![1-sadsad](https://www.udayavani.com/wp-content/uploads/2024/07/1-sadsad-415x233.jpg)
ಗಾಂಧೀಜಿ ಕನಸು ಸಾಕಾರವಾಗಬೇಕಾದರೆ ಗ್ರಾಮಗಳ ಜೀರ್ಣೋದ್ಧಾರ ಅಗತ್ಯ
Team Udayavani, Sep 7, 2022, 5:08 PM IST
![12-dream](https://www.udayavani.com/wp-content/uploads/2022/09/12-dream-620x298.jpg)
ಬೀದರ: ಹಳ್ಳಿಗಳು ಈ ದೇಶದ ನಿಜವಾದ ಆತ್ಮಗಳಿದ್ದು, ಇಲ್ಲಿಯ ಕೃಷಿಕ ಈ ಜಗತ್ತಿನ ಎರಡನೇ ನಿಜವಾದ ದೇವರಾಗಿದ್ದಾನೆ. ಇಂಥ ಪವಿತ್ರ ಹಳ್ಳಿಗಳ ಸಂವರ್ಧನೆ ಹಾಗೂ ಸಂರಕ್ಷಣೆಗೆ ಯುವಜನರು ಮುಂದೆ ಬರಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ| ಬಸವರಾಜ ಪಾಟೀಲ ಸೇಡಂ ಕರೆ ನೀಡಿದರು.
ನಗರದ ಡಾ| ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಗ್ರಾಮೀಣ ಯುವಕ-ಯುವತಿಯರಿಗಾಗಿ ಜರುಗಿದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ನಗರ ಹಾಗೂ ಪಟ್ಟಣಗಳ ನಿರ್ಮಾಣದಲ್ಲಿ ದೇಶದ ಸುಮಾರು ಮೂರು ಸಾವಿರ ಹಳ್ಳಿಗಳು ನಾಪತ್ತೆಯಾಗಿವೆ. ಅಲ್ಲಿಯ ಗ್ರಾಮೀಣ ಬದುಕು ಜತೆಗೆ ಅಲ್ಲಿಯ ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ, ಕುಂಬಾರಿಕೆ, ಬಡಿಗೆತನ ಎಲ್ಲವೂ ಮಾಯವಾಗಿದೆ. ಇದಕ್ಕೆಲ್ಲ ಇಂದಿನ ಸರ್ಕಾರದ ನಗರಿಕರಣ ವ್ಯವಸ್ಥೆಯೆ ಮೂಲ ಕಾರಣ ಎಂದರು.
ಗ್ರಾಮೀಣ ಪ್ರದೇಶದ ಜಮೀನುಗಳು ನಿಜವಾದ ಬಂಗಾರದ ಗಣಿ ಇದ್ದಂತೆ. ಅಲ್ಲಿಯ ಜಲ ಅಮೃತಕ್ಕೆ ಸಮಾನ. ಅಲ್ಲಿಯ ಆಹಾರ, ಸಾಮಾಜಿಕ ಬದುಕು ಸ್ವರ್ಗಮಯವಾದದ್ದು. ಅಲ್ಲಿಯ ಹಬ್ಬ ಹರಿದಿನಗಳು ಹಾಗೂ ಜಾತ್ರೆಗಳು ಇಂದಿಗೂ ರಾಷ್ಟ್ರೀಯ ಏಕತೆ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿವೆ ಎಂದರು.
ನಗರ ಹಾಗೂ ಮಹಾನಗರದಲ್ಲಿನ ಜನ ತಮ್ಮ ಅರ್ಥಹೀನ ನಗರಿಕರಣ ಬದುಕು ಮೊಟಕುಗೊಳಿಸಿ ಪುನಃ ತಮ್ಮ ಹಳ್ಳಿಗಳತ್ತ ಮುಖ ಮಾಡಿ ಕೃಷಿ ಹಾಗೂ ಗುಡಿ ಕೈಗಾರಿಕೆಗಳಿಗೆ ಮತ್ತು ಕೃಷಿಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ದೇಶದ ಆರ್ಥಿಕ ಭದ್ರತೆ ಹೆಚ್ಚಿಸಲು ಮುಂದೆ ಬರುವಂತೆ ಡಾ| ಸೇಡಂ ಸಲಹೆ ಮಾಡಿದರು.
