Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್ ಮ್ಯಾನ್ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ
Team Udayavani, Sep 15, 2024, 3:34 PM IST
ಬೀದರ್: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸುವ ಹೇಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಲಿ. ಆ ಮೂಲಕ ತಾವು ಗಾಂಧಿ ಕುಟುಂಬದ ʼವಾಚ್ ಮ್ಯಾನ್ʼ ಅಲ್ಲ ಎಂಬುದನ್ನು ಸಾಬೀತು ಮಾಡಲಿ ಎಂದು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ನಗರದಲ್ಲಿ ರವಿವಾರ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮೀಸಲಾತಿಯ ಸೌಲಭ್ಯದಲ್ಲಿ ಅಧಿಕಾರವನ್ನು ಅನುಭವಿಸುತ್ತ ಬಂದಿರುವ ಖರ್ಗೆ, ಈಗ ಎಐಸಿಸಿ ಅಧ್ಯಕ್ಷರೂ ಆಗಿದ್ದಾರೆ. ಒಂದು ಗಾಂಧಿ ಪರಿವಾರದ ಮರ್ಜಿಯಲ್ಲಿ ನೀವು ಇಲ್ಲ ಎನ್ನುವುದಾದರೇ, ರಾಹುಲ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಲಿ ಎಂದು ಆಗ್ರಹಿಸಿದರು.
ದೇಶದಲ್ಲಿ ಮೀಸಲಾತಿ ಸೌಲಭ್ಯ ತಂದದ್ದು ರಾಹುಲ್ ಅವರ ತಂದೆ ಅಥವಾ ಮುತ್ತಜ್ಜನಲ್ಲ. ನಮ್ಮ ತಂದೆ ಡಾ. ಅಂಬೇಡ್ಕರ ಅವರ ಹೋರಾಟದ ಪ್ರತಿಫಲದಿಂದ ಇದು ಸಿಕ್ಕಿರುವುದು. ದಲಿತ, ಹಿಂದುಳಿದವರ ವಿರೋಧಿ ಗಾಂಧಿ ಕುಟುಂಬದ ಮತ್ತು ಕಾಂಗ್ರೆಸ್ನ ಪರಂಪರೆಯಾಗಿದೆ. ಮೀಸಲಾತಿಯಿಂದ ದೇಶದ ಉದ್ಧಾರ ಆಗುವುದಿಲ್ಲ ಎಂದು ನೆಹರು ಹೇಳಿದ್ದರು. ಮುಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ, ರಾಜೀಲ್ ಗಾಂಧಿ ಸಹ ಇದನ್ನೇ ಮುಂದುವರೆಸಿಕೊಂಡು ಬಂದಿದ್ದರು. ಈಗ ರಾಹುಲ್ ಈ ರೀತಿ ಹೇಳುವುದರಲ್ಲಿ ಹೊಸದೇನು ಇಲ್ಲ ಎಂದರು.
ವಿದೇಶಗಳಲ್ಲಿ ಭಾರತಾಂಬೆಗೆ ಅಪಮಾನ ಮಾಡಿ ವಿಕೃತಿ ಮೆರೆಯುವ ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿಯಿದ್ದಂತೆ. ದೇಶದ ಬಗ್ಗೆ ರಾಹುಲ್ ಗೆ ಮಾತನಾಡುವುದೇ ಇದ್ದರೆ ಬನ್ನಿ ಕರ್ನಾಟಕಕ್ಕೆ ಎಂದ ನಾರಾಯಣಸ್ವಾಮಿ, ಚುನಾವಣೆ ಸಂದರ್ಭದಲ್ಲಿ ಸುಳ್ಳು ಮಾತುಗಳ ಮೂಲಕ ರಾಹುಲ್ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಆದರೆ, ಈಗ ಜನ ಬುದ್ಧಿವಂತರಾಗಿದ್ದಾರೆ. ನಿಮ್ಮ ಅಂಗಡಿಗೆ ಬೀಗ ಬಿದ್ದಿದೆ ಎಂದು ವ್ಯಂಗ್ಯವಾಡಿದರು. ಮೀಸಲಾತಿ ತೆಗೆಯುವುದಾಗಿ ಹೇಳುವ ರಾಹುಲ್ಗೆ ಭಾರತದಲ್ಲಿ ಇರಲು ಯಾವುದೇ ಯೋಗ್ಯತೆ ಇಲ್ಲ ಎಂದು ಛೇಡಿಸಿದರು.
ರಾಜ್ಯದ ಖಜಾನೆ ಖಾಲಿಯಾಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಮೀಸಲಾತಿ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಸರ್ಕಾರದ್ದು ಭೀಕ್ಷಕರಿಗಿಂತ ಕಡೆಯಾಗಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಾಗೆ ಇದ್ದಂತೆ, ಬಿಜೆಪಿ ಪಾರಿವಾಳ ಇದ್ದಂತೆ ಎಂದು ನಾರಾಯಣಸ್ವಾಮಿ ಹೇಳಿದರು.
ಮಕ್ಕಳ ಹಕ್ಕುಗಳ ಉಲ್ಲಂಘನೆ
ಮಾನವ ಸರಪಳಿ ಕಾಂಗ್ರೆಸ್ ಸರ್ಕಾರದ ಹಣ ನುಂಗುವ ಕಾರ್ಯಕ್ರಮ. ರಾಜ್ಯದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂಬುದನ್ನು ಸರ್ಕಾರವೇ ಖಾತ್ರಿ ಮಾಡುತ್ತಿದೆ. ಜತೆಗೆ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳನ್ನು ರಸ್ತೆ ಮೇಲೆ ನಿಲ್ಲಿಸಿರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ತಂದು ನಿಲ್ಲಿಸಿ ಅವರಿಗೆ ಪ್ರಜಾಪ್ರಭುತ್ವದ ಪಾಠ ಕಲಿಸಬೇಕಾಗಿತ್ತು. ಕಾಂಗ್ರೆಸ್ ಸರ್ಕಾರದ ಇತಿಹಾಸದಲ್ಲಿ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Anubhava Mantapa ಡಿಸೆಂಬರ್ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ
CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.