![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 19, 2021, 8:34 PM IST
ಬೀದರ ; ಗಡಿ ನಾಡು ಬೀದರನಲ್ಲಿ ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಹೆಮ್ಮಾರಿ ಕೊರೊನಾ ತನ್ನ ಆರ್ಭಟವನ್ನು ಮತ್ತೆ ಮುಂದುವರೆಸಿದೆ. ಹೊಸದಾಗಿ ಶುಕ್ರವಾರ ಮತ್ತೆ 40 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದರೆ, ಓರ್ವ ವೃದ್ಧೆ ಸಾವು ಸಂಭವಿಸಿದೆ. ಕೇವಲ 6 ದಿನಗಳಲ್ಲಿ 250 ಸೋಂಕಿತರು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.
ನೆರೆಯ ಮಹಾರಾಷ್ಟ್ರದಲ್ಲಿ ಕೊವೀಡ್ ಸೋಂಕು ತನ್ನ ಕೆನ್ನಾಲಿಗೆಯನ್ನು ಚಾಚುತ್ತಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೀದರ ಜಿಲ್ಲೆಗೂ ನಿಧಾನವಾಗಿ ಹಬ್ಬುತ್ತಿದೆ ಎಂಬ ಆತಂಕ ಬಿಸಿಲೂರಿನ ಜನರನ್ನು ಕಾಡಲಾರಂಭಿಸಿದೆ. ಸೋಂಕಿತರ ಕೇಸ್ಗಳು ಕುಸಿಯುತ್ತ ಬಂದಿದ್ದರಿಂದ ಜಿಲ್ಲೆಯ ಜನರು ನಿಟ್ಟಿಸಿರುವ ಬಿಟ್ಟಿದ್ದರು. ಇದರಿಂದ ಸಾಮಾನ್ಯ ಜನಜೀವನ ಸಹ ಮೊದಲಿನಂತೆ ಯಥಾಸ್ಥಿತಿಗೆ ತಲುಪುತ್ತಿತ್ತು. ಆದರೆ, ಈಗ ಮತ್ತೊಮ್ಮೆ ಕೋವಿಡ್ ಕಂಟಕವಾಗಿ ಪರಿಣಮಿಸುತ್ತಿದ್ದು, ಎರಡು ದಿನದಲ್ಲಿ ಇಬ್ಬರನ್ನು ಬಲಿ ಪಡೆದಿದೆ.
ಸೋಂಕಿಗೆ ಗುರುವಾರ 47 ವರ್ಷದ ನ್ಯಾಯವಾದಿ ಮೃತಪಟ್ಟಿದ್ದರೆ, ಶುಕ್ರವಾರ 75 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಸಾರಿ ಹಿನ್ನಲೆ ಹೊಂದಿದ್ದ ಈಕೆ ಮಾ. 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಾ. 14ರಿಂದ 6 ದಿನಗಳಲ್ಲಿ 250 ಪಾಸಿಟಿವ್ ಕೇಸ್ ವರದಿಯಾಗಿವೆ. ಮಾ. 14ರಂದು 36, 15ಕ್ಕೆ 27, 16ಕ್ಕೆ 52, 17ಕ್ಕೆ 77 ಮತ್ತು 18ಕ್ಕೆ 41 ಸೋಂಕಿತರು ಪತ್ತೆಯಾಗಿದ್ದಾರೆ.
ನ್ಯಾಯಾಧೀಶರು ಸೇರಿ ಸಿಬ್ಬಂದಿಗಳಿಗೆ ಸೋಂಕು ತಗುಲಿರುವುದು ಮತ್ತು ನ್ಯಾಯವಾದಿ ಸಾವು ಹಿನ್ನಲೆಯಲ್ಲಿ ಜಿಲ್ಲಾ ನ್ಯಾಯಾಲಯ ಪರಿಸರವನ್ನು ಕಂಟೇನೈಂಟ್ ಝೋನ್ ಎಂದು ಘೋಷಿಸಲಾಗಿದೆ. ಮಾ. 22ರವರೆಗೆ ಕೋರ್ಟ್ ಎಲ್ಲ ಶ್ರೇಣಿ ನ್ಯಾಯಾಲಯಗಳಲ್ಲಿ ಕಲಾಪಗಳನ್ನು ಬಂದ್ ಮಾಡಲಾಗಿದೆ.
ಅಷ್ಟೇ ಅಲ್ಲ ನಗರಸಭೆ ಸಿಬ್ಬಂದಿಗೆ ಪಾಸಿಟಿವ್ ಬಂದಿರುವುದರಿಂದ ಇಡೀ ಕಚೇರಿಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಜ್ ಮಾಡಲಾಗಿದೆ. ಕಚೇರಿ ಮುಖ್ಯ ದ್ವಾರದದಲ್ಲಿ ಸೀಲ್ಡೌನ್ನ ಫಲಕ ಹಾಕಲಾಗಿದೆ. ಸೋಂಕಿತರ ಸಂಪರ್ಕ ಹಿನ್ನಲೆಯಲ್ಲಿ ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರದವರೆಗೆ ಕಚೇರಿ ಸೀಲ್ ಡೌನ್ ಇರಲಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.