ಶಾಸಕ ರಹೀಮ್ ಖಾನ್ ಮಾತನಾಡಿ, ಇಂದು ಗಾಂಧೀಜಿಯವರ ಕನಸು ಸಾಕಾರವಾಗಬೇಕಾದರೆ ಗ್ರಾಮಗಳ ಜೀರ್ಣೋದ್ಧಾರ ಅನಿವಾರ್ಯ. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆಂದು ನಗರ ಪ್ರದೇಶಗಳಿಗೆ ಕಳುಹಿಸದೇ ತಮ್ಮಲ್ಲಿರುವ ವ್ಯವಸ್ಥೆಯಲ್ಲಿಯೇ ಅವರಿಗೆ ಉತ್ತಮ ಶಿಕ್ಷಣ ನೀಡಿ, ಸ್ವಾಭಿಮಾನಿಗಳಾಗಿ ಬದುಕುವ ಕಲೆ ಕಲಿಸಿಕೊಡಬೇಕು. ಗ್ರಾಮೀಣ ಕಲೆ, ಸಾಹಿತ್ಯ, ಜನಪದ ಬದುಕು, ಸಂಸ್ಕೃತಿ ಹಾಗೂ ಸಂಪ್ರದಾಯ ಪುನರುಜ್ಜೀವನಗೊಳಿಸಲು ಪ್ರೋತ್ಸಾಹಿಸಬೇಕಿದೆ. ಅಲ್ಲಿಯ ಪಶುಪಾಲನೆ, ಹಾಗೂ ಕೃಷಿ ಚಟುವಟಿಕೆಗಳತ್ತ ಯುವಜನರು ಧಾವಿಸಬೇಕೆಂದು ಕರೆ ಕೊಟ್ಟರು.
ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಧ ಕ್ರೀಡಾಪಟು ಡಾ| ನ್ಯಾನು ಪಾಟೀಲ ಹಾಗೂ ಕೃಷ್ಣ ಸಂಪಗಾವಂಕರ್ ಮಹಾರಾಜ ಅವರು ವಿಶೇಷ ಉಪನ್ಯಾಸ ನೀಡಿದರು. ನಾಟ್ಯ ನೃತ್ಯಶ್ರಯ ಕಲಾ ತಂಡದ ಮಕ್ಕಳಿಂದ ಭರತನಾಟ್ಯ ನೃತ್ಯ ಪ್ರದರ್ಶನ ಜರುಗಿತು. ಕೃಷಿ ಕ್ಷೇತ್ರದಲ್ಲಿ ಗೋವಿಂದ ಮಹಾರಾಜ, ಆದರ್ಶ ಗ್ರಾಮಕ್ಕಾಗಿ ಶ್ರೀನಿವಾಸ ಗಣಪತರಾವ್ ಜೊನ್ನಿಕೆರೆ, ಸಂಗೀತ ಕ್ಷೇತ್ರದಲ್ಲಿ ವೀರ ಸಮರ್ಥ, ಗ್ರಾಮ ಅಭಿವೃದ್ಧಿಗಾಗಿ ಪಿಡಿಒ ಶರತ್ ಅಭಿಮಾನ, ಕೈಯಿಂದ ಉತ್ತಮ ಗೊಂಬೆಗಳು ಸೇರಿದಂತೆ ಅನೇಕ ಮೂರ್ತಿಗಳ ನಿರ್ಮಾತೃ ಮಣಿಭದ್ರ ಭಾಗವತಗಿರಿ ಅವರನ್ನು ಸನ್ಮಾನಿಸಲಾಯಿತು. ಜನಸೇವಾ ಶಾಲೆ ಹಿರಿಯ ಸದಸ್ಯ ಬಿ.ಎಸ್. ಕುದುರೆ, ಗ್ಲೋಬಲ್ ಸೈನಿಕ ಅಕಾಡೆಮಿ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೆನಪುರೆ, ಪುನಿತ್ ಸಾಳೆ ವೇದಿಕೆಯಲ್ಲಿದ್ದರು. ಸಂಘದ ಪ್ರಮುಖ ರೇವಣಸಿದ್ದ ಜಾಡರ್ ನಿರೂಪಿಸಿದರು. ಸಚಿನ್ ನಾಗುರೆ ವಂದಿಸಿದರು.
ಟಾಪ್ ನ್ಯೂಸ್
![1-sadsad](https://www.udayavani.com/wp-content/uploads/2024/07/1-sadsad-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-150x83.jpg)
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
![rape](https://www.udayavani.com/wp-content/uploads/2024/07/rape-150x100.jpg)
Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
![Chaluvarayaswamy](https://www.udayavani.com/wp-content/uploads/2024/06/Chaluvarayaswamy-150x84.jpg)
Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![Bidar; I was defeated for our selfishness says Bhagwanth Khuba](https://www.udayavani.com/wp-content/uploads/2024/06/khuba-150x83.jpg)
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
MUST WATCH
ಹೊಸ ಸೇರ್ಪಡೆ
![1-sadsad](https://www.udayavani.com/wp-content/uploads/2024/07/1-sadsad-150x84.jpg)
Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್
![koo](https://www.udayavani.com/wp-content/uploads/2024/07/koo-1-150x84.jpg)
Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.