ಆಂಧ್ರ ಮಾದರಿಯಲ್ಲಿ ಭತ್ತ ಖರೀದಿಗೆ ಬೇಡಿಕೆ


Team Udayavani, Nov 23, 2021, 12:38 PM IST

9paddy

ಸಿಂಧನೂರು: ಕಳೆದ ಎರಡ್ಮೂರು ದಶಕಗಳಿಂದಲೂ ಭತ್ತ ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರ ತೆರೆದರೂ ಖರೀದಿ ಪ್ರಮಾಣ 20 ಕ್ವಿಂಟಲ್‌ ದಾಟುತ್ತಿಲ್ಲ. ಆದರೆ, ಆಂಧ್ರಪ್ರದೇಶದಲ್ಲಿ ವಾರ್ಷಿಕ 50 ಲಕ್ಷ ಮೆಟ್ರಿಕ್‌ ಟನ್‌ ಖರೀದಿ ಮಾಡಿದ ಮಾದರಿಯನ್ನು ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕೆಂಬ ಕೂಗು ಬಲವಾಗಿದೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಅಧಿಕೃತ ನೀರಾವರಿ ಪ್ರದೇಶವಾದ 6 ಲಕ್ಷ ಎಕರೆಯಲ್ಲಿ ಭತ್ತ ಬೆಳೆಯಲಾಗುತ್ತಿದ್ದರೂ ಎಪಿಎಂಸಿ ವರ್ತಕರನ್ನೇ ಮಾರಾಟಕ್ಕೆ ಅವಲಂಬಿಸಲಾಗಿದೆ. ಇಂತಹ ಪರಿಸ್ಥಿತಿಯಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಈಗಾಗಲೇ ಹೊರಬಂದಿವೆ. ಅಲ್ಲಿನ ಸರಕಾರಗಳು ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಿದ ಭತ್ತವನ್ನು ಮರಳಿ ಪಡಿತರ ವಿತರಣೆಗೆ ಬಳಸುವ ಮೂಲಕ ಮುನ್ನಡೆ ಸಾಧಿಸಿವೆ. ಅದನ್ನೇ ರಾಜ್ಯದಲ್ಲೂ ನೀತಿಗಳನ್ನು ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ.

ಷರತ್ತುಗಳು ವಿಭಿನ್ನ

ಭತ್ತ ನುಚ್ಚಾಗುವ ಪ್ರಮಾಣ, ಬಣ್ಣ ಬದಲಿಸುವ ಪ್ರಮಾಣ, ಕೆಂಪು ಅಕ್ಕಿಯ ಪ್ರಮಾಣ, ತೇವಾಂಶ ಪ್ರಮಾಣವನ್ನು ಪ್ರತ್ಯೇಕವಾಗಿ ವಿಭಜಿಸಿ ಶೇ.17ರಷ್ಟು ಗುಣಮಟ್ಟವನ್ನು ಅಳೆಯುವಂತೆ ಆಂಧ್ರಪ್ರದೇಶ ಸರಕಾರ ಸೂಚನೆ ನೀಡಿದೆ. ಇದರಲ್ಲಿ ಶೇ.14ರಷ್ಟು ತೇವಾಂಶ ಇರುವ ಅಕ್ಕಿಯನ್ನು ಕೂಡ ಖರೀದಿ ಮಾಡಲಾಗುತ್ತಿದೆ. ನುಚ್ಚಾಗುವ ಪ್ರಮಾಣ, ಕಪ್ಪಾಗುವ ಪ್ರಮಾಣ ಪ್ರತ್ಯೇಕಗೊಳಿಸಿ ಮಾರ್ಗಸೂಚಿ ಹೊರಡಿಸಲಾಗಿದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಶೇ.17ಕ್ಕಿಂತಲೂ ಕಡಿಮೆ ತೇವಾಂಶ ಇರುವ ಅಕ್ಕಿಯನ್ನು ಖರೀದಿ ಮಾಡಬಾರದೆಂಬ ಷರತ್ತು ಇದುವರೆಗೂ ರೈತರನ್ನು ಕಟ್ಟಿ ಹಾಕಿದೆ. ಇಂತಹ ಷರತ್ತು ಸಡಿಲಗೊಳಿಸಿದರೆ ಮಾತ್ರ ಖರೀದಿ ಕೇಂದ್ರಗಳ ನೈಜ ಪ್ರಯೋಜನ ದೊರೆಯುತ್ತದೆಂಬ ಒತ್ತಾಯ ರೈತರದ್ದು.

ರಾಜ್ಯದಲ್ಲಿ ಮಿತಿಯೂ ಕಡಿಮೆ

ರಾಯಚೂರು ಜಿಲ್ಲೆಯಲ್ಲಿ 1 ಲಕ್ಷ 55 ಸಾವಿರ ಎಕರೆಯಲ್ಲಿ ಭತ್ತ ಬೆಳೆಯುತ್ತಿದ್ದು, 7 ಲಕ್ಷ 30 ಸಾವಿರ ಟನ್‌ ಉತ್ಪಾದನೆ ಲೆಕ್ಕ ಹಾಕಲಾಗಿದೆ. ವಾಸ್ತವದಲ್ಲಿ ಪ್ರತಿ ಎಕರೆಗೆ 40 ಚೀಲಗಳ ಲೆಕ್ಕದಲ್ಲಿ ಉತ್ಪಾದನೆ ಪ್ರಮಾಣ ದ್ವಿಗುಣವಿದೆ. ಖರೀದಿಗೆ ನಿಗದಿಪಡಿಸಿದ 3.5 ಲಕ್ಷ ಮೆಟ್ರಿಕ್‌ ಟನ್‌ ಭತ್ತವನ್ನು ಬರೀ ಸಿಂಧನೂರು ತಾಲೂಕಿನಿಂದಲೇ ಕೊಡಲು ಸಾಧ್ಯವಿದೆ. ಖರೀದಿಗೆ ಸುಲಭ ಮಾರ್ಗಸೂಚಿ ಇಲ್ಲದ ಪರಿಣಾಮ ರಾಜ್ಯದಲ್ಲಿ ತೊಂದರೆ ಎದುರಾಗಿದೆ. ಆಂಧ್ರಪ್ರದೇಶದಲ್ಲಿ ಭತ್ತದ ಗುಣಮಟ್ಟ ಅಳೆಯುವ ರೀತಿ ವಿಭಿನ್ನವಾಗಿದ್ದರಿಂದ ಅಲ್ಲಿ ಯಶಸ್ಸು ಸಾಧಿಸಲಾಗಿದೆ. ಅದೇ ಪದ್ಧತಿ ಕರ್ನಾಟಕದಲ್ಲೂ ಜಾರಿಗೆ ಬರಬೇಕೆಂದು ರೈತರು ಒತ್ತಾಯಿಸಲಾರಂಭಿಸಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ರೈತರ ಭತ್ತವನ್ನು ಖರೀದಿಸಲು ಸಾಧ್ಯವಾಗಿದ್ದರೂ ಕರ್ನಾಟಕದಲ್ಲಿ ಇದುವರೆಗೂ ಪ್ರಯೋಜನ ಲಭಿಸಿಲ್ಲ. ಆಂಧ್ರ ಸರಕಾರದ ಮಾದರಿಯನ್ನು ರಾಜ್ಯದಲ್ಲಿ ಅನುಸರಿಸಿ, ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಬೇಕು. -ಹಂಪನಗೌಡ ಬಾದರ್ಲಿ, ಮಾಜಿ ಶಾಸಕರು, ಸಿಂಧನೂರು­

-ಯಮನಪ್ಪ ಪವಾರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.