![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 24, 2022, 11:42 AM IST
ಬೀದರ್: ಆಂಧ್ರ ಪ್ರದೇಶದ ಕೊತ್ತಕೊತ್ತ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ ಮೂಲದ ಬೆಂಗಳೂರು ಶಿವಾಜಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ರೋಳಾ ವಾಡಿಯ ಅವಿನಾಶ ಯಾದವ (29 ವ) ಮೃತಪಟ್ಟ ಪಿಎಸ್ಐ. 2017 ರ ಪಿಎಸ್ಐ ಬ್ಯಾಚ್ ನ ಅವಿನಾಶ ಯುನಿವರ್ಸಿಟಿ ಮತ್ತು ಪಿಣ್ಯ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿ ಇತ್ತೀಚಿಗಷ್ಟೇ ಶಿವಾಜಿನಗರ ಠಾಣೆಗೆ ವರ್ಗವಾಗಿದ್ದರು.
ಗಾಂಜಾ ಗ್ಯಾಂಗ್ ಹಿಡಿಯಲು ಎಂಟು ಮಂದಿ ಸಿಬ್ಬಂದಿಗಳು ಕಾರಿನಲ್ಲಿ ಎರಡು ತಂಡಗಳಾಗಿ ಬೆಂಗಳೂರಿನಿಂದ ಆಂಧ್ರದ ಕಡೆಗೆ ಹೋಗುವಾಗ ಕೊತ್ತಕೊತ್ತ ಗ್ರಾಮದ ಬಳಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಒಂದು ಕಾರು ಅಪಘಾತವಾಗಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪಿಎಸ್ಐ ಅವಿನಾಶ ಸೇರಿ ಮೂವರು ಜೀವ ಕಳೆದುಕೊಂಡಿದ್ದಾರೆ.
ಅವಿನಾಶ್ ಅವರ ತಂದೆ ಕಾಶಿನಾಥ ಯಾದವ ಸಹ ಪಿಎಸ್ಐ ಆಗಿ ಕಳೆದ 31ಕ್ಕೆ ನಿವೃತ್ತಿ ಹೊಂದಿದ್ದರು. ಅವಿನಾಶ ಸಾವು ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದ್ದು, ಆಕ್ರಂದನ ಹೆಚ್ಚಿದೆ. ಗ್ರಾಮದಲ್ಲಿ ನಿರವ ಮೌನ ಆವರಿಸಿದೆ. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮ ಬಸವಕಲ್ಯಾಣ ತಾಲೂಕಿನ ರೋಳಾ ವಾಡಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.