ಮಾಜಿ ಶಾಸಕ ಮುಳೆ ಬಿಜೆಪಿ ಸೇರ್ಪಡೆ


Team Udayavani, Oct 23, 2017, 11:17 AM IST

bid-1.jpg

ಬಸವಕಲ್ಯಾಣ: ಜಗತ್ತಿಗೆ ಕಾಯಕ ತತ್ವ, ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಪುಣ್ಯ ಭೂಮಿ ಬಸವಕಲ್ಯಾಣದಿಂದ ಬಿ.ಎಸ್‌. ಯಡಿಯೂರಪ್ಪ ಸ್ಪರ್ಧಿಸಲಿ ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಶಾಸಕ ಎಂ.ಜಿ. ಮುಳೆ ಹೇಳಿದರು. ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ಇಲ್ಲಿಂದ ಸ್ಪರ್ಧಿಸಿದರೆ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಘೋಷಿಸಿದರು.

ಬಸವಣ್ಣನವರು ಪ್ರಧಾನಿಯಾಗಿ ಕೆಲಸ ಮಾಡಿದ ಈ ನೆಲ ಅತ್ಯಂತ ಪವಿತ್ರ ನೆಲವಾಗಿದೆ. ಅನುಭವ ಮಂಟಪದ ಮೂಲಕ 12ನೇ ಶತಮಾನದಲ್ಲಿ ಶರಣರು ಪ್ರಥಮ ಬಾರಿಗೆ ಜಗತ್ತಿಗೆ ಸಂಸತ್‌ ಪರಿಕಲ್ಪನೆ ನೀಡಿದ್ದಾರೆ. ಪ್ರಧಾನಿಯಾಗಿ ಕೆಲಸ ಮಾಡಿದ ಬಸವಣ್ಣನವರ ನೆಲದಿಂದ ಆಯ್ಕೆಯಾದ ಅಭ್ಯರ್ಥಿ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ನಮ್ಮ ಆಶಯವಾಗಿದೆ ಎಂದರು. 

ಬಸವಕಲ್ಯಾಣದಲ್ಲಿ 12ನೇ ಶತಮಾನದ ಗತವೈಭವ, ಗೌರವ ಪುನರ್‌ ಸ್ಥಾಪನೆ ಆಗಬೇಕಾದರೆ. ಇಲ್ಲಿಂದ ಸ್ಪ ರ್ಧಿಸಲು ಬಿ.ಎಸ್‌. ಯಡಿಯೂರಪ್ಪ ಅವರು ಮನಸ್ಸು ಮಾಡಬೇಕು. ಈ ಬಗ್ಗೆ ಅವರ ಮನವೊಲಿಸಬೇಕು ಎಂದು ವೇದಿಕೆಯಲಿದ್ದ ಮಾಜಿ ಸಿಎಂ ಜಗದೀಶ ಶಟ್ಟರ ಹಾಗೂ ಶ್ರೀರಾಮುಲು ಅವರಿಗೆ ಮನವಿ ಮಾಡಿದರು.

ಮೂರು ದಶಕಗಳ ರಾಜಕೀಯ ಇತಿಹಾದಲ್ಲಿ ಅನೇಕ ಏಳು, ಬೀಳು ಕಂಡಿದ್ದೇನೆ. ಯಾವುದೇ ಷರತ್ತು ಇಲ್ಲದೇ, ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರಿದ್ದೇನೆ. ಯಾವುದೇ ಶಂಕೆ ಬೇಡ. ಪಕ್ಷದಲ್ಲಿ ಯಾರಿಗೂ ಭಾರ ಆಗಲಾರೆ. ಬೇರೆಯವರ ಭಾರ ಹೊರಲು ಬಂದಿದ್ದೇನೆ. ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ರಾಜ್ಯದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮರಾಠಾ ಸಮಾಜದ ಜನರು ನಿರ್ಣಾಯಕ ಮತದಾರರಾಗಿದ್ದಾರೆ. ಎಲ್ಲೆಡೆ ಸಂಚರಿಸಿ ಬಿಜೆಪಿಗೆ ಬಲ ತುಂಬಲು ಪ್ರಯತ್ನಿಸುತ್ತೇನೆ
ಎಂದರು. ಹಿಂದೆ 1999ರಲ್ಲಿ ಕ್ಷೇತ್ರದಿಂದ ಜೆಡಿಎಸ್‌ ನಿಂದ ಸ್ಪ ರ್ಧಿಸಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಿದ್ದೇನೆ. ಆಗ ಜಿಲ್ಲೆಯಲ್ಲಿ 6 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಬಸವಕಲ್ಯಾಣದಲ್ಲಿ ಮಾತ್ರ ಜೆಡಿಎಸ್‌ನಿಂದ ನಾನು ಆಯ್ಕೆಯಾಗಿದ್ದೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಶಾಂತಿ, ಸುವ್ಯವಸ್ಥೆಗೆ ಹೆಸರಾಗಿದ್ದ ಶರಣರ ನಾಡಿನಲ್ಲಿ ಇಂದು ಭಯದ ವಾತಾವರಣ ನಿರ್ಮಾಣವಾಗಿದೆ. ಕೆಂಪು ಕಲ್ಲಿನ ಗಣಿಗಳಲ್ಲಿ ಒಂದು ಕಲ್ಲಿಗೆ ಎರಡು ರೂಪಾಯಿಯಂತೆ ಹಣ ವಸೂಲಿ ಮಾಡಲಾಗುತ್ತಿದೆ. ವಸತಿ ಯೋಜನೆಯಡಿ ಬಡವರಿಗಾಗಿ ಬರುವ ಮನೆಗಳ ಹಂಚಿಕೆಗೆ ತಲಾ 20 ಸಾವಿರದಂತೆ ಹಣ ತೆಗೆದುಕೊಳ್ಳಲಾಗುತ್ತಿದೆ. ನವೋದಯ, ಸೈನಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳ ಪ್ರವೇಶಕ್ಕಾಗಿ ನಗರದಲ್ಲಿ ನಡೆಯುವ ಕೋಚಿಂಗ್‌ ಕ್ಲಾಸ್‌ಗಳ ಮೇಲೆ ದಾಳಿ ಮಾಡಿ ಅಲ್ಲಿಯೂ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಮುಳೆ ಸ್ಥಳೀಯ ಶಾಸಕ ಖೂಬಾ ಹೆಸರೆತ್ತದೇ ಆರೋಪಿಸಿದರು.

ನಿಮ್ಮ ಕಟ್ಟಡ, ಲೇಔಟ್‌ ಏನಾಗುತ್ತದೆ ಎನ್ನುವುದು ತಿಳಿಯದ ಸ್ಥಿತಿ ಈಗ ನಿರ್ಮಾಣವಾಗಿದೆ. ಅವರು ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಿದ್ದಾರೆ. ನಾನೂ ಯಾರಿಗೂ ಹೆದರುವುದಿಲ್ಲ. ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ ಪುನರ್‌ ನಿರ್ಮಾಣವಾಗಬೇಕು ಎನ್ನುವುದೇ ನನ್ನ ಆಶಯವಾಗಿದೆ. ಅಲ್ಪ ಸಂಖ್ಯಾತರಲ್ಲಿ ಯಾವುದೇ ಸಂದೇಹ ಬೇಡ. ನಿಮ್ಮ ರಕ್ಷಣೆ ನನ್ನ ಜವಾಬ್ದಾರಿ. ಭರವಸೆ ಇಟ್ಟು ನಮ್ಮೊಂದಿಗೆ ಬನ್ನಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.