ಕೌಶಲತೆಯಿಂದ ಆರ್ಥಿಕ ಸದೃಢತೆ ಸಾಧ್ಯ: ಬಾವಗಿ


Team Udayavani, Feb 26, 2022, 1:00 PM IST

12skill

ಬೀದರ: ಕೌಶಲತೆಗೆ ಬೆಲೆ ಕೊಟ್ಟಾಗ ಆರ್ಥಿಕ ಸದೃಢತೆ ಸಾಧಿಸಬಹುದು. ಹೊಸ ತಂತ್ರಜ್ಞಾನ ಕಲಿಯುವಿಕೆಗೆ ಕುಶಲಕರ್ಮಿಗಳು ಸಮಯ ನೀಡಿ ಕಾರ್ಯ ಮಾಡಿದಾಗ ತರಬೇತಿಯಿಂದ ವರ್ತನೆಯಲ್ಲಿ ಪರಿವರ್ತನೆ ಕಾಣಲು ಸಾಧ್ಯ ಎಂದು ಸಿಪಿಐ ವಿಜಯಕುಮಾರ ಬಾವಗಿ ನುಡಿದರು.

ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ನಡೆದ ತರಬೇತಿದಾರರಿಗೆ ಸಂವಹನ ತರಬೇತಿ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹುಟ್ಟಿನಿಂದ ಸಾಯುವವರೆಗೆ ಕಲಿಯುವಿಕೆ ನಿರಂತರವಾಗಿರಬೇಕು. ದಿನನಿತ್ಯ ಹೊಸ ಆವಿಷ್ಕಾರ, ತಂತ್ರಜ್ಞಾನ ಕೌಶಲ ಹೊರಹೊಮ್ಮುತ್ತಿದ್ದು, ಕೈಗಾರಿಕೆಗಳು ಸಹಿತ ಅಭಿವೃದ್ಧಿಗೊಂಡಿವೆ. ಬೆನ್ನೆಲುಬುಗಳಾದ ತಾವು ತರಬೇತಿಯ ಲಾಭ ಪಡೆದುಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಿಗೆ ನೌಕರಿಗಳ ಕೊರತೆ ಇಲ್ಲ, ತಾವು ಕೇವಲ ಕೋರ್ಸ್‌ಗೆ ಸೀಮಿತವಾಗಿ ಓದಿದದೆ ಅದರ ಒಳಾರ್ಥ ಅರಿತು ಕೆಲಸ ಕಲಿತು ನಾಲ್ಕಾರು ಜನರಿಗೆ ಉದ್ಯೋಗ ಕೊಟ್ಟು ತಾವೊಬ್ಬ ಉದ್ಯೋಗಪತಿ ಆಗಬೇಕೆಂದರು.

ಬೆಂಗಳೂರು ಉನ್ನತಿ ಎಂಟರ್‌ ಪ್ರೈಸಸ್‌ನ ಆನಂದಕುಮಾರ ಮಾತನಾಡಿ, ಭವಿಷ್ಯದ ಬಗ್ಗೆ ವಿಚಾರ ಮಾಡಿ ವರ್ತಮಾನದಲ್ಲಿ ಕ್ರಿಯಾಶೀಲ ಕೆಲಸ ಮಾಡುವ ಶಕ್ತಿ ನಮಗೆ ಇದೆ. ತಮ್ಮ ಜ್ಞಾನಕ್ಕೆ ಪೂರಕವಾದ ಶಿಕ್ಷಣ ನೀಡಿ ಸನ್ನದ್ದುಗೊಳಿಸಿ ಕೈಗಾರಿಕೆಗೆ ಕಳಿಸುವ ದಿಶೆಯಲ್ಲಿ ಶ್ರಮಿಸುತ್ತಿದ್ದೇವೆ. ತಮ್ಮಲ್ಲಿ ಆರು ವರ್ಷಗಳಿಂದ ತರಬೇತಿದಾರರಿಗೆ ಉಚಿತ ಶಿಕ್ಷಣ ಕಲಿಸಿ ಆತ್ಮವಿಶ್ವಾಸ ಹಿಚ್ಚೆಸುವುದೆ ನಮ್ಮ ಗುರಿ. ತಮ್ಮಲ್ಲಿ ಮೂರು ತಿಂಗಳನಿಂದ 120 ತರಬೇತಿದಾರರು ಸಂವಹನ ತರಬೇತಿ ಕಲಿತು ಮಾನಸಿಕವಾಗಿ ಸದೃಢಗೊಂಡಿದ್ದು, ಸಂಸ್ಥೆಯ ಕಾರ್ಯ ನೆಮ್ಮದಿ ತಂದಿದೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿ, ನಮ್ಮಲ್ಲಿ ವೈವಿಧ್ಯಮಯ ತರಬೇತಿ, ವಿವಿಧ ಕೌಶಲತೆ, ತರಬೇತಿದಾರರಿಗೆ ಸಮಗ್ರವಾಗಿ ಮುನ್ನಡೆಯಲು ಸಹಕರಿಸುವುದೇ ನಮ್ಮ ಕೆಲಸ. ಇಲ್ಲಿ ಕಲಿತ ತರಬೇತಿದಾರರು ಅಂಕಪಟ್ಟಿ ಪಡೆಯುವುದರ ಜೊತೆಗೆ ಉದ್ಯೋಗ ಪತ್ರ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದ್ದು, ತಾವು ಸಹಕರಿಸಿ ಎಂದು ಮನವಿ ಮಾಡಿದರು.

ತರಬೇತಿ ಪಡೆದ ಆನಂದ, ಸಾಯಿಕುಮಾರ, ಗುರುಪ್ರಸಾದ, ಆದರ್ಶ, ಶಿವಶರಣಪ್ಪ ಮಾತನಾಡಿ, ನಮಗೆ ಕಬ್ಬಿಣ ಕಡಲೆಯಾಗಿದ್ದ ಇಂಗ್ಲಿಷ್‌ ನೆಲೆಗಡಲೆ ಮಾಡಿ, ಸಂದರ್ಶನಕ್ಕೆ ಯಾವ ಮಾನದಂಡ ಎಂಬ ಜ್ಞಾನದ ಅರಿವು ಮೂಡಿಸಿದ್ದಾರೆ. ನಮಗೆ ಕೌಶಲ ಜೊತೆಗೆ ಜೀವನದಲ್ಲಿ ಹೇಗೆ ಬಾಳಬೇಕೆಂದು ಎಳೆ ಎಳೆಯಾಗಿ ತಿಳಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.