ಹಳ್ಳಿಗಳಲ್ಲಿ ಕೋವಿಡ್‌ ಮುಂಜಾಗ್ರತೆಗೆ ಸೂಚನೆ


Team Udayavani, May 13, 2021, 12:09 PM IST

ytre

ಬೀದರ: ಎರಡನೇ ಅಲೆಯ ಹಿನ್ನೆಲೆ ಜಿಲ್ಲೆಯಲ್ಲಿನ ಸದ್ಯದ ಕೋವಿಡ್‌-19 ಸ್ಥಿತಿಗತಿ ಮತ್ತು ಕಠಿಣ ನಿರ್ಬಂಧ ಜಾರಿಗೆ ವಹಿಸಿದ ಕ್ರಮಗಳು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಅವರು ನಗರದ ಬ್ರಿಮ್ಸ್‌ ಕಾಲೇಜಿನಲ್ಲಿ ಜಿಲ್ಲಾಧಿ ಕಾರಿಗಳು, ಜಿಪಂ ಸಿಇಒ ಮತ್ತು ಎಸ್‌ಪಿ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಕೋವಿಡ್‌ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ನಾವೆಲ್ಲರೂ ನಿರಂತರ ಕಾರ್ಯಪ್ರವೃತ್ತರಾಗುವುದು ಅತೀ ಅವಶ್ಯವಿದೆ. ಆಕ್ಸಿಜನ್‌, ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಏನೇ ಕೊರತೆಯಾದರು ತಕ್ಷಣ ತಮ್ಮ ಗಮನಕ್ಕೆ ತರಬೇಕು. ಸಿಎಂ, ಆರೋಗ್ಯ ಸಚಿವರು ಸೇರಿದಂತೆ ಪ್ರಮುಖರೊಂದಿಗೆ ಸಂಪರ್ಕ ಸಾ ಧಿಸಿ ಅನುಕೂಲ ಕಲ್ಪಿಸಿಕೊಡುವುದಾಗಿ ತಿಳಿಸಿದರು.

ಎಷ್ಟೇ ಬಾರಿ ತಿಳಿಸಿದ್ದರೂ ಇನ್ನು ಕೆಲ ಜನರು ಮಾಸ್ಕ್ ಹಾಕದೆ ತಿರುಗುವುದು ಕಾಣುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ದಂಡಿವಿದಿಸಿ ಜನರಿಗೆ ಎಚ್ಚರಿಕೆ ನೀಡುವಂತಾಗಬೇಕು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಗ್ರಾಮೀಣ ಪ್ರದೇಶದವರಿಗೂ ಕೋವಿಡ್‌ ಬಗ್ಗೆ ಮುಂಜಾಗ್ರತೆ ವಹಿಸಲು ಎಲ್ಲ ಪಿಡಿಒ ಅವರ ಸೇವೆಯನ್ನು ಬಳಸಿಕೊಳ್ಳಬೇಕು. ಗ್ರಾಮ ಮಟ್ಟದ ಕಾರ್ಯಪಡೆಗಳು ಕ್ರಿಯಾಶೀಲತೆಯಿಂದ ಇರುವುದು ಈಗ ಅತೀ ತುರ್ತು ಅಗತ್ಯವಿದೆ ಎಂಬುದನ್ನು ಅರಿತು ಅದಕ್ಕಾಗಿ ಕ್ರಮ ವಹಿಸಬೇಕು ಎಂದು ಸಚಿವರು ಸೂಚಿಸಿದರು. ಜ್ವರ, ನೆಗಡಿ ಬಂದರೂ ಜನರು ಈಗ ಭಯಪಡುವಂತಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಈಗ ಜನತೆಗೆ ಸ್ಪಂದಿಸುವುದು ಅತೀ ಅವಶ್ಯ. ಕೋವಿಡ್‌ ಟೆಸ್ಟ್‌, ಆಕ್ಸಿಜನ್‌ ಲಭ್ಯತೆ, ಬೆಡ್‌ಗಳು ಹೀಗೆ ಅವರು ಏನೇ ಕೇಳಿದರೂ ಸರಿಯಾಗಿ ಮಾಹಿತಿ ನೀಡಿ ಜನರಲ್ಲಿ ಧೈರ್ಯ ತುಂಬುವ ರೀತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ, ಜಿಪಂಗಳು ಆರಂಭಿಸಿರುವ ಸಹಾಯವಾಣಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಇದೆ ವೇಳೆ ಸಚಿವರು ಸಲಹೆ ಮಾಡಿದರು. ಇದೆ ವೇಳೆ ಡಿಸಿ ರಾಮಚಂದ್ರನ್‌ ಆರ್‌ ಅವರು ಸಚಿವರಿಗೆ ಹಲವಾರು ಮಾಹಿತಿ ನೀಡಿದರು. ಕೋವಿಡ್‌ ನಿಯಂತ್ರಣಕ್ಕಾಗಿ 50ಕ್ಕೂ ಹೆಚ್ಚು ಅ ಧಿಕಾರಿಗಳನ್ನೊಳಗೊಂಡು ಜಿಲ್ಲಾ ಕೋವಿಡ್‌ ವಾರ್‌ ರೂಮ್‌ ಸ್ಥಾಪಿಸಿ ಜನತೆಗೆ 24×7 ಸಮಯವೂ ಸ್ಪಂದಿಸಲಾಗುತ್ತಿದೆ. ರೆಮ್‌ಡೆಸಿವಿಯರ್‌ ಇಂಜೆಕ್ಷನ್‌, ಬೆಡ್‌ ವ್ಯವಸ್ಥೆ ಲಭ್ಯತೆಯಂತಹ ಅನೇಕ ಮಾಹಿತಿಯನ್ನು ಕೋವಿಡ್‌ ವಾರ್‌ ರೂಮ್‌ನಿಂದ ನೀಡಲಾಗುತ್ತಿದೆ.

