ಬೀದರ ಸೋಂಕು ಮುಕ್ತ ಜಿಲ್ಲೆ!
ಜಿಲ್ಲೆಗಳಲ್ಲಿ ಪ್ರಥಮವಾಗಿ, ಈಗ ಕೋವಿಡ್ ಮುಕ್ತವಾದ ಮೊದಲ ಜಿಲ್ಲೆ ಎನಿಸಿಕೊಂಡಿದೆ
Team Udayavani, Sep 3, 2021, 6:25 PM IST
ಬೀದರ: ದೇಶದಲ್ಲೇ ಕೋವಿಡ್ ಹಾಟ್ಸ್ಪಾಟ್ ಜಿಲ್ಲೆಯಾಗಿ ಅಪಖ್ಯಾತಿ ಹೊತ್ತಿದ್ದ ಬೀದರ ಈಗ ರಾಜ್ಯದಲ್ಲಿ ಮೊದಲ “ಸೋಂಕು ಮುಕ್ತ’ ಜಿಲ್ಲೆ ಎಂಬ ಹೆಗ್ಗಳಿಗೆಕೆ ಪಾತ್ರವಾಗಿದೆ. ಸದ್ಯ ಸೋಂಕಿತರು ಮಾತ್ರವಲ್ಲ, ಸಕ್ರಿಯ ಪ್ರಕರಣ ಸಹ ಶೂನ್ಯಕ್ಕೆ ಇಳಿದಿರುವುದು ಧರಿನಾಡಿನ ಜನರು ನಿಟ್ಟಿಸಿರು ಬಿಡುವಂತಾಗಿದೆ. ಆದರೂ ಬೀದರ ಗಡಿನಾಡು ಆಗಿರುವುದರಿಂದ ಸಂಭವನೀಯ 3ನೇ ಅಲೆ ಆತಂಕ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ.
ಮೊದಲ ಅಲೆಗಿಂತ ಎರಡನೇ ಅಲೆ ವೇಳೆ ಅಬ್ಬರಿಸಿ ತಲ್ಲಣ್ಣವನ್ನೇ ಸೃಷ್ಟಿಸಿದ್ದ ಬೀದರನಲ್ಲೇ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಕಳೆದೊಂದು ವಾರದಲ್ಲಿಕೇವಲ ಒಂದು ಪಾಸಿಟಿವ್ ಪ್ರಕರಣ ಮಾತ್ರ ಪತ್ತೆಯಾಗಿದ್ದು, ನಿತ್ಯ ಶೂನ್ಯ ಪ್ರಕರಣ ದಾಖಲಾಗಿವೆ. ಜಿಲ್ಲಾಡಳಿತ, ವೈದ್ಯರ ಸತತ ಪರಿಶ್ರಮದ ಜತೆಗೆ ಲಾಕ್ಡೌನ್ ಜಾರಿ, ಜನರ ಮುನ್ನೆಚ್ಚರಿಕೆ ಕ್ರಮದಿಂದಾಗಿ ಸದ್ಯದ ಮಟ್ಟಿಗೆ ಜಿಲ್ಲೆ ಕೊರೊನಾ ವೈರಸ್ನಿಂದ ಸಂಪೂರ್ಣ ಮುಕ್ತವಾದಂತಾಗಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ದೃಢಪಡಿಸಿದೆ.
ಬೀದರನಲ್ಲಿ ಪ್ರಸಕ್ತ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ದಿನಕ್ಕೆ 400 ರಿಂದ 500ರವರೆಗೆ ಪಾಸಿಟಿವ್ ಕೇಸ್ಗಳು ಪತ್ತೆಯಾಗುವ ಮೂಲಕ ಅಬ್ಬರಿಸಿದ್ದ ಮಾರಕ ಸಾಂಕ್ರಾಮಿಕ ರೋಗ ನಂತರ ಹತೋಟಿಗೆ ಬರುತ್ತಾ ಬಂದಿದೆ. ಸೋಂಕಿತರ ಸಂಖ್ಯೆ ಹೆಚ್ಚಳದಿಂದ ಬ್ರಿಮ್ಸ್ ಅಷ್ಟೇ ಅಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್ ಕೊರತೆ ಎದುರಾಗಿ ರೋಗಿ-ಸಂಬಂಧಕರ ಆಕ್ರಂದನ ಹೆಚ್ಚಿತ್ತು. ಎರಡು ತಿಂಗಳ ಹಿಂದೆ ರಾಜ್ಯದಲ್ಲೇ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ದಾಖಲಾಗುತ್ತಿರುವ ಜಿಲ್ಲೆಗಳಲ್ಲಿ ಪ್ರಥಮವಾಗಿ, ಈಗ ಕೋವಿಡ್ ಮುಕ್ತವಾದ ಮೊದಲ ಜಿಲ್ಲೆ ಎನಿಸಿಕೊಂಡಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 24,300 ಪಾಸಿಟಿವ್ ಕೇಸ್ಗಳು ವರದಿಯಾಗಿದ್ದು, 23,898 ಜನ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 398 ಜನ ಸೋಂಕಿತರು ಮತ್ತು 4 ಮಂದಿ ಕೋವಿಡ್ ಸಹಿತ ಇತರೆ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸಾ ವ್ಯವಸ್ಥೆ, ವೈದ್ಯ ಸಿಬ್ಬಂದಿಗಳ ಮೇಲೆ ನಿಗಾ ವಹಿಸಲು ಎಲ್ಲ ಕೋವಿಡ್ ವಾರ್ಡ್ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಸೇರಿ ಕಠಿಣ ಕ್ರಮಗಳ ಜತೆಗೆ ಎರಡು ರಾಜ್ಯದ ಒಟ್ಟು 9 ಗಡಿ ಚೆಕ್ಪೋಸ್ಟ್ಗಳಲ್ಲಿ ತೀವ್ರ ಕಟ್ಟೆಚ್ಚರದ ಪರಿಣಾಮ ಇಂದು ರೋಗ ಹತೋಟಿಗೆ ಬರಲು ಸಾಧ್ಯವಾಗಿದೆ.
*ಶಶಿಕಾಂತ ಬಂಬುಳಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Anubhava Mantapa ಡಿಸೆಂಬರ್ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ
CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.