ಪಾದಚಾರಿ ಮಹಿಳೆ ಸಾವು ಪ್ರಕರಣ: ಅಪರಾಧಿಗೆ ಆರು ತಿಂಗಳು ಶಿಕ್ಷೆ ಪ್ರಕಟ
Team Udayavani, Apr 5, 2022, 6:12 PM IST
ಭಾಲ್ಕಿ: ತಾಲೂಕಿನ ಶಿವಣಿ-ಕಾಕನಾಳ ರಸ್ತೆ ಮಾರ್ಗದಲ್ಲಿ ಮೋಟಾರ್ ಸೈಕಲ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಅಪರಾಧಿಗೆ 6 ತಿಂಗಳ ಶಿಕ್ಷೆ ಮತ್ತು 1 ಸಾವಿರ ರೂ ದಂಡ ವಿಧಿಸಿದೆ.
ರಫೀಕ್ ಗುಲಾಬಖಾನ್ ಶಿಕ್ಷೆಗೊಳಗಾದವ. 2017ರ ಆಗಸ್ಟ್ 24ರಂದು ಸಂಜೆ 7 ಗಂಟೆ ಸುಮಾರಿಗೆ ಶಿವಣಿ- ಕಾಕನಾಳ ರಸ್ತೆಯ ಶನಿ ಮಹಾತ್ಮ ಮಂದಿರ ಸಮೀಪ ವೈಜಿನಾಥ ಹೂಗಾರ್ ಮತ್ತು ಆತನ ಪತ್ನಿ ಮೈತ್ರಾ ಅವರು ಕೃಷಿ ಚಟುವಟಿಕೆ ಮುಗಿಸಿಕೊಂಡು ಮನೆಗೆ ಮರಳುತ್ತಿರುವ ಸಂದರ್ಭದಲ್ಲಿ ಕಾಕನಾಳ ಕಡೆಯಿಂದ ಬಂದ ಮೋಟಾರ್ ಸೈಕಲ್ ಮೈತ್ರಾ ಎಂಬ ಮಹಿಳೆಗೆ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೈತ್ರಾ ಅವರು ಚಿಕಿತ್ಸೆಗೆ ಸ್ಪಂದಿಸದೇ 2017ರ ಆಗಸ್ಟ್ 25ರಂದು ಮೃತಪಟ್ಟಿದ್ದರು. ಈ ಕುರಿತು ಮೃತ ಮಹಿಳೆಯ ಪತಿ ವೈಜಿನಾಥ ಹೂಗಾರ್ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವೃತ್ತ ನಿರೀಕ್ಷಕ ಎಲ್.ಆರ್.ಮಾಸಗುಪ್ಪಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್ಸಿ ನ್ಯಾಯಾಲಯ ನ್ಯಾಯಾಧಿಧೀಶ ಪ್ರಶಾಂತ ಬಾದವಾಡಗಿ ಅಪರಾಧಿಗೆ ಐಪಿಸಿ 279ರ ಅಡಿ 6 ತಿಂಗಳ ಸಾದಾ ಶಿಕ್ಷೆ, 1 ಸಾವಿರ ರೂ ದಂಡ, ಐಪಿಸಿ 304ರ ಅಡಿ 1 ವರ್ಷ ಸಾದಾ ಶಿಕ್ಷೆ ಮತ್ತು 5ಸಾವಿರ ರೂ ದಂಡ ಮತ್ತು ಮೋಟಾರ್ ವಾಹನ ಕಾಯ್ದೆಯ 187ರ ಅಡಿ 500 ರೂ ದಂಡ ತಪ್ಪಿದಲ್ಲಿ 3 ತಿಂಗಳು ಸಾದಾ ಶಿಕ್ಷೆ ವಿಧಿಸಿದ್ದಾರೆ. ಸಹಾಯಕ ಸರಕಾರಿ ಅಭಿಯೋಜಕ ಬಾಲಾಜಿ ಆದೆಪ್ಪ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
MUST WATCH
ಹೊಸ ಸೇರ್ಪಡೆ
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
Manipal: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿ ವಂಚನೆಗೊಳಗಾದ ಮಹಿಳೆ!
Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.