ಯೋಜನೆಗಳ ಅನುಷ್ಠಾನಕ್ಕೆ ಗಮನ ಹರಿಸಲು ಸೂಚನೆ

ಜನತೆಗೆ ಆರೋಗ್ಯ ಕಾರ್ಡ್‌ನ ಮಹತ್ವ ತಿಳಿಸಬೇಕು.

Team Udayavani, Mar 9, 2021, 6:57 PM IST

ಯೋಜನೆಗಳ ಅನುಷ್ಠಾನಕ್ಕೆ ಗಮನ ಹರಿಸಲು ಸೂಚನೆ

ಬೀದರ: ನಗರದ ಡಿಸಿ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ವಿವಿಧ ತಾಲೂಕುಗಳ ತಹಶೀಲ್ದಾರರು, ಕಂದಾಯ ಇಲಾಖೆಯ ಇತರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಹಲವಾರು ವಿಷಯ ಚರ್ಚಿಸಿದರು.

ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಟೇಲ್‌ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು, ಯೋಜನೆಗಳ ಅನುಷ್ಠಾನದಲ್ಲಿ ಇನ್ನೂ ಆಗಬೇಕಾದ ಪ್ರಗತಿ ಕುರಿತು ತಹಶೀಲ್ದಾರರಿಗೆ ಮನವರಿಕೆ ಮಾಡಿ, ಸಭೆಯಲ್ಲಿ ನಿರ್ದೇಶಿಸಿದಂತೆ ಕಾರ್ಯಪವೃತ್ತರಾಗಲು ಸೂಚಿಸಿದರು. ಕುಡಿವ ನೀರು ಸರಬರಾಜು, ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ, ಯುಡಿಐಟಿ ಕಾರ್ಡ್ ಗಳ ವಿತರಣೆ, ಸ್ಮಶಾನ ಭೂಮಿ ಗುರುತಿಸುವಿಕೆ ಸೇರಿದಂತೆ ಹತ್ತಾರು ಯೋಜನೆಗಳ ಅನುಷ್ಠಾನದ ವಾಸ್ತವ ಸ್ಥಿತಿಗತಿ ಬಗ್ಗೆ ಚರ್ಚಿಸಿದರು. ಕೆಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿಪಡಿಸಿದರು.

ಜಿಲ್ಲೆಯಲ್ಲಿ 634 ರೆವಿನ್ಯೂ ಹಳ್ಳಿಗಳ ಪೈಕಿ 590 ಹಳ್ಳಿಗಳಲ್ಲಿ ಸ್ಮಶಾನಭೂಮಿ ಇದೆ. 29 ಹಳ್ಳಿಗಳಲ್ಲಿ ಸ್ಮಶಾನ ಭೂಮಿ ಬೇಕು ಎಂದು ಔರಾದ ತಾಲೂಕಿನಿಂದ ಬೇಡಿಕೆ ಬಂದಿದೆ. ಪ್ರತಿಯೊಂದು ಹಳ್ಳಿಗೂ ಸ್ಮಶಾನ ಭೂಮಿ ಒದಗಿಸುವುದು ಕಂದಾಯ ಇಲಾಖೆ ಮಹತ್ವದ ಕೆಲಸ. ಯಾವ ಯಾವ ಕಡೆಗಳಲ್ಲಿ ಸ್ಮಶಾನಭೂಮಿ ಬೇಕಿದೆ ಎಂಬುದರ ಬಗ್ಗೆ ಕೂಡಲೇ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವುದನ್ನು ಆದ್ಯತೆ ಮೇರೆಗೆ ಮಾಡಬೇಕು.ಈಗಿರುವ ಸ್ಮಶಾನ ಭೂಮಿನಲ್ಲಿ ಮೂಲಕ ಸೌಕರ್ಯ ಕಲ್ಪಿಸಲು ಒತ್ತು ಕೊಡಬೇಕು ಎಂದು ಡಿಸಿ ತಹಶೀಲ್ದಾರರಿಗೆ ಸೂಚಿಸಿದರು.

ಜಿಲ್ಲೆಯ ಬಹಳಷ್ಟು ಅಂಗನವಾಡಿಗಳಲ್ಲಿ ಕಾಲ ಕಾಲಕ್ಕೆ ನೇಮಕಾತಿ ನಡೆಯುವುದು ಬಾಕಿ ಇದ್ದು, ಹೀಗಾದರೆ ಅಲ್ಲಿನ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲು ಸಾಧ್ಯವೆ? ಎಂದು ತಹಶೀಲ್ದಾರರಿಗೆ ಪ್ರಶ್ನಿಸಿದ ಡಿಸಿ, ಅಂಗನವಾಡಿ ಬಲಪಡಿಸುವ ನಿಟ್ಟಿನಲ್ಲಿ ಅಂಗನವಾಡಿಗಳಿಗೆ ಆಗಾಗ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಪೌಷ್ಟಿಕ ಆಹಾರ, ಮೊಟ್ಟೆ, ಮೊಳಕೆ ಕಾಳುಗಳ ವಿತರಣೆ ಪರಿಶೀಲಿಸಬೇಕು ಎಂದು ಸೂಚಿಸಿದರು.

