖರೀದಿಗೆ ಮುಗಿಬಿದದ್ದು ಕಂಡುಬಂತು. ನಂತರ ಖಾಕಿ ಪಡೆ ರಸ್ತೆಗಿಳಿದು ವ್ಯಾಪಾರ ವಹಿವಾಟು ಬಂದ್‌ ಮಾಡಿಸಿತು. ಜನಸಂಚಾರ, ವಾಹನ ಸಂಚಾರ ಸ್ತಬ್ದಗೊಂಡಿದ್ದು, ನಗರ ಸೇರಿದಂತೆ ಜಿಲ್ಲಾದ್ಯಂತ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಹಾಗಾಗಿ ಗಾಂ ಧಿ ಗಂಜ್‌, ಮೋಹನ್‌ ಮಾರ್ಕೆಟ್‌, ಅಂಬೇಡ್ಕರ ವೃತ್ತ, ನಾಂದೇಡ್‌ ರಸ್ತೆ ಮತ್ತು ಓಲ್ಡ್‌ ಸಿಟಿ ಸೇರಿದಂತೆ ನಗರದ ಎಲ್ಲ ಮಾರುಕಟ್ಟೆ ಪ್ರದೇಶಗಳು ಬಿಕೋ ಎನ್ನುತ್ತಿವೆ. ಎಲ್ಲಾ ದೇವಸ್ಥಾನಗಳು, ಮಸೀದಿ, ಚರ್ಚ್‌ ಮತ್ತು ಇನ್ನಿತರ ಧಾರ್ಮಿಕ ಸ್ಥಳಗಳಿಗೆ ಬೀಗ ಹಾಕಲಾಗಿತ್ತು. ಸಾರಿಗೆ ಬಸ್‌ಗಳ ಕಾರ್ಯಾಚರಣೆಯನ್ನು ಸಹ ನಿಷೇಧ ಮಾಡಲಾಗಿದೆ. ಅನಗತ್ಯ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಲಾಠಿ ರುಚಿ, ಬಸ್ಕಿ ಹೊಡೆಸಿ ಬಿಸಿ ಮುಟ್ಟಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಆದರೆ, ಹಳ್ಳಿಗಳಲ್ಲಿ ಜನರ ಓಡಾಡುವಿಕೆ ಮಾತ್ರ ಇನ್ನೂ ನಿಂತಿಲ್ಲ.

ಟಾಪ್ ನ್ಯೂಸ್

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.