ಆರೋಗ್ಯ ಸೇವೆ ಸ್ಥಗಿತ; ಸರ್ಕಾರಕ್ಕೆ ವೈದ್ಯರ ಎಚ್ಚರಿಕೆ


Team Udayavani, Sep 14, 2020, 11:29 PM IST

ಆರೋಗ್ಯ ಸೇವೆ ಸ್ಥಗಿತ; ಸರ್ಕಾರಕ್ಕೆ ವೈದ್ಯರ ಎಚ್ಚರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿ.ಜಿ.ಎಚ್.ಎಸ್.) ಮಾದರಿಯಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘದ ಕಾರ್ಯದರ್ಶಿ ಡಾ. ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಸೋಮವಾರ ವೈದ್ಯರು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಬೇಡಿಕೆಗಳುಳ್ಳ ಮನವಿ ಪತ್ರ ಸಲ್ಲಿಸಿದರು.

ಸೆ. 15ರೊಳಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹಂತಹಂತವಾಗಿ ಮುಷ್ಕರದ ಮೊರೆ ಹೋಗಲಾಗುವುದು. ಸೆ.15ರಿಂದ ಇಲಾಖೆಯ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಸರ್ಕಾರಕ್ಕೆ ನೀಡುತ್ತಿರುವ ವರದಿಗಳನ್ನು ಸ್ಥಗಿತಗೊಳಿಸಿ ಆರೋಗ್ಯ ಸೇವೆಯನ್ನು ನೀಡುವುದು ಹಾಗೂ ಸೆ. 21ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವೈದ್ಯರ ಬೇಡಿಕೆಗಳ್ಯಾವವು?
ಕೋವಿಡ್ 19 ಅವಧಿಯಲ್ಲಿ ಚಿಕಿತ್ಸೆ ನೀಡುತ್ತಿದ್ದ 15 ವೈದ್ಯಾಧಿಕಾರಿಗಳು ಹಾಗೂ ಹಲವು ಸಿಬ್ಬಂದಿ ವರ್ಗದವರು ಸಾವನ್ನಪ್ಪಿದ್ದಾರೆ. ಕೋವಿಡ್ 19 ಸೇವೆಯಲ್ಲಿದ್ದು ಮೃತಪಟ್ಟ ವೈದ್ಯರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು.

ಕೇಂದ್ರದ ಗರೀಬ್ ಕಲ್ಯಾಣ ಯೋಜನೆಯ ವಿಮೆಯಲ್ಲೂ ಸೋಂಕು ದೃಢಪಟ್ಟಿದ್ದರೆ ಮಾತ್ರ ಪರಿಹಾರ ಸಿಗುತ್ತದೆ. ಇವರೆಲ್ಲರೂ ಕೋವಿಡ್ 19 ಕಾರ್ಯ ಒತ್ತಡದಿಂದ ಮೃತಪಟ್ಟಿದ್ದಾರೆ. ಹೀಗಾಗಿ ಇವರೂ ಕೋವಿಡ್ 19 ಯೋಧರೇ ಆಗಿರುವುದರಿಂದ ಇವರಿಗೂ ಸಹ ಪರಿಹಾರ ನೀಡಬೇಕು.

ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯರಿಗೂ ಹಾಗೂ ಆರೋಗ್ಯ ಇಲಾಖೆ ವೈದ್ಯರ ವೇತನಕ್ಕೆ ಸಾಕಷ್ಟು ತಾರತಮ್ಯವಿದ್ದು, ಇದನ್ನು ನಿವಾರಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿ ಮಾಡಬೇಕು, ವೈದ್ಯರ ಮೇಲೆ ಆರೋಪ ಬಂದಾಗ ಇಲಾಖೆ ಹಂತದಲ್ಲಿ ತನಿಖೆ ನಡೆಸಿ ಸಾಬೀತಾದರೆ ಮಾತ್ರ ಅಮಾನತು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.