ಜನತಾ ಪ್ರಜಾಪ್ರಭುತ್ವ ಸ್ಥಾಪನೆಯಾಗಲಿ


Team Udayavani, Nov 25, 2021, 2:21 PM IST

21democracy

ದೇವದುರ್ಗ: ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ತಾರತಮ್ಯ, ಬಡತನ ನಿವಾರಣೆ ದೂರವಾಗಲು ದೇಶದಲ್ಲಿ ಜನತಾ ಪ್ರಜಾಪ್ರಭುತ್ವ ರಂಗ ಸ್ಥಾಪನೆ ಆಗಬೇಕು ಎಂದು ಸಿಪಿಐಎಂ ಸಂಘಟನೆ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಹೇಳಿದರು.

ತಾಲೂಕಿನ ಜಾಲಹಳ್ಳಿ ಗ್ರಾಮದ ಪೊಲೀಸ್‌ ಠಾಣೆ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಜಿಲ್ಲಾ 13ನೇ ಸಿಪಿಐಎಂ ಸಮ್ಮೇಳನ ಬಹಿರಂಗ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರಿಗೆ, ಕೂಲಿ ಕಾರ್ಮಿಕರಿಗೆ, ಯುವಕರಿಗೆ ಉದ್ಯೋಗ ಶುಭ ದಿನ ತರುತ್ತೇವೆ ಎಂದು ಅಧಿಕಾರಕ್ಕೆ ಬಂದು ಏಳು ವರ್ಷವಾದರೂ ಸುಳ್ಳಿನ ಭರವಸೆಯಲ್ಲೇ ಕಾಲಹರಣ ಮಾಡಲಾಗುತ್ತಿದೆ. ಹಸಿವು, ಅಪೌಷ್ಟಿಕತೆಯಿಂದ ಐದು ಸೆಕೆಂಡ್‌ಗೆ 12 ಜನರು ಸಾವನ್ನಪುತ್ತಿದ್ದಾರೆ. ಕೇಂದ್ರ ಸರಕಾರಕ್ಕೆ 35ರಿಂದ 40 ಲಕ್ಷ ಕೋಟಿ, ರಾಜ್ಯ ಸರಕಾರಕ್ಕೆ 2 ಲಕ್ಷ ಕೋಟಿ ರೂ. ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಆದರೂ ದೇಶದಲ್ಲಿ ಹಸಿವು, ಅಪೌಷ್ಟಿಕತೆ, ಬಡತನ ನಿವಾರಣೆ ಆಗುತ್ತಿಲ್ಲ ಎಂದು ದೂರಿದರು.

107 ದೇಶಗಳಲ್ಲಿ ಅಪೌಷ್ಟಿಕತೆ ಹೆಚ್ಚಿದ್ದು, ಅದರಲ್ಲಿ ಭಾರತ್‌ 101ನೇ ಸ್ಥಾನದಲ್ಲಿದೆ. ಬಿಸಿಯೂಟ, ಅಸಂಘಟಿತರು, ಕೂಲಿ ಕಾರ್ಮಿಕರಿಗೆ ದಿನಕ್ಕೆ 750 ರೂ. ವೇತನ ಸೌಲಭ್ಯ ಜಾರಿಗೆ ತರಬೇಕು. ರೈತರು ಬೆಳೆದ ಬೆಳೆಗಳಿಗೆ ವೆಚ್ಚ ಭರಿಸದಷ್ಟು ಬೆಂಬಲ ಬೆಲೆ ನೀಡಬೇಕು. ಖರೀದಿ ಕೇಂದ್ರಗಳು ಆರಂಭಿಸಬೇಕು. ಈ ದೇಶದ ಬೆನ್ನಲು ರೈತರು ಎಂಬುವುದು ಮಾತಿಗೆ ಸಿಮೀತವಾಗದಂತೆ ಅವರ ಕಷ್ಟ ನಷ್ಟಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸ್ಪಂದಿಸಬೇಕು. ಜನತಾ ಪ್ರಜಾಪ್ರಭುತ್ವ ರಂಗ ದೇಶದಲ್ಲಿ ಸ್ಥಾಪನೆಗೊಂಡಾಗ ಮಾತ್ರ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು.

ಜನರಿಂದ ಬರುವಂತ ತೆರಿಗೆ ಹಣದಲ್ಲಿ ಬಡವರ ಹಸಿವು ನೀಗಿಸಲು ಸಾಧ್ಯವಾಗುತ್ತಿಲ್ಲ. ಅಪೌಷ್ಟಿಕತೆಯಿಂದ ಸಾವಿನ ಸಂಖ್ಯೆ ದೇಶದಲ್ಲಿ ಹೆಚ್ಚಿದೆ ಎಂದು ಕಳವಳ ವ್ಯಕ್ತಪಡಿಸಿದರು. ಭ್ರಷ್ಟಾಚಾರ ದೇಶ ಮುಕ್ತಿ ಮಾಡುತ್ತೇನೆ. ಕಪ್ಪು ಹಣ ತಂದು ಬಡವರ ಬ್ಯಾಂಕ್‌ ಖಾತೆಗೆ ಹಣ ಹಾಕುತ್ತೇನೆ ಎಂದು ಹೇಳಿದ ಮೋದಿ ಸರಕಾರ ಮಾತು ತಪ್ಪಿದೆ ಎಂದು ದೂರಿದರು.

ಸಮ್ಮೇಳನ ಮೆರವಣಿಗೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಿಂದ ರಂಗನಾಥ ದೇವಸ್ಥಾನ, ಮಹರ್ಷಿ ವಾಲ್ಮೀಕಿ ವೃತ್ತ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ ಮಾರ್ಗವಾಗಿ ಡೊಳ್ಳು ಕುಣಿತ, ಘೋಷಣೆಗಳು ಕೂಗುತ್ತ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ನಿತ್ಯನಂದ ಸಾಮಿ, ಎಚ್‌.ಪದ್ಮಾ, ಕರಿಯಪ್ಪ ಅಚ್ಚಾಳ್ಳಿ, ಶೇಕ್ಷಾಖಾದ್ರಿ, ಗಿರಿಯಪ್ಪ ಪೂಜಾರಿ, ನರಸಣ್ಣ ನಾಯಕ, ಶಬ್ಬೀರ ಜಾಲಹಳ್ಳಿ, ಡಿ.ಎಸ್‌. ಶರಣಬಸವ, ಮಹಾಲಿಂಗ ದೊಡ್ಡಮನಿ, ಶೇಖಮ್ಮ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.