ವೈದ್ಯರು ಮತ್ತು ಸಿಬ್ಬಂದಿ ಖುದ್ದು ಕೋವಿಡ್‌ ಸೋಂಕಿತರ ಮನೆಗೆ ಭೇಟಿ ನೀಡಿ, ಎರಡು ರೂಮ್‌ಗಳಿದ್ದಲ್ಲಿ ಐಸೋಲೇಶನ್‌ಗೆ ವ್ಯವಸ್ಥೆ ಮಾಡುವ ಇಲ್ಲದಿದ್ದರೆ ಅವರನ್ನು ಕೋವಿಡ್‌ ಕೇರ್‌ ಹಾಸ್ಪಿಟಲ್‌ಗೆ ಕರೆತಂದು ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಜೊತೆಗೆ ಅವರಿಗೆ ತುರ್ತಾಗಿ ಬೇಕಿರುವ ಔಷ ಧಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತಿದೆ. ಬ್ರಿಮ್ಸಗೆ 5 ಕೆ.ಎಲ್‌. ಆಕ್ಸಿಜನ್‌ ಟ್ಯಾಂಕನ್ನು ಉಚಿತವಾಗಿ ನೀಡಲು ಕೋಳಾರ್‌ ಇಂಡಸ್ಟ್ರಿನ ಸಾಯಿ ಫಾರ್ಮಾ ಅವರು ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ಸೋಂಕಿತರಿಗೂ ಕೂಡ ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಅವಶ್ಯವಿರುವ ಔಷ ಯನ್ನು ಆಸ್ಪತ್ರೆಗಳಲ್ಲಿ ಲಭ್ಯವಿಟ್ಟುಕೊಳ್ಳಲು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಗ್ರಾಪಂ ಕಾರ್ಯಪಡೆ ಕ್ರಿಯಾಶೀಲ: ಕೋವಿಡ್‌ ಹಿನ್ನೆಲೆಯಲ್ಲಿ ಹೋಬಳಿ ಮಟ್ಟದಲ್ಲಿ ಕೊವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ. ಈಗಾಗಲೇ ಎಲ್ಲಾ ಗ್ರಾಪಂವಾರು ಹೆಲ್ಪಡೆಸ್ಕ್ ಮಾಡಲಾಗಿದ್ದು, ಇದೀಗ ಹಳ್ಳಿವಾರು ಮಾಡಲು ಕ್ರಮ ವಹಿಸಲಾಗುವುದು. ಗ್ರಾಮಮಟ್ಟದ ಕಾರ್ಯಪಡೆಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಜಿಪಂ ಸಿಇಒ ಜಹೀರಾ ನಸೀಮ್‌ ಅವರು ಸಚಿವರಿಗೆ ಮಾಹಿತಿ ನೀಡಿದರು. ಈ ವೇಳೆ ಎಸ್‌ಪಿ ನಾಗೇಶ ಡಿ.ಎಲ್‌, ಡಿಎಚ್‌ಒ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್‌ ನಿರ್ದೇಶಕ ಡಾ| ಶಿವಕುಮಾರ ಇನ್ನಿತರರು ಇದ್ದರು.

 

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.