ಕಾರ್ಖಾನೆಗಳ ಕೆಮಿಕಲ್ ತ್ಯಾಜ್ಯಕ್ಕೆ ಮುಕ್ತಿ ಯಾವಾಗ.?


Team Udayavani, Feb 16, 2022, 7:05 PM IST

ಕಾರ್ಖಾನೆಗಳ ಕೆಮಿಕಲ್ ತ್ಯಾಜ್ಯಕ್ಕೆ ಮುಕ್ತಿ ಯಾವಾಗ.?

ಹುಮನಾಬಾದ: ಒಂದು ಕಾಲದಲ್ಲಿ ಧಾರ್ಮಿಕತೆಗೆ ಹೆಸರಾದ ಮಾಣಿಕನಗರದ ಹಳ್ಳ ಇಂದು ಕೈಗಾರಿಕೆಗಳ ತ್ಯಾಜ್ಯದಿಂದ ಸಂಪೂರ್ಣ ತುಂಬಿಕೊಂಡಿದ್ದು, ಗಬ್ಬು ವಾಸನೆ ಹರಡುತ್ತಿದೆ. ಹಳ್ಳದಲ್ಲಿನ ಜಲಚರಗಳು ಸಂಪೂರ್ಣ ನಾಶವಾಗಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

2016-17ನೇ ಸಾಲಿನಲ್ಲಿ ಉದಯವಾಣಿ ಇಲ್ಲಿನ ಕಾರ್ಖಾನೆಗಳ ಕೆಮಿಕಲ್ ತ್ಯಾಜ್ಯದ ಸಮಸ್ಯೆಗಳ ಕುರಿತು ಸಮಗ್ರ ಸರಣಿ ವರದಿಗಳು ಪ್ರಕಟಿಸಿತ್ತು. ನಂತರದ 22-11-2017ರಂದು ಅಂದಿನ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ ನೇತೃತ್ವದಲ್ಲಿ ಒಟ್ಟಾರೆ 12 ತಂಡಗಳು ರಚಿಸಿಕೊಂಡು ಪಟ್ಟಣ ಹೊರವಲಯದ ಕೈಗಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿರುವ ಕೆಲ ಕಾರ್ಖಾನೆಗಳ ಬಂದ್ ಮಾಡುವ ನಿಟ್ಟಿನಲ್ಲಿ ಪರಿಸರ ಇಲಾಖೆಗೆ ಸೂಚನೆ ಕೂಡ ನೀಡಿದರು. ನಂತರ ದಿನಗಳಲ್ಲಿ ಗಡವಂತಿ ಹಾಗೂ ಮಾಣಿಕನಗರದ ಹಳ್ಳಕ್ಕೆ ಕೈಗಾರಿಕೆಗಳ ಕೆಮಿಕಲ್ ಮಿಶ್ರಿತ ತ್ಯಾಜ್ಯ ಹೆಚ್ಚಾಗಿ ಬಂದಿಲ್ಲ. ಆದರೆ, ಕಳೆದ ಕೆಲ ತಿಂಗಳಿಂದ ಮತ್ತೆ ಅದೇ ಕತೆ ಆರಂಭಗೊಂಡಿದ್ದು, ಗಡವಂತಿ ಹಾಗೂ ಮಾಣಿಕನಗರದ ಗ್ರಾಮಸ್ಥರು ಮತ್ತೆ ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ.

ಬಗೆಹರಿಯದ ಸಮಸ್ಯೆ: ಕಳೆದ ಕೆಲ ವರ್ಷಗಳಿಂದ ಗಡವಂತಿ ಹಾಗೂ ಮಾಣಿಕನಗರದ ಜನರು ಕೈಗಾರಿಕಾ ಘಟಕದಿಂದ ಬರುತ್ತಿರುವ ಕೆಮಿಕಲ್ ಮಿಶ್ರಿತ ತ್ಯಾಜ್ಯದ ವಿರುದ್ಧ ಹೋರಾಟ ನಡೆಸಿದ್ದಾರೆ. ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಭ್ರಹತ್ ಪ್ರತಿಭಟನೆ ನಡೆದಿತ್ತು. ಅಲ್ಲದೆ, ಸ್ಥಳೀಯ ಶಾಸಕ ರಾಜಶೇಖರ ಪಾಟೀಲರು ಕೂಡ ಅನೇಕ ಬಾರಿ ಈ ಗ್ರಾಮಗಳಿಗೆ ಭೇಟಿನೀಡಿದ ಸಂದರ್ಭದಲ್ಲಿ ಪರಿಸರ ಹಾಳುಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ಕ್ರಮಕ್ಕೆ ಶೀಫಾರಸು ಮಾಡುವುದಾಗಿ ಭರವಸೆ ನೀಡಿದರು. ಜಗದೀಶ ಶೆಟ್ಟರ ಸೇರಿದಂತೆ ರಾಜ್ಯಮಟ್ಟದ ನಾಯಕರು ಕೂಡ ಇಲ್ಲಿಗೆ ಭೇಟಿನೀಡಿ ಸಮಸ್ಯೆ ಸರಿಪಡಿಸುವ ಭರವಸೆ ನೀಡಿದರು. ಒಟ್ಟಾರೆ ಈ ವರೆಗೂ ಗಡವಂತಿ, ಮಾಣಿಕನಗರದ ಗ್ರಾಮಸ್ಥರಿಗೆ ನ್ಯಾಯ ಕೊಡಿಸುವಲ್ಲಿ ಯಾರುಕೂಡ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ ಎಂಬುವುದು ವಿಪರಿಯಾಸ.

