ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಲಂಬಾಣಿ ನೃತ್ಯ ಸೇರಿ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಯ ಕಳೆ ಹೆಚ್ಚಿಸಲಿವೆ

Team Udayavani, Feb 18, 2021, 5:51 PM IST

ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಭಾಲ್ಕಿ: ಪಟ್ಟಣದಲ್ಲಿ ಫೆ.19 ರಂದು ಸಾರ್ವಜನಿಕ ಜಯಂತಿ ಉತ್ಸವ ಸಮಿತಿ ವತಿಯಿಂದ ಶಿವಾಜಿ ಮಹಾರಾಜರ 399ನೇ ಜಯಂತಿ ಮಹೋತ್ಸವ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮರಾಠಾ ಸಮಾಜದ ಹಿರಿಯ ಮುಖಂಡ, ಜಯಂತಿ ಉತ್ಸವ ಸಮಿತಿ ಪ್ರಮುಖರು ಆಗಿರುವ ಜನಾರ್ದನ ಬಿರಾದಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಂತಿ ಆಚರಣೆಗೆ ಸರಕಾರದ ಅನುಮತಿ ಪಡೆಯಲಾಗಿದೆ. ಶಿವಾಜಿ ಮಹಾರಾಜರು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರ ಚಿಂತನೆ, ಆದರ್ಶಗಳು ಎಲ್ಲರೂ ಪಾಲನೆ ಮಾಡುತ್ತಾರೆ. ಹಾಗಾಗಿ ಎಲ್ಲ ಸಮಾಜದ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಜಯಂತಿ ಮಹೋತ್ಸವ ಐತಿಹಾಸಿಕವಾಗಿ ಆಚರಣೆ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಭಾಲ್ಕೇಶ್ವರ ಮಂದಿರ ಆವರಣದಿಂದ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಹೊರಟು, ಪ್ರಮುಖ ರಸ್ತೆ, ಬೀದಿ ಮೂಲಕ ಸಂಚರಿಸಿ ಶಿವಾಜಿ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಲಂಬಾಣಿ ನೃತ್ಯ ಸೇರಿ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಯ ಕಳೆ ಹೆಚ್ಚಿಸಲಿವೆ ಎಂದರು.

ಬಳಿಕ ಸಂಜೆ 7ಕ್ಕೆ ಶಿವಾಜಿ ವೃತ್ತದ ರಸ್ತೆಯಲ್ಲಿ ಜಯಂತಿ ನಿಮಿತ್ತ ವೇದಿಕೆ ಸಮಾರಂಭ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಜಯಂತಿ ಸಮಾರಂಭ ಉದ್ಘಾಟಿಸಲಿದ್ದಾರೆ. ಸಂಸದ ಭಗವಂತ ಖೂಬಾ, ಶಾಸಕ ಈಶ್ವರ ಖಂಡ್ರೆ, ಎಂಎಲ್ಸಿ ವಿಜಯಸಿಂಗ್‌, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಮಾರುತಿರಾವ ಮೂಳೆ, ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ, ವಿಧಾನ ಪರಿಷತ್‌ನ ಮಾಜಿ ಉಪಸಭಾಪತಿ ಕೇಶವರಾವ ನಿಟ್ಟೂರಕರ್‌, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಎಪಿಎಂಸಿ ಅಧ್ಯಕ್ಷ ಬನಸಿಲಾಲ್‌ ಬೋರಾಳೆ, ಹೀರಾಚಂದ ವಾಘಮಾರೆ, ಅಶೋಕರಾವ ಸೋನಜಿ, ದಯಾನಂದ ಸೂರ್ಯವಂಶಿ, ಬಾಬುರಾವ ಕಾರಬಾರಿ, ತಾಪಂ ಅಧ್ಯಕ್ಷೆ ಮೀರಾಬಾಯಿ ಕಣಜೆ, ಪ್ರವೀಣ ಸಾವರೆ, ಪಂಚಶೀಲ ಕಣಜೆ, ಸಂತೋಷ ತಗರಖೇಡ್‌, ಕಿಶನರಾವ ಪಾಟೀಲ್‌ ಇಂಚೂರಕರ್‌, ಯಶವಂತ ಭೋಸ್ಲೆ, ರಾಮರಾವ ವರವಟ್ಟಿಕರ್‌, ಡಿಗಂಬರರಾವ ಮಾನಕಾರಿ, ಅನೀಲಕುಮಾರ ಶಿಂಧೆ, ನಂದಕುಮಾರ ಸಾಳೊಂ ಕೆ, ಯಾದವರಾವ ಕಣಜೆ, ನಾಮದೇವರಾವ ಪವಾರ್‌, ಡಾ.ರಾಜೇಂದ್ರ ಜಾಧವ, ರಾಹುಸಾಹೇಬ ತಗರಖೇಡೆ, ಶೇಷರಾವ ಕಣಜಿಕರ್‌, ವಿಜಯಕುಮಾರ ಪಾಟೀಲ್‌, ಬಾಬುರಾವ ಹುಣಸನಾಳೆ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಜಯಂತಿ ಮಹೋತ್ಸವ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಜಯಂತಿ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಕಿಶನರಾವ ಪಾಟೀಲ್‌ ಇಂಚೂರಕರ್‌, ಸಮಿತಿ ಉಪಾಧ್ಯಕ್ಷ ದಯಾನಂದ ಸೂರ್ಯವಂಶಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಗೋವಿಂದರಾವ ಬಿರಾದಾರ್‌, ಪಾಂಡುರಂಗ ಕನಸೆ, ಕೇಶವ ಸೂರ್ಯವಂಶಿ, ಶರದ ದುರ್ಗಾಳೆ, ಆಶೀಶ ತಗರಖೇಡೆ, ಯಶವಂತ ಭೋಸ್ಲೆ, ದತ್ತು ಜಾಧವ, ಸಂತೋಷ ತಗರಖೇಡೆ ಇದ್ದರು.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.