UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ
ಲಂಡನ್ ಯೂತ್ ಕೌನ್ಸಿಲ್ ನ ಮೊದಲ ಭಾರತೀಯ ಸದಸ್ಯ
Team Udayavani, Sep 29, 2024, 9:29 PM IST
ಬೀದರ್ : ಲಂಡನ್ ಯೂತ್ ಕೌನ್ಸಿಲ್ ನ ಮೊದಲ ಭಾರತೀಯ ಸದಸ್ಯ, ಬೀದರನ ಅದಿಶ್ ರಜಿನಿಶ್ ವಾಲಿ ಅವರು ಯುಕೆ ಸಂಸತ್ತಿನಲ್ಲಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ‘ಇವನಾರವ ಇವನಾರವ’ ವಚನ ಪಠಿಸುವ ಮೂಲಕ ಕನ್ನಡ ಡಿಂಡಿಮ ಬಾರಿಸಿದ್ದಾರೆ.
ಇಲ್ಲಿನ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರ ಮೊಮ್ಮಗ ಆದೀಶ್, ಸಿಟಿ ಯೂನಿರ್ವಸಿಟಿ ಆಫ್ ಲಂಡನ್ ನ ಬೇಸ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ನಿಂದ ಮಾಸ್ಟರ್ಸ್ ಪದವಿ ಪಡೆದಿದ್ದಾರೆ. ಕಳೆದ ವರ್ಷದ ಘಟಿಕೋತ್ಸವ ಸಮಾರಂಭದಲ್ಲಿ ಕನ್ನಡ ಬಾವುಟ ಹಾರಿಸಿ ಪದವಿಯನ್ನು ಸ್ವೀಕರಿಸಿ ಗಮನ ಸೆಳೆದಿದ್ದರು. ಈಗ ಮತ್ತೆ ಯುಕೆ ಸಂಸತ್ತಿನಲ್ಲಿ ಕನ್ನಡ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಲಂಡನ್ ಸಂಸತ್ತಿನಲ್ಲಿ ತಮ್ಮ ಪ್ರಥಮ ಭಾಷಣದಲ್ಲಿ ವಚನ ಪಠಣದೊಂದಿಗೆ ಭಾಷಣ ಆರಂಭಿಸಿದ ಆದೀಶ್, ‘ಹವಾಮಾನ ವಲಸೆ – ಯುಕೆ ಸರ್ಕಾರದ ನೀತಿ” ಎಂಬ ವಿಷಯದ ಮೇಲೆ ವಿಷಯ ಮಂಡಿಸಿದ್ದಾರೆ.
ಲಂಡನ್ ಯುವ ಸಮಿತಿಯಲ್ಲಿರುವ ಆದೀಶ್, ಕನ್ನಡ ಸಾಹಿತ್ಯ ಪರಿಷತ್ತಿನ ಯುನೈಟೆಡ್ ಕಿಂಗ್ಡಮ್ ಗೌರವಯುತ ಯುವ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Bidar; ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.