ಮತ್ತೆ ಹೋರಾಟದ ಸಿದ್ಧತೆ: ಕಳೆದ ಕೆಲ ತಿಂಗಳಿಂದ ಅಧಿಕ ಪ್ರಮಾಣದಲ್ಲಿ ಕೈಗಾರಿಕೆಗಳ ಕೆಮಿಕಲ್ ಮಿಶ್ರಿತ ತ್ಯಾಜ್ಯ ಹಳ್ಳ ಹಾಗೂ ಅಂರ್ತಜಲಕ್ಕೆ ಸೇರುತ್ತಿದುಭ್ರಿಲ್ಲಿನ ಜನರು ಚರ್ಮರೋಗ, ತುರುಸುವಿಕೆ ಇತರೆ ರೋಗಗಳಿಂದ ಬಳಲುತ್ತಿದ್ದಾರೆ. ಹೀಗೆ ಆದರೆ ಎಲ್ಲಾ ಗ್ರಾಮಸ್ಥರು ರೋಗಿಗಳಾಗಬೇಕಾಗುತ್ತದೆ ಎಂದು ಇದೀಗ ಮತ್ತೆ ಗ್ರಾಮಸ್ಥರು ಹೋರಾಟ ನಡೆಸಲು ಸಿದ್ದತೆ ನಡೆಸಿದ್ದಾರೆ. ಬುಧವಾರ ಆನಂದರಾಜ ಪ್ರಭುಗಳ ನೇತೃತ್ವದಲ್ಲಿ ತಹಶೀಲ್ದಾರ ಕಚೇರಿಗೆ ಭೇಟಿನೀಡಿ ಸಮಸ್ಯೆ ಕುರಿತು ತಹಶೀಲ್ದಾರ ಜಯಶ್ರೀ ಅವರಿಗೆ ವಿವರಿಸಿದರು. ನಂತರ ತಹಶೀಲ್ದಾರ ಅವರು ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ, ಇಂಟರರ್ನ್ಯಾಷನಲ್ ಹುಮನ್‌ರೈಟ್ಸ್ ಸೋಶಿಯಲ್ ಜಸ್ಟಿಸ್ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಭೇಟಿನೀಡಿ ಇಲ್ಲಿನ ಸಮಸ್ಯೆ ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ಬುಧವಾರ ಮನವಿ ಪತ್ರ ಕೂಡ ಸಲ್ಲಿಸಿದ್ದಾರೆ.

ಮಾಣಿಕಪ್ರಭುಗಳ ಪುಣ್ಯಭೂಮಿ ಇಂದು ಕೆಮಿಕಲ್ ವಿಷಮಯವಾಗಿದೆ. ಹಳ್ಳದಲ್ಲಿ ನೀರಿನ ಬದಲಿಗೆ ಕೆಮಿಕಲ್ ಕಾರ್ಖಾನೆಗಳ ತ್ಯಾಜ್ಯ ತುಂಬಿಕೊಂಡು ಗಬ್ಬು ವಾಸನೆ ಹರಡುತ್ತಿದೆ. ಜಲಚರಗಳು ಸಂಪೂರ್ಣ ನಾಶವಾಗಿವೆ. ಕೈಗಾರಿಕೆಗಳ ಕಲುಷಿತ ನೀರು ಅಂತರ್ಜಲವನ್ನು ಸಹ ಕಲುಷಿತಗೊಳಿಸಿದೆ. ಕೊಳವೆ ಬಾವಿ ನೀರನ್ನು ಕುಡಿಯುವುದಿರಲಿ ಸ್ನಾನ ಮಾಡಿದರು ಚರ್ಮ ರೋಗಗಳು ಜನರನ್ನು ಬಾದಿಸುತ್ತಿವೆ. ಜನರ ಜೀವಕ್ಕೆ ಆಪತ್ತು ಉಂಟುಮಾಡುವ ಕಾರ್ಖಾನೆಗಳು ಕೂಡಲೇ ಬಂದ್ ಮಾಡಿಸಬೇಕು.- ಆನಂದರಾಜ ಪ್ರಭುಗಳು, ಮಾಣಿಕಪ್ರಭು ಸಂಸ್ಥಾನದ ಕಾರ್ಯದರ್ಶಿಗಳು

ಹಳ್ಳಿದಲ್ಲಿ ಕೆಮಿಕಲ್ ಮಿಶ್ರಿತ ನೀರು ತುಂಬಿಕೊಂಡಿರುವ ಕುರಿತು ಗ್ರಾಮಸ್ಥರು ಕಚೇರಿಗೆ ಬಂದು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿನೀಡಿ ಸಮಸ್ಯೆ ಆಲಿಸಿದ್ದೇನೆ. ಭಾವಿ ಹಾಗೂ ತೆರೆದ ಭಾವಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಜನರು ದೂರಿದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದು, ಗ್ರಾಮದಲ್ಲಿನ ನೀರು ಪರೀಕ್ಷೆ ನಡೆಸುವಂತೆ ತಿಳಿಸಲಾಗಿದೆ. ಅಲ್ಲದೆ, ಸಂಬಂಧಿಸಿದವರಿಂದ ಸೂಕ್ತ ವಿವರಣೆ ಪಡೆದುಕೊಂಡು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಜಯಶ್ರೀ ತಹಶೀಲ್ದಾರರು

 

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.