ಜನಪದ ಗ್ರಾಮ ಸಮುದಾಯದ ಜ್ಞಾನ


Team Udayavani, Feb 4, 2020, 12:30 PM IST

bidar-tdy-1

ಬೀದರ: ಗ್ರಾಮ ಸಮುದಾಯದ ಜ್ಞಾನವೇ ಜನಪದ ಜ್ಞಾನ. ನಗರದ ಜನರಲ್ಲಿ ಬರೀ ಪುಸ್ತಕದ ಜ್ಞಾನವಿದ್ದರೆ, ಹಳ್ಳಿ ಜನರಲ್ಲಿ ಲೋಕಜ್ಞಾನವಿರುತ್ತದೆ. ಹಳ್ಳಿಯ ಜಾನಪದ ಸಂಸ್ಕೃತಿಯ ಜನರನ್ನು ಯಾವತ್ತೂ ದಡ್ಡರು ಎಂದು ಭಾವಿಸಬಾರದು ಎಂದು ಜಾನಪದ ಪರಿಷತ್ತಿನ ವಿಭಾಗೀಯ ಅಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ ಹೇಳಿದರು.

ನಗರದ ಚಂದ್ರಪ್ಪಾ ಗೌರಶೆಟ್ಟಿ ಕಾಲೇಜಿನಲ್ಲಿ ನಗರ ಜಾನಪದ ಪರಿಷತ್ತಿನಿಂದ ಹಮ್ಮಿಕೊಂಡಿದ್ದ ಶಾಲಾ-ಕಾಲೇಜಿಗೊಂದು ಜನಪದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ವಿವಿಧರೋಗಗಳಿಗೆ ಇಂದಿಗೂ ಜನಪದ ಔಷಧ ನೀಡಿ ಪ್ರಾಣ ಕಾಪಾಡುತ್ತಾರೆ. ಇವರಿಗೆ ಈ ವೈದ್ಯಕೀಯ ಜ್ಞಾನ ನೀಡಿದ್ದು ಯಾವುದೇ ಮೆಡಿಕಲ್‌ ಕಾಲೇಜು ಅಲ್ಲ. ಬದಲಾಗಿ ಸಮುದಾಯದ ಹಿರಿಯರು ನೀಡಿದ ಜ್ಞಾನ. ಇಂತಹ ಜ್ಞಾನ ಯಾವುದೇ ಪುಸ್ತಕದಲ್ಲಿ ಸಿಗುವುದಿಲ್ಲ. ಆದ್ದರಿಂದ ಜನಪದ ಜ್ಞಾನವನ್ನು ಇಂದಿನ ಮಕ್ಕಳು ಅಳವಡಿಸಿಕೊಂಡು ಮುಂದಿನ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಜಾನಪದದಲ್ಲಿ ವಿಡಂಬನೆ, ಹಾಸ್ಯ, ನೈತಿಕ ಮೌಲ್ಯ, ಮಾನವೀಯ ಮೌಲ್ಯ ಹಾಗೂ ಪರಸ್ಪರ ಪ್ರೀತಿ-ವಿಶ್ವಾಸದ ಅಂಶ ಇರುತ್ತವೆ. ಜನಪದ ಒಡಪು, ಹಾಡು, ಕಥೆ, ನಾಟಕ ಮತ್ತು ನೃತ್ಯದಲ್ಲಿ ಪರಸ್ಪರ ಬಾಂಧವ್ಯ ಗಟ್ಟಿಗೊಳಿಸುವ ತಂತ್ರಗಾರಿಕೆ ಇದೆ ಎಂದು ತಿಳಿಸಿದರು.

ಚಿದಂಬರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಚನ್ನಬಸಪ್ಪ ಹಾಲಹಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಸಂಸ್ಕೃತಿಯನ್ನು ನಿಜವಾಗಿಯೂ ಎತ್ತಿ ಹಿಡಿದ ಕೀರ್ತಿ ಜನಪದರಿಗೆ ಸಲ್ಲುತ್ತದೆ. ಅತ್ಯಂತ ಶ್ರೀಮಂತ ಸಾಹಿತ್ಯ ಜನಪದವಾಗಿದೆ. ಆದರೆ, ದುರ್ದೈವ ನಮ್ಮ ಜನಪದ ಸಾಹಿತ್ಯಕ್ಕೆ ಹೆಚ್ಚು ಪ್ರೋತ್ಸಾಹ ಮತ್ತು ರಾಜಾಶ್ರಯ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲ ರಮೇಶಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸೂರ್ಯಕಾಂತ ಐನಾಪೂರ, ಈರಣ್ಣಾ ಕೆ. ಗೌತಮ ಭೋಸಲೆ, ಕೆ. ಚಂದ್ರಕಲಾ, ಅಂಜಲಿ, ಶಿವಪುತ್ರ ಸಿನ್ನೂರ, ಧನರಾಜ ಆನೆಕಲೆ, ರಘುನಾಥ ಪಾಂಚಾಳ, ವೈಜನಾಥ ಚಿಮಕೂರೆ, ಮಹಾರುದ್ರ ಡಾಕುಳಗೆ, ಸಿದ್ದು ಫುಲಾರಿ, ಕೆ. ಪರ್ವತರೆಡ್ಡಿ ಇದ್ದರು.ಪರಿಷತ್ತಿನ ನಿರ್ದೇಶಕ ಬಸವರಾಜ ಹೆಗ್ಗೆ ಸ್ವಾಗತಿಸಿದರು. ಡಾ| ಚಂದ್ರಪ್ಪ ಭತಮುರ್ಗೆ ನಿರೂಪಿಸಿದರು. ನಿರ್ದೇಶಕ ಶ್ರೀನಿವಾಸರೆಡ್ಡಿ ಚಿಲ್ಲರ್ಗಿ ವಂದಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.