ಕುಮಾರಸ್ವಾಮಿ- ಸುಮಲತಾ ‘ಪದಬಳಕೆ’ಗೆ ಸಚಿವ ಈಶ್ವರಪ್ಪ ಅಸಮಾಧಾನ
Team Udayavani, Jul 8, 2021, 1:56 PM IST
ಬೀದರ್ : ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ಮಾತಿನ ಸಮರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಬೀದರ್ ನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಬ್ಬರ ನಡುವಿನ ಸಮರಕ್ಕೆ ಯಾವ ಪದ ಬಳಸಬೇಕು ನನಗೂ ಗೊತ್ತಾಗುತ್ತಿಲ್ಲ. ಹೀಗಾಗಿ ಇಬ್ಬರು ಬಳಸುವ ಪದದಿಂದಾಗಿ ನನಗೆ ತುಂಬಾ ನೋವಾಗಿದೆ. ಇಬ್ಬರೂ ಏನು ಬೇಕಾದರೂ ಚರ್ಚೆ ಮಾಡಲಿ ಅದರೆ, ನೋಡಿಕೊಂಡು ಪದಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.
ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಮಂತ್ರಿ ಸ್ಥಾನ ಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಮೋದಿ ದೇಶಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ದೇಶದ ಇತಿಹಾಸದಲ್ಲೇ ಐಎಎಸ್, ಐಪಿಎಸ್, ದಲಿತ, ಹಿಂದುಳಿದ ವರ್ಗ ಸೇರಿದಂತೆ ಎಲ್ಲರಿಗೂ ಮಂತ್ರಿ ಮಂಡಲದಲ್ಲಿ ಮೋದಿ ಅವಕಾಶ ನೀಡಿದ್ದಾರೆ. ಕರ್ನಾಟಕ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ ರಾಜ್ಯದ ಆರು ಜನಕ್ಕೆ ಅವಕಾಶ ನೀಡಿದ್ದು, ರಾಜ್ಯದ ಎಲ್ಲಾ ಭಾಗಗಳಿಗೆ ಮೋದಿ ಕೊಡುಗೆ ನೀಡಿದ್ದು ವಿಶೇಷವಾಗಿದೆ. ಹೀಗಾಗಿ ನಾನು ರಾಜ್ಯದ ಜನರ ಪರವಾಗಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೆನೆ ಎಂದರು.
ಇದನ್ನೂ ಓದಿ:ರಾಜ್ಯದಿಂದ ನಾಲ್ವರು ಕೇಂದ್ರ ಸಚಿವರಾದರೂ ಯಾವುದೇ ಪ್ರಯೋಜನವಿಲ್ಲ: ಸತೀಶ್ ಜಾರಕಿಹೊಳಿ
ಇದೇ ವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಕೂಗಿನ ಬಗ್ಗೆ ಮಾತನಾಡಿದ ಈಶ್ವರಪ್ಪ, ಬಿಜೆಪಿಗೆ ಹೇಳೋರು ಕೇಳೋರು ಇದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿ ಯಾರೂ ಇಲ್ಲ. ಅದಕ್ಕಾಗಿ ಕಾಂಗ್ರೆಸ್ ನಲ್ಲಿ ನಾನೇ ಸಿಎಂ, ನಾನೇ ಅಭ್ಯರ್ಥಿ ಎಂದು ಹೇಳಬಹುದು. ಆದರೆ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೈ ನಾಯಕರ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.