ಆಯುಷ್ಮಾನ್‌ ಭಾರತ ಆರೋಗ್ಯ ಕಾರ್ಡ್‌ ಮತ್ತು 2017ರಿಂದಲೇ ಜಾರಿ ಬಂದಿರುವ ಯುಡಿಐಡಿ ಕಾರ್ಡ್‌ಗಳ ವಿತರಣೆ ಕಾರ್ಯ ಚುರುಕುಗೊಳಿಸಿ ನಿಗದಿಪಡಿಸಿದ ಗುರಿ ತಲುಪು ವಂತಾಗಬೇಕು. ಜನತೆಗೆ ಆರೋಗ್ಯ ಕಾರ್ಡ್‌ನ ಮಹತ್ವ ತಿಳಿಸಬೇಕು. ತಾಲೂಕು ಬೋರ್ಡ್‌ಗೆ ಕರೆದು ವಿಕಲಚೇತನರಿಗೆ ಯುಡಿಐಡಿ ಕಾರ್ಡ್‌ ವಿತರಣೆ ಕಾರ್ಯ ನಡೆಸಬೇಕು. ಜಿಲ್ಲೆಯಲ್ಲಿರುವ ಪಿಡಬ್ಲುಡಿ ಓಟರ್ಗಳನ್ನು ಗುರುತಿಸಿ ಅವರಿಗೂ ಯುಡಿಐಡಿ ಕಾರ್ಡ್‌ ನೀಡುವ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಕೆರೆ-ಬಾವಿ ಸಂರಕ್ಷಿಸಿ: ಹಲವಾರು ಕಡೆಗಳಲ್ಲಿ ಬಾಕಿ ಇರುವ ಆಧಾರ್‌ ಜೋಡಣೆ ಕಾರ್ಯ ಜಿಲ್ಲಾದ್ಯಂತ ಅಚ್ಚುಕಟ್ಟಾಗಿ ನಡೆಯಬೇಕು. ಜಿಲ್ಲೆಯ ಆಯಾ ಕಡೆ ನಾಡ ಕಚೇರಿಗಳ ನಿರ್ಮಾಣ ಕಾರ್ಯವೂ ಕಾಲಮಿತಿಯೊಳಗೆ ನಡೆಯಬೇಕು. ಅಂತರ್ಜಲ ಮೂಲವಾದ ಕೆರೆ, ಬಾವಿಗಳ ಸಂರಕ್ಷಣೆಗೆ ಜಿಲ್ಲಾಡಳಿತವು ಒತ್ತು ನೀಡಿದೆ. ಪ್ರತಿ ಬುಧವಾರ ಕೆರೆ ಸಂರಕ್ಷಣೆ ಸಭೆ ನಡೆಸಿ ಅಲ್ಲಿ ಹೇಳಿದಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿರುವ ಕೆರೆಗಳ ಸಂರಕ್ಷಣೆ ಮತ್ತು ಒತ್ತುವರಿ ತಡೆ ಕಾರ್ಯಕ್ಕೂ ತಾವುಗಳು ಗಮನ ಹರಿಸಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.

ಸರ್ಕಾರವು ಮ್ಯಾನ್ಯುವಲ್‌ ಸ್ಕಾವೆಂಜಿಂಗ್‌ ಪದ್ಧತಿ ನಿಷೇಧಿ ಸಿದೆ. ಯುಜಿಡಿ ಮ್ಯಾನ್‌ ಹೋಲ್‌ ಮತ್ತು ಸೆಪ್ಟಿಕ್‌ ಟ್ಯಾಂಕ್‌ಗಳನ್ನು ಕೆಲಸಗಾರರಿಂದ ಸ್ವತ್ಛಗೊಳಿಸುವುದು ಅಪರಾಧ. ಹೀಗಾಗಿ ಜಿಲ್ಲೆಯ ಯಾವ ಯಾವ ಕಡೆಗಳಲ್ಲಿ ಮ್ಯಾನ್ಯುವಲ್‌ ಸ್ಕಾವೆಂಜಿಂಗ್ಸ್‌ ಇದ್ದಾರೆ ಎಂಬುದನ್ನು ಗುರುತಿಸುವ ಕಾರ್ಯ ಆದ್ಯತೆ ಮೇರೆಗೆ ಮಾಡಬೇಕು. ಯುಜಿಡಿ ಮ್ಯಾನ್‌ ಹೋಲ್‌ ಮತ್ತು ಸೆಪ್ಟಿಕ್‌ ಟ್ಯಾಂಕ್‌ ಸ್ವತ್ಛಗೊಳಿಸಲು ಅನುಕೂಲವಾಗುವಂತೆ ವಿಳಂಬ ಮಾಡದೇ ಜಟ್ಟಿಂಗ್‌ ಯಂತ್ರಗಳ ಖರೀದಿಗೆ ಒತ್ತು ಕೊಡಬೇಕು. ಕಚೇರಿಗೆ ಇನ್ನಾವುದೇ ಯಂತ್ರಗಳ ಖರೀದಿ ಅವಶ್ಯವಿದ್ದರೆ ಮಾಡಬೇಕು.
ರಾಮಚಂದ್ರನ್‌ ಆರ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.